ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ: ಫೈನಲ್‌ ಪ್ರವೇಶಿಸಿದ ಭಾರತ

ದುಬೈ: ಚೇಸಿಂಗ್‌ ಮಾಸ್ಟರ್‌ ವಿರಾಟ್‌ ಕೊಹ್ಲಿ 84(98), ಅವರ ಅತ್ಯಮೂಲ ಅರ್ಧಶತಕದ ನೆರವಿನಿಂದ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 4 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಮೊದಲ ತಂಡವಾಗಿ ಫೈನಲ್‌ ಪ್ರವೇಶಿಸಿದೆ.

ಇಲ್ಲಿನ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ ತಂಡ 49.3 ಓವರ್‌ಗಳಲ್ಲಿ 264 ರನ್‌ಗೆ ಆಲೌಟ್‌ ಆಯಿತು. ತಂಡದ ಪರ ಆರಂಭಿಕ ಆಟಗಾರ ಟ್ರಾವಿಸ್‌ ಹೆಡ್‌ 39(33) ಬಿರುಸಿನ ಆರಂಭ ನೀಡಿದರು. ನಂತರ, ನಾಯಕ ಸ್ಟೀವ್‌ ಸ್ಮಿತ್‌ 73(96) ಹಾಗೂ ಅಲೆಕ್ಸ್‌ ಕ್ಯಾರಿ 61(57) ಇಬ್ಬರು ಅರ್ಧಶತಕ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್‌ಗಳು ನಿರೀಕ್ಷೆಗೆ ತಕ್ಕಂತೆ ಆಡಲಿಲ್ಲ.

ಭಾರತ ತಂಡದ ಪರ ಮೊಹಮ್ಮದ್‌ ಶಮಿ 3 ವಿಕೆಟ್‌ ಪಡೆದರೆ, ವರುಣ್‌ ಚಕ್ರವರ್ತಿ ಮತ್ತು ರವೀಂದ್ರ ಜಡೇಜಾ ತಲಾ 2 ವಿಕೆಟ್‌ ಹಾಗೂ ಹಾರ್ದಿಕ್‌ ಮತ್ತು ಅಕ್ಷರ್‌ ತಲಾ ಒಂದು ವಿಕೆಟ್‌ ಪಡೆದರು.

ಸ್ಪರ್ಧಾತ್ಮಕ ಮೊತ್ತ ಬೆನ್ನಟ್ಟಿದ ಭಾರತ ತಂಡ 48.1 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 267 ರನ್‌ ಬಾರಿಸುವ ಮೂಲಕ ಫೈನಲ್‌ ತಲುಪಿತು.

ವಿರಾಟ್‌ ಕೊಹ್ಲಿ 84(98), ಶ್ರೇಯಸ್‌ ಅಯ್ಯರ್‌ 45(62), ಕೆಎಲ್‌ ರಾಹುಲ್‌ ಔಟಗದೇ 42(34), ಹಾರ್ದಿಕ್‌ ಪಾಂಡ್ಯ  28(24) ರನ್‌ ಗಳಿಸುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದರು.

ಆಸ್ಟ್ರೇಲಿಯಾ ತಂಡದ ಪರ ನಾಥನ್‌ ಎಲ್ಲಿಸ್‌ ಮತ್ತು ಆಡಂ ಜಂಪಾ ತಲಾ 2 ವಿಕೆಟ್‌ ಪಡೆದರೆ, ಉಳಿದಂತೆ ಡ್ವಾರ್ಶಿಸ್‌ ಮತ್ತು ಕೊನೊಲಿ ತಲಾ ಒಂದು ವಿಕೆಟ್‌ ಪಡೆದರು.

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

8 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

8 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

8 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

8 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

8 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago