ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ 2025: ಆಫ್ರಿಕಾಗೆ ಸುಲಭ ತುತ್ತಾದ ಅಫ್ಗನ್‌

ಕರಾಚಿ: ಬ್ಯಾಟರ್‌ ಮತ್ತು ಬೌಲರ್‌ಗಳ ಅತ್ಯತ್ತಮ ಪ್ರದರ್ಶನದಿಂದ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ʼಬಿʼ ಗುಂಪಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಅಫ್ಗಾನಿಸ್ತಾನದ ವಿರುದ್ಧ 107 ರನ್‌ಗಳ ಭರ್ಜರಿ ಜಯ ದಾಖಲಿಸಿದೆ.

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಆಫ್ರಿಕಾದ ನಾಯಕ ಬವುಮಾನ ನಿರ್ಧಾರಕ್ಕೆ ತಕ್ಕಂತೆ ಬ್ಯಾಟರ್‌ಗಳು ಬ್ಯಾಟ್‌ ಬೀಸಿದರು.

ಆಫ್ರಿಕಾದ ಆರಂಭಿಕ ಆಟಗಾರ ರಯಾನ್‌ ರಿಕಲ್ಟನ್‌ ಅವರ ಭರ್ಜರಿ ಶತಕದ 103(106) ಜೊತೆಗೆ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾದ ನಾಯಕ ತೆಂಬಾ ಬವುಮಾ 58(76), ರಸಿ ವಾನ್‌ಡರ್‌ ಡಸೆ 52(46), ಹಾಗೂ ಏಡನ್‌ ಮರ್ಕರಂ 52(36) ಅವರ ಅರ್ಧಶತಕಗಳ ಮೂಲಕ 50 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 315 ರನ್‌ಗಳ ಸವಾಲಿನ ಮೊತ್ತ ಕಲೆ ಹಾಕಿದರು.

ಸವಾಲಿನ ಗುರಿ ಬೆನ್ನತ್ತಿದ ಅಫ್ಗಾನಿಸ್ಥಾನ ತಂಡಕ್ಕೆ ಮಧ್ಯಮ ಕ್ರಮಾಂಕದ ಬ್ಯಾಟರ್‌ ರಹಮತ್‌ ಶಾ 90(92) ಅವರ ಅರ್ಧಶತಕ ಹೊರತುಪಡಿಸಿದರೆ ಉಳಿದ ಯಾವ ಬ್ಯಾಟರ್‌ ಕೂಡ ಆಫ್ರಿಕಾದ ಬೌಲಿಂಗ್‌ ದಾಳಿ ಎದುರಿಸಲು ವಿಫಲವಾದರು.

ಅಂತಿಮವಾಗಿ ಅಫ್ಗಾನಿಸ್ತಾನ 43.3 ಓವರ್‌ಗಳಲ್ಲಿ 208 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ 107ರನ್‌ಗಳ ಸೊಲೊಪ್ಪಿಕೊಂಡಿತ್ತು.

ದಕ್ಷಿಣ ಆಫ್ರಿಕಾ ಪರ ಉತ್ತಮ ದಾಳಿ ನಡೆಸಿದ ಕಗಿಸೊ ರಬಾಡ 3 ವಿಕೆಟ್‌, ಲುಂಗಿ ನಿಗಡಿ ಹಾಗೂ ಮಲ್ಡರ್‌ ತಲಾ 2 ವಿಕೆಟ್‌ ಪಡೆದರೆ, ಮಾರ್ಕೊ ಯಾನ್ಸನ್‌ ಹಾಗೂ ಕೇಶವ್‌ ಮಹಾರಾಜ್‌ ತಲಾ 1 ವಿಕೆಟ್‌ ಪಡೆದರು

 

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

5 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

15 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

19 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

19 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

20 hours ago