ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ 2025: ಆಫ್ರಿಕಾಗೆ ಸುಲಭ ತುತ್ತಾದ ಅಫ್ಗನ್‌

ಕರಾಚಿ: ಬ್ಯಾಟರ್‌ ಮತ್ತು ಬೌಲರ್‌ಗಳ ಅತ್ಯತ್ತಮ ಪ್ರದರ್ಶನದಿಂದ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ʼಬಿʼ ಗುಂಪಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಅಫ್ಗಾನಿಸ್ತಾನದ ವಿರುದ್ಧ 107 ರನ್‌ಗಳ ಭರ್ಜರಿ ಜಯ ದಾಖಲಿಸಿದೆ.

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಆಫ್ರಿಕಾದ ನಾಯಕ ಬವುಮಾನ ನಿರ್ಧಾರಕ್ಕೆ ತಕ್ಕಂತೆ ಬ್ಯಾಟರ್‌ಗಳು ಬ್ಯಾಟ್‌ ಬೀಸಿದರು.

ಆಫ್ರಿಕಾದ ಆರಂಭಿಕ ಆಟಗಾರ ರಯಾನ್‌ ರಿಕಲ್ಟನ್‌ ಅವರ ಭರ್ಜರಿ ಶತಕದ 103(106) ಜೊತೆಗೆ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾದ ನಾಯಕ ತೆಂಬಾ ಬವುಮಾ 58(76), ರಸಿ ವಾನ್‌ಡರ್‌ ಡಸೆ 52(46), ಹಾಗೂ ಏಡನ್‌ ಮರ್ಕರಂ 52(36) ಅವರ ಅರ್ಧಶತಕಗಳ ಮೂಲಕ 50 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 315 ರನ್‌ಗಳ ಸವಾಲಿನ ಮೊತ್ತ ಕಲೆ ಹಾಕಿದರು.

ಸವಾಲಿನ ಗುರಿ ಬೆನ್ನತ್ತಿದ ಅಫ್ಗಾನಿಸ್ಥಾನ ತಂಡಕ್ಕೆ ಮಧ್ಯಮ ಕ್ರಮಾಂಕದ ಬ್ಯಾಟರ್‌ ರಹಮತ್‌ ಶಾ 90(92) ಅವರ ಅರ್ಧಶತಕ ಹೊರತುಪಡಿಸಿದರೆ ಉಳಿದ ಯಾವ ಬ್ಯಾಟರ್‌ ಕೂಡ ಆಫ್ರಿಕಾದ ಬೌಲಿಂಗ್‌ ದಾಳಿ ಎದುರಿಸಲು ವಿಫಲವಾದರು.

ಅಂತಿಮವಾಗಿ ಅಫ್ಗಾನಿಸ್ತಾನ 43.3 ಓವರ್‌ಗಳಲ್ಲಿ 208 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ 107ರನ್‌ಗಳ ಸೊಲೊಪ್ಪಿಕೊಂಡಿತ್ತು.

ದಕ್ಷಿಣ ಆಫ್ರಿಕಾ ಪರ ಉತ್ತಮ ದಾಳಿ ನಡೆಸಿದ ಕಗಿಸೊ ರಬಾಡ 3 ವಿಕೆಟ್‌, ಲುಂಗಿ ನಿಗಡಿ ಹಾಗೂ ಮಲ್ಡರ್‌ ತಲಾ 2 ವಿಕೆಟ್‌ ಪಡೆದರೆ, ಮಾರ್ಕೊ ಯಾನ್ಸನ್‌ ಹಾಗೂ ಕೇಶವ್‌ ಮಹಾರಾಜ್‌ ತಲಾ 1 ವಿಕೆಟ್‌ ಪಡೆದರು

 

ಆಂದೋಲನ ಡೆಸ್ಕ್

Recent Posts

SSLC RESULTS | ಈ ಬಾರಿಯೂ ಬಾಲಕಿಯರೇ ಮೇಲುಗೈ, ಶೇ.96.18 ವಿದ್ಯಾರ್ಥಿನಿಯರ್‌ ಪಾಸ್‌

ಬೆಂಗಳೂರು : 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ…

17 mins ago

SSLC RESULTS | ದಕ್ಷಿಣ ಕನ್ನಡ ರಾಜ್ಯಕ್ಕೆ ಪ್ರಥಮ, ಕಲಬುರಗಿಗೆ ಕೊನೆ ಸ್ಥಾನ

ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.…

35 mins ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಬೆಂಗಳೂರು : 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…

45 mins ago

ಬರಿದಾಗುತ್ತಿರುವ ಕಪಿಲೆಯ ಒಡಲಿಗೆ ಕೊಳಚೆ ನೀರು

ಕೈಗಾರಿಕೆಗಳ ತ್ಯಾಜ್ಯ, ಒಳಚರಂಡಿ ನೀರು ಸೇರಿ ಸ್ನಾನಘಟ್ಟದ ನೀರು ಕಲ್ಮಶ, ಸ್ನಾನ ಮಾಡುವ ಭಕ್ತರಿಗೆ ರೋಗದ ಭೀತಿ ಎಸ್.ಎಸ್.ಭಟ್ ನಂಜನಗೂಡು…

1 hour ago

ಕಾರುಗಳ ಮುಖಾಮುಖಿ ಡಿಕ್ಕಿ : ಇಬ್ಬರು ಸಾವು

ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ…

1 hour ago

ಕೆ.ಆರ್.ನಗರ | ವಿದ್ಯುತ್‌ ಸ್ಪರ್ಶದಿಂದ ಇಬ್ಬರು ದುರ್ಮರಣ

ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ  ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ…

2 hours ago