ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ 2025: ಆಫ್ರಿಕಾಗೆ ಸುಲಭ ತುತ್ತಾದ ಅಫ್ಗನ್‌

ಕರಾಚಿ: ಬ್ಯಾಟರ್‌ ಮತ್ತು ಬೌಲರ್‌ಗಳ ಅತ್ಯತ್ತಮ ಪ್ರದರ್ಶನದಿಂದ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ʼಬಿʼ ಗುಂಪಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಅಫ್ಗಾನಿಸ್ತಾನದ ವಿರುದ್ಧ 107 ರನ್‌ಗಳ ಭರ್ಜರಿ ಜಯ ದಾಖಲಿಸಿದೆ.

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಆಫ್ರಿಕಾದ ನಾಯಕ ಬವುಮಾನ ನಿರ್ಧಾರಕ್ಕೆ ತಕ್ಕಂತೆ ಬ್ಯಾಟರ್‌ಗಳು ಬ್ಯಾಟ್‌ ಬೀಸಿದರು.

ಆಫ್ರಿಕಾದ ಆರಂಭಿಕ ಆಟಗಾರ ರಯಾನ್‌ ರಿಕಲ್ಟನ್‌ ಅವರ ಭರ್ಜರಿ ಶತಕದ 103(106) ಜೊತೆಗೆ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾದ ನಾಯಕ ತೆಂಬಾ ಬವುಮಾ 58(76), ರಸಿ ವಾನ್‌ಡರ್‌ ಡಸೆ 52(46), ಹಾಗೂ ಏಡನ್‌ ಮರ್ಕರಂ 52(36) ಅವರ ಅರ್ಧಶತಕಗಳ ಮೂಲಕ 50 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 315 ರನ್‌ಗಳ ಸವಾಲಿನ ಮೊತ್ತ ಕಲೆ ಹಾಕಿದರು.

ಸವಾಲಿನ ಗುರಿ ಬೆನ್ನತ್ತಿದ ಅಫ್ಗಾನಿಸ್ಥಾನ ತಂಡಕ್ಕೆ ಮಧ್ಯಮ ಕ್ರಮಾಂಕದ ಬ್ಯಾಟರ್‌ ರಹಮತ್‌ ಶಾ 90(92) ಅವರ ಅರ್ಧಶತಕ ಹೊರತುಪಡಿಸಿದರೆ ಉಳಿದ ಯಾವ ಬ್ಯಾಟರ್‌ ಕೂಡ ಆಫ್ರಿಕಾದ ಬೌಲಿಂಗ್‌ ದಾಳಿ ಎದುರಿಸಲು ವಿಫಲವಾದರು.

ಅಂತಿಮವಾಗಿ ಅಫ್ಗಾನಿಸ್ತಾನ 43.3 ಓವರ್‌ಗಳಲ್ಲಿ 208 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ 107ರನ್‌ಗಳ ಸೊಲೊಪ್ಪಿಕೊಂಡಿತ್ತು.

ದಕ್ಷಿಣ ಆಫ್ರಿಕಾ ಪರ ಉತ್ತಮ ದಾಳಿ ನಡೆಸಿದ ಕಗಿಸೊ ರಬಾಡ 3 ವಿಕೆಟ್‌, ಲುಂಗಿ ನಿಗಡಿ ಹಾಗೂ ಮಲ್ಡರ್‌ ತಲಾ 2 ವಿಕೆಟ್‌ ಪಡೆದರೆ, ಮಾರ್ಕೊ ಯಾನ್ಸನ್‌ ಹಾಗೂ ಕೇಶವ್‌ ಮಹಾರಾಜ್‌ ತಲಾ 1 ವಿಕೆಟ್‌ ಪಡೆದರು

 

ಆಂದೋಲನ ಡೆಸ್ಕ್

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

4 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

18 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

18 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

18 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

18 hours ago