ಕ್ರೀಡೆ

Champions Trophy-2025: ಗಿಲ್‌ ಶತಕ: ಬಾಂಗ್ಲಾ ಮಣಿಸಿ ಶುಭಾರಂಭ ಮಾಡಿದ ಭಾರತ

ದುಬೈ: ಭಾರತ ತಂಡದ ಆಲ್‌ ರೌಂಡರ್‌ ಪ್ರದರ್ಶನಕ್ಕೆ ತಲೆ ಬಾಗಿದ ಬಾಂಗ್ಲಾದೇಶ, ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡದ ವಿರುದ್ಧ 6 ವಿಕೆಟ್‌ಗಳ ಅಂತರದಿಂದ ಸೋಲು ಕಂಡಿದೆ. ಇತ್ತ ಬಾಂಗ್ಲಾ ಮಣಿಸಿದ ಭಾರತ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಇಲ್ಲಿನ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಣ ಏಕದಿನ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಬಾಂಗ್ಲಾ 49.4 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 228 ರನ್‌ ಕಲೆಹಾಕಿ ಭಾರತಕ್ಕೆ 229 ರನ್‌ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಭಾರತ 46.3 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 231 ಬಾರಿಸಿ ಗೆಲುವಿನ ನಗೆ ಬೀರಿತು.

ಬಾಂಗ್ಲಾ ಇನ್ನಿಂಗ್ಸ್‌: ಟೂರ್ನಿಯ ಮೊದಲ ಪಂದ್ಯದಲ್ಲಿ ಬಾಂಗ್ಲಾಕ್ಕೆ ನಿರೀಕ್ಷಿತ ಆರಂಭ ಕಂಡುಬರಲಿಲ್ಲ. ಸೌಮ್ಯ ಸರ್ಕಾರ್‌ ಮೊದಲ ಓವರ್‌ನಲ್ಲೇ ಶಮಿಗೆ ವಿಕೆಟ್‌ ಒಪ್ಪಿಸಿ ಡಕ್‌ಔಟ್‌ ಆಗಿ ಹೊರನಡೆದರೇ, ಹಸನ್‌ 25 ರನ್‌ಗಳಿಗೆ ಇನ್ನಿಂಗ್ಸ್‌ ಮುಗಿಸಿದರು. ನಾಯಕ ಹೊಸೇನ್‌ ಸ್ಯಾಂಟೋ ಕೂಡಾ ಡಕ್‌ ಔಟ್‌ ಆದರು. ಬಳಿಕ ಬಂದ ಮೆಹದಿ ಹಸನ್‌ 5 ರನ್‌ಗೆ ಸುಸ್ತಾದರು. ಮುಷ್ಪಿಕರ್‌ ರಹೀಂ ಡಕ್‌ ಔಟ್‌ ಆಗಿ ಬಂದ ಹಾದಿಯಲ್ಲೇ ಮರಳಿದರು.

ಕೇವಲ 8 ಓವರ್‌ಗಳಲ್ಲಿ 35 ರನ್‌ ಗಳಿಸಿ ಪ್ರಮುಖ 5 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಬಾಂಗ್ಲಾಕ್ಕೆ ಹೃದೋಯ್‌ ಹಾಗೂ ಜಾಕರ್‌ ಅಲಿ ಆಸರೆಯಾದರು. ಹೃದೋಯ್‌ 118 ಎಸೆತಗಳಲ್ಲಿ 6 ಬೌಂಡರಿ, 2 ಸಿಕ್ಸರ್‌ ಸಹಿತ 100 ರನ್‌ ಬಾರಿಸಿದರೇ, 114 ಎಸೆತಗಳಲ್ಲಿ 4 ಬೌಂಡರಿ ಸಹಿತ 68 ರನ್‌ ಗಳಿಸಿ ತಂಡದ ಮೊತ್ತ ಇನ್ನೂರರ ಗಡಿ ದಾಟಲು ಉಪಯುಕ್ತ ಆಟವಾಡಿದರು.

ಉಳಿದಂತೆ ರಿಶಾದ್‌ ಹೊಸೇನ್‌ 18, ಹಸನ್‌ ಶಕೀಬ್‌ ಡಕ್‌ಔಟ್‌, ತಸ್ಕಿನ್‌ ಅಹ್ಮದ್‌ 3, ಮುಸ್ತಿಫಿಜೂರ್‌ ರೆಹ್ಮಾನ್‌ ಖಾತೆ ತೆರೆಯದೇ ನಾಟ್‌ ಔಟ್‌ ಆಗಿ ಉಳಿದರು.

ಭಾರತ ತಂಡದ ಪರವಾಗಿ ಮೊಹಮ್ಮದ್‌ ಶಮಿ 5, ಹರ್ಷಿತ್‌ ರಾಣಾ 3 ಹಾಗೂ ಅಕ್ಷರ್‌ ಪಟೇಲ್‌ 2 ವಿಕೆಟ್‌ ಪಡೆದು ಮಿಂಚಿದರು.

ಟೀಂ ಇಂಡಿಯಾ ಇನ್ನಿಂಗ್ಸ್: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಭಾರತ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ನಾಯಕ ರೋಹಿತ್‌ ಶರ್ಮಾ 41 ರನ್‌ ಗಳಿಸಿ ಔಟಾದರು. ಆದರೆ ವಿರಾಟ್‌ ಕೊಹ್ಲಿ ಕೇವಲ 22 ರನ್‌ ಗಳಿಸಿ ಮತ್ತೊಮ್ಮೆ ನಿರಾಸೆ ಮೂಡಿಸಿದರು. ಬಳಿಕ ಬಂದ ಶ್ರೇಯಸ್‌ ಅಯ್ಯರ್‌ 15, ಅಕ್ಷರ್‌ ಪಟೇಲ್‌ 8 ರನ್‌ ಗಳಿಸಿ ನಿರ್ಗಮಿಸಿದರು.

ಕೊನೆಯಲ್ಲಿ ಒಂದಾದ ಗಿಲ್‌ ಹಾಗೂ ಕನ್ನಡಿಗ ಕೆ.ಎಲ್‌ ರಾಹುಲ್‌ ತಂಡಕ್ಕೆ ಗೆಲುವು ತಂದುಕೊಟ್ಟರು. ಗಿಲ್‌ ಔಟಾಗದೇ 129 ಎಸೆತಗಳಲ್ಲಿ 9 ಬೌಂಡರಿ, 2 ಸಿಕ್ಸರ್‌ ಸಹಿತ 101 ರನ್‌ ಗಳಿಸಿದರೇ, ಕೆ.ಎಲ್‌ ರಾಹುಲ್‌ 41 ರನ್‌ ಗಳಿಸಿ ನಾಟ್‌ಔಟ್‌ ಆಗಿ ಉಳಿದರು.

ಬಾಂಗ್ಲಾ ಪರ ರಿಶಾದ್‌ ಹೊಸೇನ್‌ ಎರಡು, ಮುಸ್ತಿಫಿಜುರ್‌ ಹಾಗೂ ತಸ್ಕಿನ್‌ ಅಹ್ಮದ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ಶುಭ್‌ಮನ್‌ ಗಿಲ್‌

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

12 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

13 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

13 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

14 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

19 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

19 hours ago