ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ 2025: ಆಫ್ರಿಕಾಗೆ ಸುಲಭ ತುತ್ತಾದ ಅಫ್ಗನ್‌

ಕರಾಚಿ: ಬ್ಯಾಟರ್‌ ಮತ್ತು ಬೌಲರ್‌ಗಳ ಅತ್ಯತ್ತಮ ಪ್ರದರ್ಶನದಿಂದ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ʼಬಿʼ ಗುಂಪಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಅಫ್ಗಾನಿಸ್ತಾನದ ವಿರುದ್ಧ 107 ರನ್‌ಗಳ ಭರ್ಜರಿ ಜಯ ದಾಖಲಿಸಿದೆ.

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಆಫ್ರಿಕಾದ ನಾಯಕ ಬವುಮಾನ ನಿರ್ಧಾರಕ್ಕೆ ತಕ್ಕಂತೆ ಬ್ಯಾಟರ್‌ಗಳು ಬ್ಯಾಟ್‌ ಬೀಸಿದರು.

ಆಫ್ರಿಕಾದ ಆರಂಭಿಕ ಆಟಗಾರ ರಯಾನ್‌ ರಿಕಲ್ಟನ್‌ ಅವರ ಭರ್ಜರಿ ಶತಕದ 103(106) ಜೊತೆಗೆ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾದ ನಾಯಕ ತೆಂಬಾ ಬವುಮಾ 58(76), ರಸಿ ವಾನ್‌ಡರ್‌ ಡಸೆ 52(46), ಹಾಗೂ ಏಡನ್‌ ಮರ್ಕರಂ 52(36) ಅವರ ಅರ್ಧಶತಕಗಳ ಮೂಲಕ 50 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 315 ರನ್‌ಗಳ ಸವಾಲಿನ ಮೊತ್ತ ಕಲೆ ಹಾಕಿದರು.

ಸವಾಲಿನ ಗುರಿ ಬೆನ್ನತ್ತಿದ ಅಫ್ಗಾನಿಸ್ಥಾನ ತಂಡಕ್ಕೆ ಮಧ್ಯಮ ಕ್ರಮಾಂಕದ ಬ್ಯಾಟರ್‌ ರಹಮತ್‌ ಶಾ 90(92) ಅವರ ಅರ್ಧಶತಕ ಹೊರತುಪಡಿಸಿದರೆ ಉಳಿದ ಯಾವ ಬ್ಯಾಟರ್‌ ಕೂಡ ಆಫ್ರಿಕಾದ ಬೌಲಿಂಗ್‌ ದಾಳಿ ಎದುರಿಸಲು ವಿಫಲವಾದರು.

ಅಂತಿಮವಾಗಿ ಅಫ್ಗಾನಿಸ್ತಾನ 43.3 ಓವರ್‌ಗಳಲ್ಲಿ 208 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ 107ರನ್‌ಗಳ ಸೊಲೊಪ್ಪಿಕೊಂಡಿತ್ತು.

ದಕ್ಷಿಣ ಆಫ್ರಿಕಾ ಪರ ಉತ್ತಮ ದಾಳಿ ನಡೆಸಿದ ಕಗಿಸೊ ರಬಾಡ 3 ವಿಕೆಟ್‌, ಲುಂಗಿ ನಿಗಡಿ ಹಾಗೂ ಮಲ್ಡರ್‌ ತಲಾ 2 ವಿಕೆಟ್‌ ಪಡೆದರೆ, ಮಾರ್ಕೊ ಯಾನ್ಸನ್‌ ಹಾಗೂ ಕೇಶವ್‌ ಮಹಾರಾಜ್‌ ತಲಾ 1 ವಿಕೆಟ್‌ ಪಡೆದರು

 

ಆಂದೋಲನ ಡೆಸ್ಕ್

Recent Posts

ಹೊಸ ವರ್ಷ ಆಚರಣೆಗೆ ಜನರ ಪ್ರವಾಸ: ಕರ್ನಾಟಕದ ಪ್ರವಾಸಿ ತಾಣಗಳಲ್ಲಿ ಜನಜಂಗುಳಿ

ಬೆಂಗಳೂರು: ಹೊಸ ವರ್ಷದ ಆಚರಣೆಗೆ ಜನ ಪ್ರವಾಸಿ ತಾಣಗಳತ್ತ ಮುಖ ಮಾಡಿದ್ದಾರೆ. ಕರ್ನಾಟಕದ ಪ್ರವಾಸಿ ತಾಣಗಳು ಜನ ಜಂಗುಳಿಯಿಂದ ತುಂಬಿ…

19 mins ago

ಅರಮನೆ ಬಳಿ ಹೀಲಿಯಂ ಸ್ಫೋಟ ಪ್ರಕರಣ: ಎನ್‌ಐಎ ತನಿಖೆಗೆ ಪ್ರಮೋದ್‌ ಮುತಾಲಿಕ್‌ ಆಗ್ರಹ

ಮೈಸೂರು: ಅರಮನೆ ಬಳಿ ಹೀಲಿಯಂ ಸಿಲಿಂಡರ್‌ ಸ್ಫೋಟ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಪ್ರತಿಕ್ರಿಯೆ ನೀಡಿದ್ದು,…

1 hour ago

ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ನ್ಯಾಯಾಲಯದ ಆದೇಶವನ್ನು ಮೀರಿ…

2 hours ago

ಹೊಗೇನಕಲ್ ಜಲಪಾತ ವೀಕ್ಷಣೆಗೆ ಪ್ರವಾಸಿಗರ ಲಗ್ಗೆ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಜನತೆ

ಹನೂರು: ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಬರುತ್ತಿದ್ದು, ಇಂದು…

2 hours ago

ಕಾಡುಹಂದಿ ಬೇಟೆಗಾಗಿ ಮನೆಯಲ್ಲಿ ಸಂಗ್ರಹಿಸಿದ್ದ ಸಿಡಿಮದ್ದು ಸಿಡಿದು ವ್ಯಕ್ತಿಗೆ ಗಂಭೀರ ಗಾಯ

ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್‌…

2 hours ago

ಓದುಗರ ಪತ್ರ:  ತಡೆಗೋಡೆ ನಿರ್ಮಿಸಿ

ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು…

3 hours ago