ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ: ಫೈನಲ್‌ ಪ್ರವೇಶಿಸಿದ ಭಾರತ

ದುಬೈ: ಚೇಸಿಂಗ್‌ ಮಾಸ್ಟರ್‌ ವಿರಾಟ್‌ ಕೊಹ್ಲಿ 84(98), ಅವರ ಅತ್ಯಮೂಲ ಅರ್ಧಶತಕದ ನೆರವಿನಿಂದ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 4 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಮೊದಲ ತಂಡವಾಗಿ ಫೈನಲ್‌ ಪ್ರವೇಶಿಸಿದೆ.

ಇಲ್ಲಿನ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ ತಂಡ 49.3 ಓವರ್‌ಗಳಲ್ಲಿ 264 ರನ್‌ಗೆ ಆಲೌಟ್‌ ಆಯಿತು. ತಂಡದ ಪರ ಆರಂಭಿಕ ಆಟಗಾರ ಟ್ರಾವಿಸ್‌ ಹೆಡ್‌ 39(33) ಬಿರುಸಿನ ಆರಂಭ ನೀಡಿದರು. ನಂತರ, ನಾಯಕ ಸ್ಟೀವ್‌ ಸ್ಮಿತ್‌ 73(96) ಹಾಗೂ ಅಲೆಕ್ಸ್‌ ಕ್ಯಾರಿ 61(57) ಇಬ್ಬರು ಅರ್ಧಶತಕ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್‌ಗಳು ನಿರೀಕ್ಷೆಗೆ ತಕ್ಕಂತೆ ಆಡಲಿಲ್ಲ.

ಭಾರತ ತಂಡದ ಪರ ಮೊಹಮ್ಮದ್‌ ಶಮಿ 3 ವಿಕೆಟ್‌ ಪಡೆದರೆ, ವರುಣ್‌ ಚಕ್ರವರ್ತಿ ಮತ್ತು ರವೀಂದ್ರ ಜಡೇಜಾ ತಲಾ 2 ವಿಕೆಟ್‌ ಹಾಗೂ ಹಾರ್ದಿಕ್‌ ಮತ್ತು ಅಕ್ಷರ್‌ ತಲಾ ಒಂದು ವಿಕೆಟ್‌ ಪಡೆದರು.

ಸ್ಪರ್ಧಾತ್ಮಕ ಮೊತ್ತ ಬೆನ್ನಟ್ಟಿದ ಭಾರತ ತಂಡ 48.1 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 267 ರನ್‌ ಬಾರಿಸುವ ಮೂಲಕ ಫೈನಲ್‌ ತಲುಪಿತು.

ವಿರಾಟ್‌ ಕೊಹ್ಲಿ 84(98), ಶ್ರೇಯಸ್‌ ಅಯ್ಯರ್‌ 45(62), ಕೆಎಲ್‌ ರಾಹುಲ್‌ ಔಟಗದೇ 42(34), ಹಾರ್ದಿಕ್‌ ಪಾಂಡ್ಯ  28(24) ರನ್‌ ಗಳಿಸುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದರು.

ಆಸ್ಟ್ರೇಲಿಯಾ ತಂಡದ ಪರ ನಾಥನ್‌ ಎಲ್ಲಿಸ್‌ ಮತ್ತು ಆಡಂ ಜಂಪಾ ತಲಾ 2 ವಿಕೆಟ್‌ ಪಡೆದರೆ, ಉಳಿದಂತೆ ಡ್ವಾರ್ಶಿಸ್‌ ಮತ್ತು ಕೊನೊಲಿ ತಲಾ ಒಂದು ವಿಕೆಟ್‌ ಪಡೆದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

21 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

21 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

21 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

21 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

21 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

22 hours ago