ಕ್ರೀಡೆ

Champions Trophy 2025: ಇಂಗ್ಲೆಂಡ್‌ ಮಣಿಸಿ ಸೆಮಿಸ್‌ಗೆ ಲಗ್ಗೆಯಿಟ್ಟ ಹರಿಣ ಪಡೆ

ಕರಾಚಿ: ಮಾರ್ಕೋ ಯಾನ್ಸನ್‌, ಮುಲ್ಡರ್‌ ಪ್ರಭಾವಿ ಬೌಲಿಂಗ್‌ ದಾಳಿ, ಕ್ಲಾಸೆನ್‌ ಹಾಗೂ ಡುಸೆನ್‌ ಅವರ ಬ್ಯಾಟಿಂಗ್‌ ಸಹಾಯದ ಬಲದಿಂದ ಬಲಿಷ್ಠ ಇಂಗ್ಲೆಂಡ ತಂಡವನ್ನು ಬಗ್ಗು ಬಡಿದ ದಕ್ಷಿಣಾ ಆಫ್ರಿಕಾ ತಂಡ ಐಸಿಸಿ ಚಾಂಪಿಯನ್ಸ್‌ ಟ್ರೋಫಿ-2025 ರ ಟೂರ್ನಿಯಲ್ಲಿ ಸೆಮಿಸ್‌ಗೆ ಲಗ್ಗೆಯಿಟ್ಟಿದೆ.

ಇಲ್ಲಿನ ಕರಾಚಿ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಇಂಗ್ಲೆಂಡ್‌ 38.2 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 179 ರನ್‌ ಗಳಿಸಿತು. ಈ ಮೊತ್ತ ಬೆನ್ನತ್ತಿದ ದಕ್ಷಿಣಾ ಆಫ್ರಿಕಾ 29.1 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 181 ರನ್‌ ಗಳಿಸಿ 7 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿದೆ.

ಇಂಗ್ಲೆಂಡ್‌ ಇನ್ನಿಂಗ್ಸ್‌: ಟೂರ್ನಿಯಲ್ಲಿ ತೀರಾ ಕಳಪೆ ಪ್ರದರ್ಶನ ಮುಂದುವರಿಸಿದ ಇಂಗ್ಲೆಂಡ್‌ ಟೂರ್ನಿಯಲ್ಲಿನ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮಂಕಾಯಿತು. ಆಂಗ್ಲರ ಪರ 37 ರನ್‌ ಗಳಿಸಿದ್ದ ರೂಟ್‌ ಅವರದ್ದೇ ವೈಯಕ್ತಿಕ ಗರಿಷ್ಠ ರನ್‌ ಆಗಿತ್ತು. ಇವರಿಗೆ ಜೊತೆಯಾಗಿ ಡಕೆಟ್‌ 24, ಹ್ಯಾರಿ ಬ್ರೂಕ್‌ 19, ನಾಯಕ ಬಟ್ಲರ್‌ 21, ಜೋಫ್ರಾ ಆರ್ಚರ್‌ 25 ರನ್‌ ಗಳಿಸಿದರು.

ದಕ್ಷಿಣಾ ಆಫ್ರಿಕಾ ಪರ ಮಾರ್ಕೋ ಯಾನ್ಸನ್‌, ಮುಲ್ಡರ್‌ ತಲಾ ಮೂರು ವಿಕೆಟ್‌, ಮಹಾರಾಜ್‌ ಎರಡು ವಿಕೆಟ್‌ಗಳಿಸಿ ಮಿಂಚಿದರು.

ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌: ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಹರಿಣ ಪಡೆಗೆ ಆರಂಭಿಕ ಆಘಾತ ಉಂಟಾಯಿತು. ಸ್ಟಬ್ಸ್‌ ಶೂನ್ಯಕ್ಕೆ ಔಟಾದರು. ರಿಯಾನ್‌ 27 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು.

ಬಳಿಕ ಒಂದಾದ ಡುಸೆನ್‌ ಹಾಗೂ ಕ್ಲಾಸೆನ್‌ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಹನ್ರಿಚ್‌ ಕ್ಲಾಸೆನ್‌ 56 ಎಸತಗಳಲ್ಲಿ 11 ಬೌಂಡರಿ ಸಹಿತ 64 ರನ್‌ ಬಾರಿಸಿದರು. ಡುಸೆನ್‌ ಔಟಾಗದೇ 87 ಎಸತ, 6 ಬೌಂಡರಿ, 3 ಸಿಕ್ಸರ್‌ ಸಹಿತ 72 ರನ್‌ ಗಳಿಸಿದರು. ಕೊನೆಯಲ್ಲಿ ಬಂದ ಮಿಲ್ಲರ್‌ 7 ರನ್‌ ಬಾರಿಸಿ ಗೆಲುವಿನ ನಗೆ ಬೀರಿದರು.

ಜೋಫ್ರಾ ಆರ್ಚರ್‌ ಎರಡು, ಆದಿಲ್‌ ರಶೀದ್‌ ಒಂದು ವಿಕೆಟ್‌ ಕಬಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

18 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

19 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

20 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

20 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

2 days ago