ಕ್ರೀಡೆ

Champions trophy 2025| ಮಿಲ್ಲರ್‌ ಶತಕ ವ್ಯರ್ಥ: ಹರಿಣ ಪಡೆ ಮಣಿಸಿ ಫೈನಲ್ಸ್‌ಗೆ ಎಂಟ್ರಿಕೊಟ್ಟ ನ್ಯೂಜಿಲೆಂಡ್‌

ಲಾಹೋರ್‌: ಸಂಘಟಿತ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಬಲದಿಂದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಎರಡನೇ ಸೆಮಿ ಫೈನಲ್ಸ್‌ ಪಂದ್ಯದಲ್ಲಿ ದಕ್ಷಿಣಾ ಆಫ್ರಿಕಾ ವಿರುದ್ಧ 50 ರನ್‌ಗಳ ಅಂತರದಿಂದ ಗೆಲುವು ದಾಖಲಿಸಿದ ನ್ಯೂಜಿಲೆಂಡ್‌ ತಂಡ ಫೈನಲ್ಸ್‌ಗೆ ಎಂಟ್ರಿ ಕೊಟ್ಟಿದೆ. ಇದೇ ಮಾ.9 ರಂದು ನಡೆಯಲಿರುವ ಫೈನಲ್ಸ್‌ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಟ್ರೋಫಿಗಾಗಿ ಕಿವೀಸ್‌ ಹೋರಾಟ ನಡೆಸಲಿದೆ.

ಇಲ್ಲಿನ ಗಡಾಫಿ ಕ್ರೀಡಾಂಗಣದಲ್ಲಿ ನಡೆದ ನ್ಯೂಜಿಲೆಂಡ್‌ ಮತ್ತು ದಕ್ಷಿಣಾ ಆಫ್ರಿಕಾ ತಂಡಗಳ ನಡುವಣ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಕಿವೀಸ್‌ ನಿಗದಿತ ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 362 ರನ್‌ ಗಳಿಸಿತು. ಈ ಮೊತ್ತ ಬೆನ್ನತ್ತಿದ ದಕ್ಷಿಣಾ ಆಫ್ರಿಕಾ ತಂಡ 50 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 312 ರನ್‌ ಗಳಿಸಿ ರನ್‌ಗಳ 50 ಅಂತರದಿಂದ ಹೀನಾಯ ಸೋಲುಂಡಿತು.

ಕಿವೀಸ್‌ ಇನ್ನಿಂಗ್ಸ್‌: ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಕಿವೀಸ್‌ಗೆ ಆರಂಭಿಕ ಆಘಾತ ಎದುರಾಯಿತು. ವಿಲ್‌ ಯಂಗ್‌ 21 ರನ್‌ಗಳಿಗೆ ವಿಕೆಟ್‌ ಒಪ್ಪಿಸಿ ಹೊರ ನಡೆದರು. ವಿಲ್‌ ಯಂಗ್‌ ವಿಕೆಟ್‌ ಬಳಿಕ ಕಿವೀಸ್‌ ಆಟಗಾರರ ವಿಕೆಟ್‌ ಪಡೆಯಲು ಹರಿಣ ಪಡೆ ಪರದಾಡಿದರು.

ರಚಿನ್‌ ರವೀಂದ್ರ ಜೊತೆಯಾಗಿ ಬ್ಯಾಟ್‌ ಬೀಸಿದ ಕೇನ್‌ ವಿಲಿಯಮ್ಸನ್‌ ದ.ಆಫ್ರಿಕಾ ಬೌಲರ್‌ಗಳನ್ನು ಮನಬಂದಂತೆ ಕಾಡಿದರು. ರಚಿನ್‌ ರವೀಂದ್ರ 101 ಎಸೆತಗಳಲ್ಲಿ 13 ಬೌಂಡರಿ, 1 ಸಿಕ್ಸರ್‌ ಸಹಿತ 108 ರನ್‌ ಗಳಿಸಿದರೇ, ಕೇನ್‌ 94 ಎಸೆತಗಳಲ್ಲಿ 10 ಫೋರ್ಸ್‌ ಮತ್ತು 2 ಸಿಕ್ಸರ್‌ ಸೇರಿ 102 ರನ್‌ ಬಾರಿಸಿದರು. ಟಾಮ್‌ ಲಾಥಮ್‌ 4 ರನ್‌ ಗಳಿಸಿ ಔಟಾದರು.

ಕೊನೆಯಲ್ಲಿ ಅಬ್ಬರಿಸಿದ ಡೇರಿಯಲ್‌ ಮಿಚೆಲ್‌ 49(37) ಹಾಗೂ ಗ್ಲೇನ್‌ ಫಿಲಿಪ್ಸ್‌ ಔಟಾಗದೇ 49(27) ರನ್‌ ಚಚ್ಚಿ ತಂಡದ ಮೊತ್ತ 350ರ ಗಡಿ ದಾಟಲು ಸಹಕರಿಸಿದರು. ಉಳಿದಂತೆ ಬ್ರೇಸ್‌ವೆಲ್‌ 16, ಸ್ಯಾಂಟ್ನರ್‌ ಔಟಾಗದೇ 2 ರನ್‌ ಕಲೆಹಾಕಿದರು.

ದಕ್ಷಿಣಾ ಆಫ್ರಿಕಾ ಪರ ಲುಂಗಿ ಎನ್‌ಗಿಡಿ ಮೂರು, ರಬಾಡ ಎರಡು ವಿಕೆಟ್‌ ಹಾಗೂ ಮುಲ್ಡರ್‌ ಒಂದು ವಿಕೆಟ್‌ ಉರುಳಿಸಿದರು.

ದಕ್ಷಿಣಾ ಆಫ್ರಿಕಾ ಇನ್ನಿಂಗ್ಸ್‌: ಬೃಹತ್‌ ಮೊತ್ತ ಬೆನ್ನತ್ತಲು ಮುಂದಾದ ಹರಿಣ ಪಡೆಗೆ ನಿರೀಕ್ಷಿತ ಆರಂಭ ಸಿಗಲಿಲ್ಲ. ರಯಾನ್ ರಿಕೆಲ್ಟನ್ 17 ರನ್‌ ಗಳಿಸಿ ಔಟಾದರು. ನಾಯಕ ತೆಂಬಾ ಬವುಮಾ 56(71), ವ್ಯಾನ್‌ ಡರ್‌ ಡುಸೇನ್‌ 69(66) ಸ್ವಲ್ಪ ಕಾಡಿದರು. ಉಳಿದಂತೆ ಬೇರಾರಿಂದಲೂ ನಿರೀಕ್ಷಿತ ಆಟ ಕಂಡುಬರಲಿಲ್ಲ.

ಡೆವಿಡ್‌ ಮಿಲ್ಲರ್‌ ಅರ್ಧಶತಕ ಗಳಿಸಿ ಏಕಾಂಗಿ ಹೋರಾಟ ನಡೆಸಿದರು ತಂಡವನ್ನು ಗೆಲ್ಲಿಸಿಕೊಡಲು ಸಾಧ್ಯವಾಗಲಿಲ್ಲ. ಕೊನೆಯಲ್ಲಿ ಭರ್ಜರಿಯಾಗಿ ಬ್ಯಾಟ್‌ ಬೀಸಿದ ಮಿಲ್ಲರ್‌ 67 ಎಸೆತಗಳಲ್ಲಿ 10 ಬೌಂಡರಿ ಹಾಗೂ 4 ಸಿಕ್ಸರ್‌ ಸಹಿತ 100 ರನ್‌ ಗಳಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.

ಉಳಿದಂತೆ ಮಾರ್ಕ್ರಂ 31, ಕ್ಲಾಸೆನ್‌ 3, ಮುಲ್ಡರ್‌ 8, ಮಾರ್ಕೋ ಯಾನ್ಸನ್‌ 3, ಕೇಶವ್‌ ಮಹಾರಾಜ್‌ 1, ರಬಾಡ 16, ಎನ್‌ಗಿಡಿ ಔಟಾಗದೇ 1 ರನ್‌ ಗಳಿಸಿದರು.

ನ್ಯೂಜಿಲೆಂಡ್‌ ಪರ ನಾಯಕ ಸ್ಯಾಂಟ್ನರ್‌ ಮೂರು, ಮ್ಯಾಟ್‌ ಹೆನ್ರಿ, ಫಿಲಿಪ್ಸ್‌ ತಲಾ ಎರಡೆರೆಡು ವಿಕೆಟ್‌ ವಿಕೆಟ್‌ ಪಡೆದು ಮಿಂಚಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

26 mins ago

ಓದುಗರ ಪತ್ರ: ನಾಯಿ ಕಡಿತಕ್ಕೆ ಲಸಿಕೆ ಸರಬರಾಜು ಮಾಡಿ

ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…

28 mins ago

ಓದುಗರ ಪತ್ರ: ಕಸಾಪ ಭ್ರಷ್ಟರ ಕೈಗೆ ಸಿಗದಂತಾಗಲಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ…

30 mins ago

ಓದುಗರ ಪತ್ರ: ಸ್ವಾಗತಾರ್ಹ ಸದಾಶಯ!

ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು…

32 mins ago

ಗ್ರಾಮೀಣ ಪ್ರತಿಭೆ ನಿತಿಲ್ ಈಗ ಚಲನಚಿತ್ರ ನಾಯಕ ನಟ

ಮಂಜು ಕೋಟೆ ಕೋಟೆ: ಯುವಕನ ಪ್ರತಿಭೆ ಗುರುತಿಸಿ ಅವಕಾಶ ನೀಡಿರುವ ಕಾಲಘಟ್ಟ ಚಿತ್ರತಂಡ; ಜೂ.೧೯ರಂದು ಚಿತ್ರ ಬಿಡುಗಡೆ  ಎಚ್.ಡಿ.ಕೋಟೆ: ತಾಲ್ಲೂಕಿನ…

35 mins ago

ಕೈಕೊಟ್ಟ ಮಳೆ; ಬಾಡಿದ ಸೂರ್ಯಕಾಂತಿ ಬೆಳೆ

ಮಹೇಂದ್ರ ಹಸಗೂಲಿ ನಷ್ಟ ಹೊಂದಿದ ರೈತರಿಗೆ ಬೆಳೆ ವಿಮೆ ನೋಂದಣಿ ಜೊತೆಗೆ ಎಕರೆಗೆ ೫೦ ಸಾವಿರ ರೂ. ಪರಿಹಾರ ಭರಿಸಲು…

38 mins ago