ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ 2025: ಶುಭಾರಂಭದ ನಿರೀಕ್ಷೆಯಲ್ಲಿ ಭಾರತ

ದುಬೈ: ಐಸಿಸಿ ಚಾಂಪಿಯನ್ಸ್‌ ಟ್ರೋಫಿ-2025 ಕ್ರಿಕೆಟ್‌ ಟೂರ್ನಿಯಲ್ಲಿಂದು ಭಾರತ ತಂಡ ಬಾಂಗ್ಲಾದೇಶ ವಿರುದ್ಧ ತನ್ನ ಮೊದಲ ಪಂದ್ಯವಾಡಲಿದ್ದು, ಶುಭಾರಂಭದ ನಿರೀಕ್ಷೆಯಲ್ಲಿದೆ.

ತವರಿನಲ್ಲಿ ಇಂಗ್ಲೆಂಡ್‌ ವಿರುದ್ದ ಸರಣಿ ಗೆದ್ದು ಆತ್ಮವಿಶ್ವಾಸದಲ್ಲಿರುವ ಟೀ ಇಂಡಿಯಾ ಇಂದಿನ ಪಂದ್ಯದಲ್ಲಿ ಹೇಗೆ ಆಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಈಗಾಗಲೇ ಎರಡು ಬಾರಿ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಗೆದ್ದಿರುವ ಭಾರತ ತಂಡ, ಮೂರನೇ ಬಾರಿ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಗೆಲ್ಲಲು ರೋಹಿತ್‌ ಶರ್ಮಾ ನೇತೃತ್ವದಲ್ಲಿ ಟೀಂ ಇಂಡಿಯಾ ದುಬೈಗೆ ಬಂದಿಳಿದಿದೆ.

ಇತ್ತ ಬಾಂಗ್ಲಾದೇಶ ತಂಡವನ್ನು ಕೂಡ ಕಡೆಗಣಿಸುವಂತಿಲ್ಲ. ಐಸಿಸಿ ಟೂರ್ನಿಯಲ್ಲಿ ಭಾರತ ತಂಡದ ವಿರುದ್ಧ ಉತ್ತಮ ಸಾಧನೆ ಇಲ್ಲದಿದ್ದರೂ, ಹಿರಿಯ ಮತ್ತು ಕಿರಿಯ ಪಡೆಯೊಂದಿಗೆ ಟೂರ್ನಿ ಶುಭಾರಂಭಕ್ಕೆ ಬಾಂಗ್ಲಾ ತಂಡ ಕೂಡ ಎದುರು ನೋಡುತ್ತಿದೆ.

ಇದುವರೆಗೂ ಭಾರತ ಮತ್ತು ಬಾಂಗ್ಲಾ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲ 41 ಬಾರಿ ಎದುರಾಗಿದ್ದು, 32 ಪಂದ್ಯಗಳಲ್ಲಿ ಭಾರತ, 8ರಲ್ಲಿ ಬಾಂಗ್ಲಾ ಗೆಲುವ ಸಾಧಿಸಿದ್ದರೆ, 1 ಪಂದ್ಯ ಫಲಿತಾಂಸವಿಲ್ಲದೇ ರದ್ದಾಗಿದೆ.

ಭಾರತ: ರೋಹಿತ್‌ ಶರ್ಮಾ (ನಾಯಕ), ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಕೆಎಲ್‌ ರಾಹುಲ್‌, ರಿಷಭ್‌ ಪಂತ್‌, ಹಾರ್ದಿಕ್‌ ಪಾಂಡ್ಯ, ಅಕ್ಷರ್‌ ಪಟೇಲ್‌, ವಾಷಿಂಗ್ಟನ್‌ ಸುಂದರ್‌, ಕುಲದೀಪ್‌ ಯಾದವ್‌, ಹರ್ಷಿತ್‌ ರಾಣಾ, ಮೊಹಮ್ಮದ್‌ ಶಮಿ, ಅರ್ಷದೀಪ್‌ ಸಿಂಗ್‌, ರವೀಂದ್ರ ಜಡೇಜಾ, ವರುಣ್‌ ಚಕ್ರವರ್ತಿ.

ಬಾಂಗ್ಲಾದೇಶ: ನಜ್ಮುಲ್‌ ಹುಸೇನ್‌ ಶಾಂತೊ(ನಾಯಕ), ಸೌಮ್ಯ ಸರ್ಕಾರ್‌, ತಂಜೀದ್‌ ಹಸನ್‌, ಮುಷ್ಫಿಕರ್‌ ರಹೀಮ್‌, ಮಹಮ್ಮದುಲ್ಲಾ, ಮೆಹದಿ ಹಸನ್‌, ಜಕೀರ್‌ ಅಲಿ, ತಸ್ಕಿನ್‌ ಅಹಮದ್‌, ತಂಜಿಮ್‌ ಹಸನ್‌ ಶಕೀಬ್‌, ನಹೀದ್‌ ರಾಣಾ, ಮುಸ್ತಫಿಜುರ್‌ ರೆಹಮಾನ್‌, ತವಾಹಿದ್ ಹೃದಯ್‌, ರಿಹಾದ್‌ ಹುಸೇನ್‌, ಪರ್ವೇಜ್‌ ಹೊಸಾಯ್‌.

ಪಂದ್ಯ ಆರಂಭ: ಮಧ್ಯಾಹ್ನ 2.30PM
ನೇರಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌ ನೆಟ್‌ವರ್ಕ್‌, ಜಿಯೊಹಾಟ್‌ ಸ್ಟಾರ್‌ ಆಪ್‌

AddThis Website Tools
ಆಂದೋಲನ ಡೆಸ್ಕ್

Recent Posts

ಕಾರ್ಮಿಕ ಇಲಾಖೆಯ ನ್ಯೂಟ್ರಿಷನ್‌ ಕಿಟ್‌ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ: ಬಿಜೆಪಿ ಆರೋಪ

ಬೆಂಗಳೂರು: ಕಾರ್ಮಿಕರ ಹೆಸರಿನಲ್ಲಿ ದುಡ್ಡು ತಿಂದ ರಾಜ್ಯ ಸರ್ಕಾರ, ನ್ಯೂಟ್ರಿಷನ್‌ ಕಿಟ್‌ ಹೆಸರಿನಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಿದೆ…

4 mins ago

WPL final: ಚಾಂಪಿಯನ್‌ ಪಟ್ಟಕ್ಕಾಗಿ ಮುಂಬೈ v/s ಡೆಲ್ಲಿ ಹೋರಾಟ

ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ (WPL) ಟಿ20 ಕ್ರಿಕೆಟ್‌ ಟೂನಿಯ ಫೈನಲ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌…

22 mins ago

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ಎರಡು ವರ್ಷದಲ್ಲಿ ರನ್ಯಾ ದುಬೈಗೆ ಎಷ್ಟು ಬಾರಿ ಹೋಗಿದ್ದರೂ ಗೊತ್ತಾ?

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧಿಯಾಗಿದ್ದು ನಟಿ ರನ್ಯಾರಾವ್‌ ಅವರು 2023ರ ಜೂನ್‌ನಿಂದ ಇಲ್ಲಿಯವರೆಗೂ 52 ಬಾರಿ ದುಬೈಗೆ ಹೋಗಿ…

26 mins ago

ಪ್ರತಾಪ್‌ ಸಿಂಹನ ಮಾತು ಹಾಗೂ ನಾಲಿಗೆ ಸ್ವಲ್ಪ ಸರಿಯಿಲ್ಲ: ತನ್ವೀರ್‌ ಸೇಠ್‌ ಕಿಡಿ

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಸಭ್ಯತೆ ಮೀರಿ ನಡೆದುಕೊಳ್ಳಬಾರದು ಎಂದು ಶಾಸಕ ತನ್ವೀರ್‌ ಸೇಠ್‌ ಸಲಹೆ ನೀಡಿದ್ದಾರೆ. ರಾಜ್ಯ…

52 mins ago

ತುರ್ತು ಸಭೆ: ಹಾವಳಿ ನೀಡುತ್ತಿರುವ ಪುಂಡಾನೆಗಳ ಸೆರೆಗೆ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಮತ್ತು ಅರೇಹಳ್ಳಿ ಸುತ್ತ-ಮುತ್ತ ಜನರಿಗೆ ಹಾವಳಿ ನೀಡುತ್ತಿರುವ 3 ಪುಂಡಾನೆಗಳನ್ನು ಪತ್ತೆಹಚ್ಚಲಾಗಿದೆ.…

59 mins ago

ಗುಂಡ್ಲಪೇಟೆ: ಬೀದಿ ನಾಯಿ ದಾಳಿಗೆ ಜಿಂಕೆ ಸಾವು

ಚಾಮರಾಜನಗರ: ಬೀದಿ ನಾಯಿ ದಾಳಿಗೆ ಜಿಂಕೆ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕಾಳನಹುಂಡಿ ಗ್ರಾಮದ ಆಂಜನೇಯ ಸ್ವಾಮಿ…

1 hour ago