ಕ್ರೀಡೆ

Champions Trophy-2025: ಗಿಲ್‌ ಶತಕ: ಬಾಂಗ್ಲಾ ಮಣಿಸಿ ಶುಭಾರಂಭ ಮಾಡಿದ ಭಾರತ

ದುಬೈ: ಭಾರತ ತಂಡದ ಆಲ್‌ ರೌಂಡರ್‌ ಪ್ರದರ್ಶನಕ್ಕೆ ತಲೆ ಬಾಗಿದ ಬಾಂಗ್ಲಾದೇಶ, ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡದ ವಿರುದ್ಧ 6 ವಿಕೆಟ್‌ಗಳ ಅಂತರದಿಂದ ಸೋಲು ಕಂಡಿದೆ. ಇತ್ತ ಬಾಂಗ್ಲಾ ಮಣಿಸಿದ ಭಾರತ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಇಲ್ಲಿನ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಣ ಏಕದಿನ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಬಾಂಗ್ಲಾ 49.4 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 228 ರನ್‌ ಕಲೆಹಾಕಿ ಭಾರತಕ್ಕೆ 229 ರನ್‌ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಭಾರತ 46.3 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 231 ಬಾರಿಸಿ ಗೆಲುವಿನ ನಗೆ ಬೀರಿತು.

ಬಾಂಗ್ಲಾ ಇನ್ನಿಂಗ್ಸ್‌: ಟೂರ್ನಿಯ ಮೊದಲ ಪಂದ್ಯದಲ್ಲಿ ಬಾಂಗ್ಲಾಕ್ಕೆ ನಿರೀಕ್ಷಿತ ಆರಂಭ ಕಂಡುಬರಲಿಲ್ಲ. ಸೌಮ್ಯ ಸರ್ಕಾರ್‌ ಮೊದಲ ಓವರ್‌ನಲ್ಲೇ ಶಮಿಗೆ ವಿಕೆಟ್‌ ಒಪ್ಪಿಸಿ ಡಕ್‌ಔಟ್‌ ಆಗಿ ಹೊರನಡೆದರೇ, ಹಸನ್‌ 25 ರನ್‌ಗಳಿಗೆ ಇನ್ನಿಂಗ್ಸ್‌ ಮುಗಿಸಿದರು. ನಾಯಕ ಹೊಸೇನ್‌ ಸ್ಯಾಂಟೋ ಕೂಡಾ ಡಕ್‌ ಔಟ್‌ ಆದರು. ಬಳಿಕ ಬಂದ ಮೆಹದಿ ಹಸನ್‌ 5 ರನ್‌ಗೆ ಸುಸ್ತಾದರು. ಮುಷ್ಪಿಕರ್‌ ರಹೀಂ ಡಕ್‌ ಔಟ್‌ ಆಗಿ ಬಂದ ಹಾದಿಯಲ್ಲೇ ಮರಳಿದರು.

ಕೇವಲ 8 ಓವರ್‌ಗಳಲ್ಲಿ 35 ರನ್‌ ಗಳಿಸಿ ಪ್ರಮುಖ 5 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಬಾಂಗ್ಲಾಕ್ಕೆ ಹೃದೋಯ್‌ ಹಾಗೂ ಜಾಕರ್‌ ಅಲಿ ಆಸರೆಯಾದರು. ಹೃದೋಯ್‌ 118 ಎಸೆತಗಳಲ್ಲಿ 6 ಬೌಂಡರಿ, 2 ಸಿಕ್ಸರ್‌ ಸಹಿತ 100 ರನ್‌ ಬಾರಿಸಿದರೇ, 114 ಎಸೆತಗಳಲ್ಲಿ 4 ಬೌಂಡರಿ ಸಹಿತ 68 ರನ್‌ ಗಳಿಸಿ ತಂಡದ ಮೊತ್ತ ಇನ್ನೂರರ ಗಡಿ ದಾಟಲು ಉಪಯುಕ್ತ ಆಟವಾಡಿದರು.

ಉಳಿದಂತೆ ರಿಶಾದ್‌ ಹೊಸೇನ್‌ 18, ಹಸನ್‌ ಶಕೀಬ್‌ ಡಕ್‌ಔಟ್‌, ತಸ್ಕಿನ್‌ ಅಹ್ಮದ್‌ 3, ಮುಸ್ತಿಫಿಜೂರ್‌ ರೆಹ್ಮಾನ್‌ ಖಾತೆ ತೆರೆಯದೇ ನಾಟ್‌ ಔಟ್‌ ಆಗಿ ಉಳಿದರು.

ಭಾರತ ತಂಡದ ಪರವಾಗಿ ಮೊಹಮ್ಮದ್‌ ಶಮಿ 5, ಹರ್ಷಿತ್‌ ರಾಣಾ 3 ಹಾಗೂ ಅಕ್ಷರ್‌ ಪಟೇಲ್‌ 2 ವಿಕೆಟ್‌ ಪಡೆದು ಮಿಂಚಿದರು.

ಟೀಂ ಇಂಡಿಯಾ ಇನ್ನಿಂಗ್ಸ್: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಭಾರತ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ನಾಯಕ ರೋಹಿತ್‌ ಶರ್ಮಾ 41 ರನ್‌ ಗಳಿಸಿ ಔಟಾದರು. ಆದರೆ ವಿರಾಟ್‌ ಕೊಹ್ಲಿ ಕೇವಲ 22 ರನ್‌ ಗಳಿಸಿ ಮತ್ತೊಮ್ಮೆ ನಿರಾಸೆ ಮೂಡಿಸಿದರು. ಬಳಿಕ ಬಂದ ಶ್ರೇಯಸ್‌ ಅಯ್ಯರ್‌ 15, ಅಕ್ಷರ್‌ ಪಟೇಲ್‌ 8 ರನ್‌ ಗಳಿಸಿ ನಿರ್ಗಮಿಸಿದರು.

ಕೊನೆಯಲ್ಲಿ ಒಂದಾದ ಗಿಲ್‌ ಹಾಗೂ ಕನ್ನಡಿಗ ಕೆ.ಎಲ್‌ ರಾಹುಲ್‌ ತಂಡಕ್ಕೆ ಗೆಲುವು ತಂದುಕೊಟ್ಟರು. ಗಿಲ್‌ ಔಟಾಗದೇ 129 ಎಸೆತಗಳಲ್ಲಿ 9 ಬೌಂಡರಿ, 2 ಸಿಕ್ಸರ್‌ ಸಹಿತ 101 ರನ್‌ ಗಳಿಸಿದರೇ, ಕೆ.ಎಲ್‌ ರಾಹುಲ್‌ 41 ರನ್‌ ಗಳಿಸಿ ನಾಟ್‌ಔಟ್‌ ಆಗಿ ಉಳಿದರು.

ಬಾಂಗ್ಲಾ ಪರ ರಿಶಾದ್‌ ಹೊಸೇನ್‌ ಎರಡು, ಮುಸ್ತಿಫಿಜುರ್‌ ಹಾಗೂ ತಸ್ಕಿನ್‌ ಅಹ್ಮದ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ಶುಭ್‌ಮನ್‌ ಗಿಲ್‌

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾರ್ಮಿಕ ಇಲಾಖೆಯ ನ್ಯೂಟ್ರಿಷನ್‌ ಕಿಟ್‌ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ: ಬಿಜೆಪಿ ಆರೋಪ

ಬೆಂಗಳೂರು: ಕಾರ್ಮಿಕರ ಹೆಸರಿನಲ್ಲಿ ದುಡ್ಡು ತಿಂದ ರಾಜ್ಯ ಸರ್ಕಾರ, ನ್ಯೂಟ್ರಿಷನ್‌ ಕಿಟ್‌ ಹೆಸರಿನಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಿದೆ…

4 mins ago

WPL final: ಚಾಂಪಿಯನ್‌ ಪಟ್ಟಕ್ಕಾಗಿ ಮುಂಬೈ v/s ಡೆಲ್ಲಿ ಹೋರಾಟ

ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ (WPL) ಟಿ20 ಕ್ರಿಕೆಟ್‌ ಟೂನಿಯ ಫೈನಲ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌…

22 mins ago

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ಎರಡು ವರ್ಷದಲ್ಲಿ ರನ್ಯಾ ದುಬೈಗೆ ಎಷ್ಟು ಬಾರಿ ಹೋಗಿದ್ದರೂ ಗೊತ್ತಾ?

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧಿಯಾಗಿದ್ದು ನಟಿ ರನ್ಯಾರಾವ್‌ ಅವರು 2023ರ ಜೂನ್‌ನಿಂದ ಇಲ್ಲಿಯವರೆಗೂ 52 ಬಾರಿ ದುಬೈಗೆ ಹೋಗಿ…

26 mins ago

ಪ್ರತಾಪ್‌ ಸಿಂಹನ ಮಾತು ಹಾಗೂ ನಾಲಿಗೆ ಸ್ವಲ್ಪ ಸರಿಯಿಲ್ಲ: ತನ್ವೀರ್‌ ಸೇಠ್‌ ಕಿಡಿ

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಸಭ್ಯತೆ ಮೀರಿ ನಡೆದುಕೊಳ್ಳಬಾರದು ಎಂದು ಶಾಸಕ ತನ್ವೀರ್‌ ಸೇಠ್‌ ಸಲಹೆ ನೀಡಿದ್ದಾರೆ. ರಾಜ್ಯ…

51 mins ago

ತುರ್ತು ಸಭೆ: ಹಾವಳಿ ನೀಡುತ್ತಿರುವ ಪುಂಡಾನೆಗಳ ಸೆರೆಗೆ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಮತ್ತು ಅರೇಹಳ್ಳಿ ಸುತ್ತ-ಮುತ್ತ ಜನರಿಗೆ ಹಾವಳಿ ನೀಡುತ್ತಿರುವ 3 ಪುಂಡಾನೆಗಳನ್ನು ಪತ್ತೆಹಚ್ಚಲಾಗಿದೆ.…

59 mins ago

ಗುಂಡ್ಲಪೇಟೆ: ಬೀದಿ ನಾಯಿ ದಾಳಿಗೆ ಜಿಂಕೆ ಸಾವು

ಚಾಮರಾಜನಗರ: ಬೀದಿ ನಾಯಿ ದಾಳಿಗೆ ಜಿಂಕೆ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕಾಳನಹುಂಡಿ ಗ್ರಾಮದ ಆಂಜನೇಯ ಸ್ವಾಮಿ…

1 hour ago