ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ-2025 ಕ್ರಿಕೆಟ್ ಟೂರ್ನಿಯಲ್ಲಿಂದು ಭಾರತ ತಂಡ ಬಾಂಗ್ಲಾದೇಶ ವಿರುದ್ಧ ತನ್ನ ಮೊದಲ ಪಂದ್ಯವಾಡಲಿದ್ದು, ಶುಭಾರಂಭದ ನಿರೀಕ್ಷೆಯಲ್ಲಿದೆ.
ತವರಿನಲ್ಲಿ ಇಂಗ್ಲೆಂಡ್ ವಿರುದ್ದ ಸರಣಿ ಗೆದ್ದು ಆತ್ಮವಿಶ್ವಾಸದಲ್ಲಿರುವ ಟೀ ಇಂಡಿಯಾ ಇಂದಿನ ಪಂದ್ಯದಲ್ಲಿ ಹೇಗೆ ಆಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಈಗಾಗಲೇ ಎರಡು ಬಾರಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದಿರುವ ಭಾರತ ತಂಡ, ಮೂರನೇ ಬಾರಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಂ ಇಂಡಿಯಾ ದುಬೈಗೆ ಬಂದಿಳಿದಿದೆ.
ಇತ್ತ ಬಾಂಗ್ಲಾದೇಶ ತಂಡವನ್ನು ಕೂಡ ಕಡೆಗಣಿಸುವಂತಿಲ್ಲ. ಐಸಿಸಿ ಟೂರ್ನಿಯಲ್ಲಿ ಭಾರತ ತಂಡದ ವಿರುದ್ಧ ಉತ್ತಮ ಸಾಧನೆ ಇಲ್ಲದಿದ್ದರೂ, ಹಿರಿಯ ಮತ್ತು ಕಿರಿಯ ಪಡೆಯೊಂದಿಗೆ ಟೂರ್ನಿ ಶುಭಾರಂಭಕ್ಕೆ ಬಾಂಗ್ಲಾ ತಂಡ ಕೂಡ ಎದುರು ನೋಡುತ್ತಿದೆ.
ಇದುವರೆಗೂ ಭಾರತ ಮತ್ತು ಬಾಂಗ್ಲಾ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲ 41 ಬಾರಿ ಎದುರಾಗಿದ್ದು, 32 ಪಂದ್ಯಗಳಲ್ಲಿ ಭಾರತ, 8ರಲ್ಲಿ ಬಾಂಗ್ಲಾ ಗೆಲುವ ಸಾಧಿಸಿದ್ದರೆ, 1 ಪಂದ್ಯ ಫಲಿತಾಂಸವಿಲ್ಲದೇ ರದ್ದಾಗಿದೆ.
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.
ಬಾಂಗ್ಲಾದೇಶ: ನಜ್ಮುಲ್ ಹುಸೇನ್ ಶಾಂತೊ(ನಾಯಕ), ಸೌಮ್ಯ ಸರ್ಕಾರ್, ತಂಜೀದ್ ಹಸನ್, ಮುಷ್ಫಿಕರ್ ರಹೀಮ್, ಮಹಮ್ಮದುಲ್ಲಾ, ಮೆಹದಿ ಹಸನ್, ಜಕೀರ್ ಅಲಿ, ತಸ್ಕಿನ್ ಅಹಮದ್, ತಂಜಿಮ್ ಹಸನ್ ಶಕೀಬ್, ನಹೀದ್ ರಾಣಾ, ಮುಸ್ತಫಿಜುರ್ ರೆಹಮಾನ್, ತವಾಹಿದ್ ಹೃದಯ್, ರಿಹಾದ್ ಹುಸೇನ್, ಪರ್ವೇಜ್ ಹೊಸಾಯ್.
ಪಂದ್ಯ ಆರಂಭ: ಮಧ್ಯಾಹ್ನ 2.30PM
ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್, ಜಿಯೊಹಾಟ್ ಸ್ಟಾರ್ ಆಪ್
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…