ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ 2025: ಶುಭಾರಂಭದ ನಿರೀಕ್ಷೆಯಲ್ಲಿ ಭಾರತ

ದುಬೈ: ಐಸಿಸಿ ಚಾಂಪಿಯನ್ಸ್‌ ಟ್ರೋಫಿ-2025 ಕ್ರಿಕೆಟ್‌ ಟೂರ್ನಿಯಲ್ಲಿಂದು ಭಾರತ ತಂಡ ಬಾಂಗ್ಲಾದೇಶ ವಿರುದ್ಧ ತನ್ನ ಮೊದಲ ಪಂದ್ಯವಾಡಲಿದ್ದು, ಶುಭಾರಂಭದ ನಿರೀಕ್ಷೆಯಲ್ಲಿದೆ.

ತವರಿನಲ್ಲಿ ಇಂಗ್ಲೆಂಡ್‌ ವಿರುದ್ದ ಸರಣಿ ಗೆದ್ದು ಆತ್ಮವಿಶ್ವಾಸದಲ್ಲಿರುವ ಟೀ ಇಂಡಿಯಾ ಇಂದಿನ ಪಂದ್ಯದಲ್ಲಿ ಹೇಗೆ ಆಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಈಗಾಗಲೇ ಎರಡು ಬಾರಿ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಗೆದ್ದಿರುವ ಭಾರತ ತಂಡ, ಮೂರನೇ ಬಾರಿ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಗೆಲ್ಲಲು ರೋಹಿತ್‌ ಶರ್ಮಾ ನೇತೃತ್ವದಲ್ಲಿ ಟೀಂ ಇಂಡಿಯಾ ದುಬೈಗೆ ಬಂದಿಳಿದಿದೆ.

ಇತ್ತ ಬಾಂಗ್ಲಾದೇಶ ತಂಡವನ್ನು ಕೂಡ ಕಡೆಗಣಿಸುವಂತಿಲ್ಲ. ಐಸಿಸಿ ಟೂರ್ನಿಯಲ್ಲಿ ಭಾರತ ತಂಡದ ವಿರುದ್ಧ ಉತ್ತಮ ಸಾಧನೆ ಇಲ್ಲದಿದ್ದರೂ, ಹಿರಿಯ ಮತ್ತು ಕಿರಿಯ ಪಡೆಯೊಂದಿಗೆ ಟೂರ್ನಿ ಶುಭಾರಂಭಕ್ಕೆ ಬಾಂಗ್ಲಾ ತಂಡ ಕೂಡ ಎದುರು ನೋಡುತ್ತಿದೆ.

ಇದುವರೆಗೂ ಭಾರತ ಮತ್ತು ಬಾಂಗ್ಲಾ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲ 41 ಬಾರಿ ಎದುರಾಗಿದ್ದು, 32 ಪಂದ್ಯಗಳಲ್ಲಿ ಭಾರತ, 8ರಲ್ಲಿ ಬಾಂಗ್ಲಾ ಗೆಲುವ ಸಾಧಿಸಿದ್ದರೆ, 1 ಪಂದ್ಯ ಫಲಿತಾಂಸವಿಲ್ಲದೇ ರದ್ದಾಗಿದೆ.

ಭಾರತ: ರೋಹಿತ್‌ ಶರ್ಮಾ (ನಾಯಕ), ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಕೆಎಲ್‌ ರಾಹುಲ್‌, ರಿಷಭ್‌ ಪಂತ್‌, ಹಾರ್ದಿಕ್‌ ಪಾಂಡ್ಯ, ಅಕ್ಷರ್‌ ಪಟೇಲ್‌, ವಾಷಿಂಗ್ಟನ್‌ ಸುಂದರ್‌, ಕುಲದೀಪ್‌ ಯಾದವ್‌, ಹರ್ಷಿತ್‌ ರಾಣಾ, ಮೊಹಮ್ಮದ್‌ ಶಮಿ, ಅರ್ಷದೀಪ್‌ ಸಿಂಗ್‌, ರವೀಂದ್ರ ಜಡೇಜಾ, ವರುಣ್‌ ಚಕ್ರವರ್ತಿ.

ಬಾಂಗ್ಲಾದೇಶ: ನಜ್ಮುಲ್‌ ಹುಸೇನ್‌ ಶಾಂತೊ(ನಾಯಕ), ಸೌಮ್ಯ ಸರ್ಕಾರ್‌, ತಂಜೀದ್‌ ಹಸನ್‌, ಮುಷ್ಫಿಕರ್‌ ರಹೀಮ್‌, ಮಹಮ್ಮದುಲ್ಲಾ, ಮೆಹದಿ ಹಸನ್‌, ಜಕೀರ್‌ ಅಲಿ, ತಸ್ಕಿನ್‌ ಅಹಮದ್‌, ತಂಜಿಮ್‌ ಹಸನ್‌ ಶಕೀಬ್‌, ನಹೀದ್‌ ರಾಣಾ, ಮುಸ್ತಫಿಜುರ್‌ ರೆಹಮಾನ್‌, ತವಾಹಿದ್ ಹೃದಯ್‌, ರಿಹಾದ್‌ ಹುಸೇನ್‌, ಪರ್ವೇಜ್‌ ಹೊಸಾಯ್‌.

ಪಂದ್ಯ ಆರಂಭ: ಮಧ್ಯಾಹ್ನ 2.30PM
ನೇರಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌ ನೆಟ್‌ವರ್ಕ್‌, ಜಿಯೊಹಾಟ್‌ ಸ್ಟಾರ್‌ ಆಪ್‌

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

3 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

3 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

4 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

5 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

5 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

5 hours ago