ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ: ಫೈನಲ್‌ ಪ್ರವೇಶಿಸಿದ ಭಾರತ

ದುಬೈ: ಚೇಸಿಂಗ್‌ ಮಾಸ್ಟರ್‌ ವಿರಾಟ್‌ ಕೊಹ್ಲಿ 84(98), ಅವರ ಅತ್ಯಮೂಲ ಅರ್ಧಶತಕದ ನೆರವಿನಿಂದ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 4 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಮೊದಲ ತಂಡವಾಗಿ ಫೈನಲ್‌ ಪ್ರವೇಶಿಸಿದೆ.

ಇಲ್ಲಿನ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ ತಂಡ 49.3 ಓವರ್‌ಗಳಲ್ಲಿ 264 ರನ್‌ಗೆ ಆಲೌಟ್‌ ಆಯಿತು. ತಂಡದ ಪರ ಆರಂಭಿಕ ಆಟಗಾರ ಟ್ರಾವಿಸ್‌ ಹೆಡ್‌ 39(33) ಬಿರುಸಿನ ಆರಂಭ ನೀಡಿದರು. ನಂತರ, ನಾಯಕ ಸ್ಟೀವ್‌ ಸ್ಮಿತ್‌ 73(96) ಹಾಗೂ ಅಲೆಕ್ಸ್‌ ಕ್ಯಾರಿ 61(57) ಇಬ್ಬರು ಅರ್ಧಶತಕ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್‌ಗಳು ನಿರೀಕ್ಷೆಗೆ ತಕ್ಕಂತೆ ಆಡಲಿಲ್ಲ.

ಭಾರತ ತಂಡದ ಪರ ಮೊಹಮ್ಮದ್‌ ಶಮಿ 3 ವಿಕೆಟ್‌ ಪಡೆದರೆ, ವರುಣ್‌ ಚಕ್ರವರ್ತಿ ಮತ್ತು ರವೀಂದ್ರ ಜಡೇಜಾ ತಲಾ 2 ವಿಕೆಟ್‌ ಹಾಗೂ ಹಾರ್ದಿಕ್‌ ಮತ್ತು ಅಕ್ಷರ್‌ ತಲಾ ಒಂದು ವಿಕೆಟ್‌ ಪಡೆದರು.

ಸ್ಪರ್ಧಾತ್ಮಕ ಮೊತ್ತ ಬೆನ್ನಟ್ಟಿದ ಭಾರತ ತಂಡ 48.1 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 267 ರನ್‌ ಬಾರಿಸುವ ಮೂಲಕ ಫೈನಲ್‌ ತಲುಪಿತು.

ವಿರಾಟ್‌ ಕೊಹ್ಲಿ 84(98), ಶ್ರೇಯಸ್‌ ಅಯ್ಯರ್‌ 45(62), ಕೆಎಲ್‌ ರಾಹುಲ್‌ ಔಟಗದೇ 42(34), ಹಾರ್ದಿಕ್‌ ಪಾಂಡ್ಯ  28(24) ರನ್‌ ಗಳಿಸುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದರು.

ಆಸ್ಟ್ರೇಲಿಯಾ ತಂಡದ ಪರ ನಾಥನ್‌ ಎಲ್ಲಿಸ್‌ ಮತ್ತು ಆಡಂ ಜಂಪಾ ತಲಾ 2 ವಿಕೆಟ್‌ ಪಡೆದರೆ, ಉಳಿದಂತೆ ಡ್ವಾರ್ಶಿಸ್‌ ಮತ್ತು ಕೊನೊಲಿ ತಲಾ ಒಂದು ವಿಕೆಟ್‌ ಪಡೆದರು.

ಆಂದೋಲನ ಡೆಸ್ಕ್

Recent Posts

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

2 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

2 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

3 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

4 hours ago

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಟಿ.ನರಸೀಪುರ: ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…

4 hours ago