ಕ್ರೀಡೆ

Champions Trophy 2025: ಇಂಗ್ಲೆಂಡ್‌ ಮಣಿಸಿ ಸೆಮಿಸ್‌ಗೆ ಲಗ್ಗೆಯಿಟ್ಟ ಹರಿಣ ಪಡೆ

ಕರಾಚಿ: ಮಾರ್ಕೋ ಯಾನ್ಸನ್‌, ಮುಲ್ಡರ್‌ ಪ್ರಭಾವಿ ಬೌಲಿಂಗ್‌ ದಾಳಿ, ಕ್ಲಾಸೆನ್‌ ಹಾಗೂ ಡುಸೆನ್‌ ಅವರ ಬ್ಯಾಟಿಂಗ್‌ ಸಹಾಯದ ಬಲದಿಂದ ಬಲಿಷ್ಠ ಇಂಗ್ಲೆಂಡ ತಂಡವನ್ನು ಬಗ್ಗು ಬಡಿದ ದಕ್ಷಿಣಾ ಆಫ್ರಿಕಾ ತಂಡ ಐಸಿಸಿ ಚಾಂಪಿಯನ್ಸ್‌ ಟ್ರೋಫಿ-2025 ರ ಟೂರ್ನಿಯಲ್ಲಿ ಸೆಮಿಸ್‌ಗೆ ಲಗ್ಗೆಯಿಟ್ಟಿದೆ.

ಇಲ್ಲಿನ ಕರಾಚಿ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಇಂಗ್ಲೆಂಡ್‌ 38.2 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 179 ರನ್‌ ಗಳಿಸಿತು. ಈ ಮೊತ್ತ ಬೆನ್ನತ್ತಿದ ದಕ್ಷಿಣಾ ಆಫ್ರಿಕಾ 29.1 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 181 ರನ್‌ ಗಳಿಸಿ 7 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿದೆ.

ಇಂಗ್ಲೆಂಡ್‌ ಇನ್ನಿಂಗ್ಸ್‌: ಟೂರ್ನಿಯಲ್ಲಿ ತೀರಾ ಕಳಪೆ ಪ್ರದರ್ಶನ ಮುಂದುವರಿಸಿದ ಇಂಗ್ಲೆಂಡ್‌ ಟೂರ್ನಿಯಲ್ಲಿನ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮಂಕಾಯಿತು. ಆಂಗ್ಲರ ಪರ 37 ರನ್‌ ಗಳಿಸಿದ್ದ ರೂಟ್‌ ಅವರದ್ದೇ ವೈಯಕ್ತಿಕ ಗರಿಷ್ಠ ರನ್‌ ಆಗಿತ್ತು. ಇವರಿಗೆ ಜೊತೆಯಾಗಿ ಡಕೆಟ್‌ 24, ಹ್ಯಾರಿ ಬ್ರೂಕ್‌ 19, ನಾಯಕ ಬಟ್ಲರ್‌ 21, ಜೋಫ್ರಾ ಆರ್ಚರ್‌ 25 ರನ್‌ ಗಳಿಸಿದರು.

ದಕ್ಷಿಣಾ ಆಫ್ರಿಕಾ ಪರ ಮಾರ್ಕೋ ಯಾನ್ಸನ್‌, ಮುಲ್ಡರ್‌ ತಲಾ ಮೂರು ವಿಕೆಟ್‌, ಮಹಾರಾಜ್‌ ಎರಡು ವಿಕೆಟ್‌ಗಳಿಸಿ ಮಿಂಚಿದರು.

ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌: ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಹರಿಣ ಪಡೆಗೆ ಆರಂಭಿಕ ಆಘಾತ ಉಂಟಾಯಿತು. ಸ್ಟಬ್ಸ್‌ ಶೂನ್ಯಕ್ಕೆ ಔಟಾದರು. ರಿಯಾನ್‌ 27 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು.

ಬಳಿಕ ಒಂದಾದ ಡುಸೆನ್‌ ಹಾಗೂ ಕ್ಲಾಸೆನ್‌ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಹನ್ರಿಚ್‌ ಕ್ಲಾಸೆನ್‌ 56 ಎಸತಗಳಲ್ಲಿ 11 ಬೌಂಡರಿ ಸಹಿತ 64 ರನ್‌ ಬಾರಿಸಿದರು. ಡುಸೆನ್‌ ಔಟಾಗದೇ 87 ಎಸತ, 6 ಬೌಂಡರಿ, 3 ಸಿಕ್ಸರ್‌ ಸಹಿತ 72 ರನ್‌ ಗಳಿಸಿದರು. ಕೊನೆಯಲ್ಲಿ ಬಂದ ಮಿಲ್ಲರ್‌ 7 ರನ್‌ ಬಾರಿಸಿ ಗೆಲುವಿನ ನಗೆ ಬೀರಿದರು.

ಜೋಫ್ರಾ ಆರ್ಚರ್‌ ಎರಡು, ಆದಿಲ್‌ ರಶೀದ್‌ ಒಂದು ವಿಕೆಟ್‌ ಕಬಳಿಸಿದರು.

AddThis Website Tools
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾರ್ಮಿಕ ಇಲಾಖೆಯ ನ್ಯೂಟ್ರಿಷನ್‌ ಕಿಟ್‌ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ: ಬಿಜೆಪಿ ಆರೋಪ

ಬೆಂಗಳೂರು: ಕಾರ್ಮಿಕರ ಹೆಸರಿನಲ್ಲಿ ದುಡ್ಡು ತಿಂದ ರಾಜ್ಯ ಸರ್ಕಾರ, ನ್ಯೂಟ್ರಿಷನ್‌ ಕಿಟ್‌ ಹೆಸರಿನಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಿದೆ…

4 mins ago

WPL final: ಚಾಂಪಿಯನ್‌ ಪಟ್ಟಕ್ಕಾಗಿ ಮುಂಬೈ v/s ಡೆಲ್ಲಿ ಹೋರಾಟ

ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ (WPL) ಟಿ20 ಕ್ರಿಕೆಟ್‌ ಟೂನಿಯ ಫೈನಲ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌…

22 mins ago

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ಎರಡು ವರ್ಷದಲ್ಲಿ ರನ್ಯಾ ದುಬೈಗೆ ಎಷ್ಟು ಬಾರಿ ಹೋಗಿದ್ದರೂ ಗೊತ್ತಾ?

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧಿಯಾಗಿದ್ದು ನಟಿ ರನ್ಯಾರಾವ್‌ ಅವರು 2023ರ ಜೂನ್‌ನಿಂದ ಇಲ್ಲಿಯವರೆಗೂ 52 ಬಾರಿ ದುಬೈಗೆ ಹೋಗಿ…

26 mins ago

ಪ್ರತಾಪ್‌ ಸಿಂಹನ ಮಾತು ಹಾಗೂ ನಾಲಿಗೆ ಸ್ವಲ್ಪ ಸರಿಯಿಲ್ಲ: ತನ್ವೀರ್‌ ಸೇಠ್‌ ಕಿಡಿ

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಸಭ್ಯತೆ ಮೀರಿ ನಡೆದುಕೊಳ್ಳಬಾರದು ಎಂದು ಶಾಸಕ ತನ್ವೀರ್‌ ಸೇಠ್‌ ಸಲಹೆ ನೀಡಿದ್ದಾರೆ. ರಾಜ್ಯ…

51 mins ago

ತುರ್ತು ಸಭೆ: ಹಾವಳಿ ನೀಡುತ್ತಿರುವ ಪುಂಡಾನೆಗಳ ಸೆರೆಗೆ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಮತ್ತು ಅರೇಹಳ್ಳಿ ಸುತ್ತ-ಮುತ್ತ ಜನರಿಗೆ ಹಾವಳಿ ನೀಡುತ್ತಿರುವ 3 ಪುಂಡಾನೆಗಳನ್ನು ಪತ್ತೆಹಚ್ಚಲಾಗಿದೆ.…

59 mins ago

ಗುಂಡ್ಲಪೇಟೆ: ಬೀದಿ ನಾಯಿ ದಾಳಿಗೆ ಜಿಂಕೆ ಸಾವು

ಚಾಮರಾಜನಗರ: ಬೀದಿ ನಾಯಿ ದಾಳಿಗೆ ಜಿಂಕೆ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕಾಳನಹುಂಡಿ ಗ್ರಾಮದ ಆಂಜನೇಯ ಸ್ವಾಮಿ…

1 hour ago