ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ 2025: ಆಫ್ರಿಕಾಗೆ ಸುಲಭ ತುತ್ತಾದ ಅಫ್ಗನ್‌

ಕರಾಚಿ: ಬ್ಯಾಟರ್‌ ಮತ್ತು ಬೌಲರ್‌ಗಳ ಅತ್ಯತ್ತಮ ಪ್ರದರ್ಶನದಿಂದ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ʼಬಿʼ ಗುಂಪಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಅಫ್ಗಾನಿಸ್ತಾನದ ವಿರುದ್ಧ 107 ರನ್‌ಗಳ ಭರ್ಜರಿ ಜಯ ದಾಖಲಿಸಿದೆ.

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಆಫ್ರಿಕಾದ ನಾಯಕ ಬವುಮಾನ ನಿರ್ಧಾರಕ್ಕೆ ತಕ್ಕಂತೆ ಬ್ಯಾಟರ್‌ಗಳು ಬ್ಯಾಟ್‌ ಬೀಸಿದರು.

ಆಫ್ರಿಕಾದ ಆರಂಭಿಕ ಆಟಗಾರ ರಯಾನ್‌ ರಿಕಲ್ಟನ್‌ ಅವರ ಭರ್ಜರಿ ಶತಕದ 103(106) ಜೊತೆಗೆ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾದ ನಾಯಕ ತೆಂಬಾ ಬವುಮಾ 58(76), ರಸಿ ವಾನ್‌ಡರ್‌ ಡಸೆ 52(46), ಹಾಗೂ ಏಡನ್‌ ಮರ್ಕರಂ 52(36) ಅವರ ಅರ್ಧಶತಕಗಳ ಮೂಲಕ 50 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 315 ರನ್‌ಗಳ ಸವಾಲಿನ ಮೊತ್ತ ಕಲೆ ಹಾಕಿದರು.

ಸವಾಲಿನ ಗುರಿ ಬೆನ್ನತ್ತಿದ ಅಫ್ಗಾನಿಸ್ಥಾನ ತಂಡಕ್ಕೆ ಮಧ್ಯಮ ಕ್ರಮಾಂಕದ ಬ್ಯಾಟರ್‌ ರಹಮತ್‌ ಶಾ 90(92) ಅವರ ಅರ್ಧಶತಕ ಹೊರತುಪಡಿಸಿದರೆ ಉಳಿದ ಯಾವ ಬ್ಯಾಟರ್‌ ಕೂಡ ಆಫ್ರಿಕಾದ ಬೌಲಿಂಗ್‌ ದಾಳಿ ಎದುರಿಸಲು ವಿಫಲವಾದರು.

ಅಂತಿಮವಾಗಿ ಅಫ್ಗಾನಿಸ್ತಾನ 43.3 ಓವರ್‌ಗಳಲ್ಲಿ 208 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ 107ರನ್‌ಗಳ ಸೊಲೊಪ್ಪಿಕೊಂಡಿತ್ತು.

ದಕ್ಷಿಣ ಆಫ್ರಿಕಾ ಪರ ಉತ್ತಮ ದಾಳಿ ನಡೆಸಿದ ಕಗಿಸೊ ರಬಾಡ 3 ವಿಕೆಟ್‌, ಲುಂಗಿ ನಿಗಡಿ ಹಾಗೂ ಮಲ್ಡರ್‌ ತಲಾ 2 ವಿಕೆಟ್‌ ಪಡೆದರೆ, ಮಾರ್ಕೊ ಯಾನ್ಸನ್‌ ಹಾಗೂ ಕೇಶವ್‌ ಮಹಾರಾಜ್‌ ತಲಾ 1 ವಿಕೆಟ್‌ ಪಡೆದರು

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

3 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

3 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

3 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

3 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

3 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

3 hours ago