ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ 2025: ಆಫ್ರಿಕಾಗೆ ಸುಲಭ ತುತ್ತಾದ ಅಫ್ಗನ್‌

ಕರಾಚಿ: ಬ್ಯಾಟರ್‌ ಮತ್ತು ಬೌಲರ್‌ಗಳ ಅತ್ಯತ್ತಮ ಪ್ರದರ್ಶನದಿಂದ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ʼಬಿʼ ಗುಂಪಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಅಫ್ಗಾನಿಸ್ತಾನದ ವಿರುದ್ಧ 107 ರನ್‌ಗಳ ಭರ್ಜರಿ ಜಯ ದಾಖಲಿಸಿದೆ.

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಆಫ್ರಿಕಾದ ನಾಯಕ ಬವುಮಾನ ನಿರ್ಧಾರಕ್ಕೆ ತಕ್ಕಂತೆ ಬ್ಯಾಟರ್‌ಗಳು ಬ್ಯಾಟ್‌ ಬೀಸಿದರು.

ಆಫ್ರಿಕಾದ ಆರಂಭಿಕ ಆಟಗಾರ ರಯಾನ್‌ ರಿಕಲ್ಟನ್‌ ಅವರ ಭರ್ಜರಿ ಶತಕದ 103(106) ಜೊತೆಗೆ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾದ ನಾಯಕ ತೆಂಬಾ ಬವುಮಾ 58(76), ರಸಿ ವಾನ್‌ಡರ್‌ ಡಸೆ 52(46), ಹಾಗೂ ಏಡನ್‌ ಮರ್ಕರಂ 52(36) ಅವರ ಅರ್ಧಶತಕಗಳ ಮೂಲಕ 50 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 315 ರನ್‌ಗಳ ಸವಾಲಿನ ಮೊತ್ತ ಕಲೆ ಹಾಕಿದರು.

ಸವಾಲಿನ ಗುರಿ ಬೆನ್ನತ್ತಿದ ಅಫ್ಗಾನಿಸ್ಥಾನ ತಂಡಕ್ಕೆ ಮಧ್ಯಮ ಕ್ರಮಾಂಕದ ಬ್ಯಾಟರ್‌ ರಹಮತ್‌ ಶಾ 90(92) ಅವರ ಅರ್ಧಶತಕ ಹೊರತುಪಡಿಸಿದರೆ ಉಳಿದ ಯಾವ ಬ್ಯಾಟರ್‌ ಕೂಡ ಆಫ್ರಿಕಾದ ಬೌಲಿಂಗ್‌ ದಾಳಿ ಎದುರಿಸಲು ವಿಫಲವಾದರು.

ಅಂತಿಮವಾಗಿ ಅಫ್ಗಾನಿಸ್ತಾನ 43.3 ಓವರ್‌ಗಳಲ್ಲಿ 208 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ 107ರನ್‌ಗಳ ಸೊಲೊಪ್ಪಿಕೊಂಡಿತ್ತು.

ದಕ್ಷಿಣ ಆಫ್ರಿಕಾ ಪರ ಉತ್ತಮ ದಾಳಿ ನಡೆಸಿದ ಕಗಿಸೊ ರಬಾಡ 3 ವಿಕೆಟ್‌, ಲುಂಗಿ ನಿಗಡಿ ಹಾಗೂ ಮಲ್ಡರ್‌ ತಲಾ 2 ವಿಕೆಟ್‌ ಪಡೆದರೆ, ಮಾರ್ಕೊ ಯಾನ್ಸನ್‌ ಹಾಗೂ ಕೇಶವ್‌ ಮಹಾರಾಜ್‌ ತಲಾ 1 ವಿಕೆಟ್‌ ಪಡೆದರು

 

ಆಂದೋಲನ ಡೆಸ್ಕ್

Recent Posts

ನಾಳೆ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಟಾಕ್ಸಿಕ್‌ ಚಿತ್ರದ 2ನೇ ಟೀಸರ್‌ ರಿಲೀಸ್‌

ಬೆಂಗಳೂರು: ಕೆಜಿಎಫ್‌-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ…

1 hour ago

ದಲಿತರು ಯಾಕೆ ಮುಖ್ಯಮಂತ್ರಿಯಾಗಬಾರದು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.…

2 hours ago

ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…

2 hours ago

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ಸಿಗ್ನಲ್:‌ ಅನ್ನದಾತರ ಆಕ್ರೋಶ

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.…

2 hours ago

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…

2 hours ago

ರಾಜ್ಯದಲ್ಲಿ ಹೆಚ್ಚಿದ ಗರಿಷ್ಠ ತಾಪಮಾನ: ಚರ್ಮದ ಬಗ್ಗೆ ಇರಲಿ ಎಚ್ಚರ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…

3 hours ago