ಕ್ರೀಡೆ

Champions Trophy 2025: ಇಂಗ್ಲೆಂಡ್‌ ಮಣಿಸಿ ಸೆಮಿಸ್‌ಗೆ ಲಗ್ಗೆಯಿಟ್ಟ ಹರಿಣ ಪಡೆ

ಕರಾಚಿ: ಮಾರ್ಕೋ ಯಾನ್ಸನ್‌, ಮುಲ್ಡರ್‌ ಪ್ರಭಾವಿ ಬೌಲಿಂಗ್‌ ದಾಳಿ, ಕ್ಲಾಸೆನ್‌ ಹಾಗೂ ಡುಸೆನ್‌ ಅವರ ಬ್ಯಾಟಿಂಗ್‌ ಸಹಾಯದ ಬಲದಿಂದ ಬಲಿಷ್ಠ ಇಂಗ್ಲೆಂಡ ತಂಡವನ್ನು ಬಗ್ಗು ಬಡಿದ ದಕ್ಷಿಣಾ ಆಫ್ರಿಕಾ ತಂಡ ಐಸಿಸಿ ಚಾಂಪಿಯನ್ಸ್‌ ಟ್ರೋಫಿ-2025 ರ ಟೂರ್ನಿಯಲ್ಲಿ ಸೆಮಿಸ್‌ಗೆ ಲಗ್ಗೆಯಿಟ್ಟಿದೆ.

ಇಲ್ಲಿನ ಕರಾಚಿ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಇಂಗ್ಲೆಂಡ್‌ 38.2 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 179 ರನ್‌ ಗಳಿಸಿತು. ಈ ಮೊತ್ತ ಬೆನ್ನತ್ತಿದ ದಕ್ಷಿಣಾ ಆಫ್ರಿಕಾ 29.1 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 181 ರನ್‌ ಗಳಿಸಿ 7 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿದೆ.

ಇಂಗ್ಲೆಂಡ್‌ ಇನ್ನಿಂಗ್ಸ್‌: ಟೂರ್ನಿಯಲ್ಲಿ ತೀರಾ ಕಳಪೆ ಪ್ರದರ್ಶನ ಮುಂದುವರಿಸಿದ ಇಂಗ್ಲೆಂಡ್‌ ಟೂರ್ನಿಯಲ್ಲಿನ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮಂಕಾಯಿತು. ಆಂಗ್ಲರ ಪರ 37 ರನ್‌ ಗಳಿಸಿದ್ದ ರೂಟ್‌ ಅವರದ್ದೇ ವೈಯಕ್ತಿಕ ಗರಿಷ್ಠ ರನ್‌ ಆಗಿತ್ತು. ಇವರಿಗೆ ಜೊತೆಯಾಗಿ ಡಕೆಟ್‌ 24, ಹ್ಯಾರಿ ಬ್ರೂಕ್‌ 19, ನಾಯಕ ಬಟ್ಲರ್‌ 21, ಜೋಫ್ರಾ ಆರ್ಚರ್‌ 25 ರನ್‌ ಗಳಿಸಿದರು.

ದಕ್ಷಿಣಾ ಆಫ್ರಿಕಾ ಪರ ಮಾರ್ಕೋ ಯಾನ್ಸನ್‌, ಮುಲ್ಡರ್‌ ತಲಾ ಮೂರು ವಿಕೆಟ್‌, ಮಹಾರಾಜ್‌ ಎರಡು ವಿಕೆಟ್‌ಗಳಿಸಿ ಮಿಂಚಿದರು.

ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌: ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಹರಿಣ ಪಡೆಗೆ ಆರಂಭಿಕ ಆಘಾತ ಉಂಟಾಯಿತು. ಸ್ಟಬ್ಸ್‌ ಶೂನ್ಯಕ್ಕೆ ಔಟಾದರು. ರಿಯಾನ್‌ 27 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು.

ಬಳಿಕ ಒಂದಾದ ಡುಸೆನ್‌ ಹಾಗೂ ಕ್ಲಾಸೆನ್‌ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಹನ್ರಿಚ್‌ ಕ್ಲಾಸೆನ್‌ 56 ಎಸತಗಳಲ್ಲಿ 11 ಬೌಂಡರಿ ಸಹಿತ 64 ರನ್‌ ಬಾರಿಸಿದರು. ಡುಸೆನ್‌ ಔಟಾಗದೇ 87 ಎಸತ, 6 ಬೌಂಡರಿ, 3 ಸಿಕ್ಸರ್‌ ಸಹಿತ 72 ರನ್‌ ಗಳಿಸಿದರು. ಕೊನೆಯಲ್ಲಿ ಬಂದ ಮಿಲ್ಲರ್‌ 7 ರನ್‌ ಬಾರಿಸಿ ಗೆಲುವಿನ ನಗೆ ಬೀರಿದರು.

ಜೋಫ್ರಾ ಆರ್ಚರ್‌ ಎರಡು, ಆದಿಲ್‌ ರಶೀದ್‌ ಒಂದು ವಿಕೆಟ್‌ ಕಬಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

13 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

14 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

14 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

16 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

20 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

20 hours ago