ಕ್ರೀಡೆ

Champions Trophy 2025: ಇಂಗ್ಲೆಂಡ್‌ ಮಣಿಸಿ ಸೆಮಿಸ್‌ಗೆ ಲಗ್ಗೆಯಿಟ್ಟ ಹರಿಣ ಪಡೆ

ಕರಾಚಿ: ಮಾರ್ಕೋ ಯಾನ್ಸನ್‌, ಮುಲ್ಡರ್‌ ಪ್ರಭಾವಿ ಬೌಲಿಂಗ್‌ ದಾಳಿ, ಕ್ಲಾಸೆನ್‌ ಹಾಗೂ ಡುಸೆನ್‌ ಅವರ ಬ್ಯಾಟಿಂಗ್‌ ಸಹಾಯದ ಬಲದಿಂದ ಬಲಿಷ್ಠ ಇಂಗ್ಲೆಂಡ ತಂಡವನ್ನು ಬಗ್ಗು ಬಡಿದ ದಕ್ಷಿಣಾ ಆಫ್ರಿಕಾ ತಂಡ ಐಸಿಸಿ ಚಾಂಪಿಯನ್ಸ್‌ ಟ್ರೋಫಿ-2025 ರ ಟೂರ್ನಿಯಲ್ಲಿ ಸೆಮಿಸ್‌ಗೆ ಲಗ್ಗೆಯಿಟ್ಟಿದೆ.

ಇಲ್ಲಿನ ಕರಾಚಿ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಇಂಗ್ಲೆಂಡ್‌ 38.2 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 179 ರನ್‌ ಗಳಿಸಿತು. ಈ ಮೊತ್ತ ಬೆನ್ನತ್ತಿದ ದಕ್ಷಿಣಾ ಆಫ್ರಿಕಾ 29.1 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 181 ರನ್‌ ಗಳಿಸಿ 7 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿದೆ.

ಇಂಗ್ಲೆಂಡ್‌ ಇನ್ನಿಂಗ್ಸ್‌: ಟೂರ್ನಿಯಲ್ಲಿ ತೀರಾ ಕಳಪೆ ಪ್ರದರ್ಶನ ಮುಂದುವರಿಸಿದ ಇಂಗ್ಲೆಂಡ್‌ ಟೂರ್ನಿಯಲ್ಲಿನ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮಂಕಾಯಿತು. ಆಂಗ್ಲರ ಪರ 37 ರನ್‌ ಗಳಿಸಿದ್ದ ರೂಟ್‌ ಅವರದ್ದೇ ವೈಯಕ್ತಿಕ ಗರಿಷ್ಠ ರನ್‌ ಆಗಿತ್ತು. ಇವರಿಗೆ ಜೊತೆಯಾಗಿ ಡಕೆಟ್‌ 24, ಹ್ಯಾರಿ ಬ್ರೂಕ್‌ 19, ನಾಯಕ ಬಟ್ಲರ್‌ 21, ಜೋಫ್ರಾ ಆರ್ಚರ್‌ 25 ರನ್‌ ಗಳಿಸಿದರು.

ದಕ್ಷಿಣಾ ಆಫ್ರಿಕಾ ಪರ ಮಾರ್ಕೋ ಯಾನ್ಸನ್‌, ಮುಲ್ಡರ್‌ ತಲಾ ಮೂರು ವಿಕೆಟ್‌, ಮಹಾರಾಜ್‌ ಎರಡು ವಿಕೆಟ್‌ಗಳಿಸಿ ಮಿಂಚಿದರು.

ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌: ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಹರಿಣ ಪಡೆಗೆ ಆರಂಭಿಕ ಆಘಾತ ಉಂಟಾಯಿತು. ಸ್ಟಬ್ಸ್‌ ಶೂನ್ಯಕ್ಕೆ ಔಟಾದರು. ರಿಯಾನ್‌ 27 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು.

ಬಳಿಕ ಒಂದಾದ ಡುಸೆನ್‌ ಹಾಗೂ ಕ್ಲಾಸೆನ್‌ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಹನ್ರಿಚ್‌ ಕ್ಲಾಸೆನ್‌ 56 ಎಸತಗಳಲ್ಲಿ 11 ಬೌಂಡರಿ ಸಹಿತ 64 ರನ್‌ ಬಾರಿಸಿದರು. ಡುಸೆನ್‌ ಔಟಾಗದೇ 87 ಎಸತ, 6 ಬೌಂಡರಿ, 3 ಸಿಕ್ಸರ್‌ ಸಹಿತ 72 ರನ್‌ ಗಳಿಸಿದರು. ಕೊನೆಯಲ್ಲಿ ಬಂದ ಮಿಲ್ಲರ್‌ 7 ರನ್‌ ಬಾರಿಸಿ ಗೆಲುವಿನ ನಗೆ ಬೀರಿದರು.

ಜೋಫ್ರಾ ಆರ್ಚರ್‌ ಎರಡು, ಆದಿಲ್‌ ರಶೀದ್‌ ಒಂದು ವಿಕೆಟ್‌ ಕಬಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

2 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

3 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

10 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

10 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

15 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

15 hours ago