ಕ್ರೀಡೆ

ಚಾಂಪಿಯನ್‌ ಟ್ರೋಫಿ ಕ್ರಿಕೆಟ್‌ : ಪಾಕ್‌ ವಿರುದ್ಧ ಭಾರತಕ್ಕೆ ಜಯ

ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ನಡೆದ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಪಂದ್ಯದಲ್ಲಿ ಭಾರತ ತಂಡ ಪಾಕಸ್ತಾನ್ ತಂಡದ ವಿರುದ್ಧ ಜಯ ಸಾಧಿಸಿತು.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ‌ 49.4 ಓವರ್‌ಗಳಲ್ಲಿ 241 ರನ್‌ಗಳಿಗೆ ಆಲೌಟ್‌ ಆಯಿತು. ಈ ಮೊತ್ತ ಬೆನ್ನತ್ತಿದ ಭಾರತ 42.3 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ ನಷ್ಟಕ್ಕೆ ವಿಜಯದ ಕೇಕೆ ಹಾಕಿತು. ಇದರಿಂದ ಕ್ರೀಡಾಂಗಣದಲ್ಲಿ ನೆರದಿದ್ದ ಲಕ್ಷಾಂತರ ಭಾರತದ ಪರ ಕ್ರಿಕೆಟ್‌ ಅಭಿಮಾನಿಗಳು ಕುಣಿದು ಕುಪ್ಪಳಿಸಿದರು.

ರನ್‌ ಮೆಷಿನ್‌ ವಿರಾಟ್‌ ಕೊಹ್ಲಿ ಅವರ ಶತಕದಾಟ, ಶ್ರೇಯಸ್‌ ಅಯ್ಯರ್‌ ಅವರ ಅರ್ಧಶತಕದ ನೆರವಿನಿಂದ ಪಾಕಿಸ್ತಾನ ಮಣಿಸಿದ ಭಾರತ ತಂಡ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಸೆಮಿಸ್‌ಗೆ ಅರ್ಹತೆ ಪಡೆದುಕೊಂಡಿದೆ.

ಪಾಕ್‌ ಇನ್ನಿಂಗ್ಸ್‌:  ಮೊದಲು ಬ್ಯಾಟ್‌ ಮಾಡಲು ಬಂದ ಪಾಕಿಸ್ತಾನ ಪರವಾಗಿ ಬಾಬರ್‌ ಅಜಂ ಹಾಗೂ ಇಮಾಮ್‌ ಉಲ್‌-ಹಕ್‌ ಇನ್ನಿಂಗ್ಸ್‌ ಆರಂಭಿಸಿದರು. ಆದರೆ ಭಾರತ ತಂಡದ ಬೌಲರ್‌ಗಳ ದಾಳಿಗೆ ತತ್ತರಿಸಿದರು. ಬಾಬರ್‌ ಅಜಂ 23 ರನ್‌ ಗಳಿಸಿ ಹಾರ್ದಿಕ್‌ ಪಾಂಡ್ಯಗೆ ವಿಕೆಟ್‌ ಒಪ್ಪಿಸಿ ಹೊರನಡೆದರು. ಇಮಾಮ್‌ 10 ರನ್‌ ಗಳಿಸಿದ್ದ ವೇಳೆ ಇಲ್ಲದ ರನ್‌ ಕದಿಯಲು ಹೋಗಿ ಅಕ್ಷರ್‌ ಪಟೇಲ್‌ ಗುಡ್‌ ಥ್ರೋಗೆ ವಿಕೆಟ್‌ ಕಳೆದುಕೊಂಡರು.

ನಂತರ ಜೊತೆಯಾದ ಸೌದ್‌ ಶಾಕಿಲ್‌ ಹಾಗೂ ನಾಯಕ ಮೊಹಮ್ಮದ್‌ ರಿಜ್ವಾನ್‌ ಚೇತರಿಕೆಯ ಆಟವಾಡಿದರು. ಶಾಕಿಲ್‌ 76 ಎಸೆತಗಳಲ್ಲಿ 62 ರನ್‌ ಬಾರಿಸಿದರೇ, ಇತ್ತ ರಿಜ್ವಾನ್‌ 77 ಎಸೆತಗಳಲ್ಲಿ 46 ರನ್‌ ಬಾರಿಸಿದರು.

ಉಳಿದಂತೆ ಆಘಾ 19, ತಾಹೀರ್‌ 4, ಶಾಹೀನ್‌ ಶಾ ಅಫ್ರಿದಿ ಶೂನ್ಯ, ನಸೀಮ್‌ ಶಾ 14 ರನ್‌, ಹ್ಯಾರಿಸ್‌ ರೌಫ್‌ 8, ಗಳಿಸಿದರು. ಕೊನೆಯಲ್ಲಿ ಅಬ್ಬರಿಸಿದ ಕುಶ್ದಿಲ್‌ ಶಾ 38 ರನ್‌ ಗಳಿಸಿದರು. ಅಬ್ರಾರ್‌ ಯಾವುದೇ ಖಾತೆ ತೆರೆಯದೇ ನಾಟ್‌ಔಟ್‌ ಆಗಿ ಉಳಿದರು.

ಟೀಂ ಇಂಡಿಯಾ ಪರವಾಗಿ ಕುಲ್ದೀಪ್‌ ಯಾದವ್‌ ಮೂರು, ಹಾರ್ದಿಕ್‌ ಪಾಂಡ್ಯ ಎರಡು ವಿಕೆಟ್‌, ಅಕ್ಷರ್‌ ಪಟೇಲ್‌, ಜಡೆಜಾ ಹಾಗೂ ಹರ್ಷಿತ್‌ ರಾಣಾ ತಲಾ ಒಂದೊಂದು ವಿಕೆಟ್‌ ಕಬಳಿಸಿ ಮಿಂಚಿದರು.

ಟೀಂ ಇಂಡಿಯಾ ಇನ್ನಿಂಗ್ಸ್‌: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಭಾರತ ತಂಡಕ್ಕೆ ನಿರೀಕ್ಷಿತ ಆರಂಭ ಸಿಗಲಿಲ್ಲ. ನಾಯಕ ರೋಹಿತ್‌ ಶರ್ಮಾ 20 ರನ್‌ಗಳಿಗೆ ಇನ್ನಿಂಗ್ಸ್‌ ಮುಗಿಸಿದರು. ಶುಭ್‌ಮನ್‌ ಗಿಲ್‌ 46 ರನ್‌ ಗಳಿಸಿ ಅಬ್ರಾರ್‌ಗೆ ವಿಕೆಟ್‌ ಒಪ್ಪಿಸಿ ಹೊರನಡೆದರು.

ನಂತರ ಒಂದಾದ ವಿರಾಟ್‌ ಕೊಹ್ಲಿ ಮತ್ತು ಶ್ರೇಯಸ್‌ ಅಯ್ಯರ್‌ ಪಾಕ್‌ ಬೌಲರ್‌ಗಳನ್ನು ಕಾಡಿದರು. ಶ್ರೇಯಸ್‌ ಅಯ್ಯರ್‌ 67 ಎಸೆತಗಳಲ್ಲಿ 56 ರನ್‌ ಗಳಿಸಿ ಔಟಾದರು. ಬಳಿಕ ಬಂದ ಹಾರ್ದಿಕ್‌ ಪಾಂಡ್ಯ 8 ರನ್‌ ಗಳಿಸಿ ಬಂದಷ್ಟೆ ವೇಗವಾಗಿ ಹಿಂತಿರುಹಿದರು.

ಕೊನೆಯಲ್ಲಿ ಅಕ್ಷರ್‌ ವಿರಾಟ್‌ ಕೊಹ್ಲಿಗೆ ಸಾಥ್‌ ನೀಡಿದರು. ಅಕ್ಷರ್‌ ಔಟಾಗದೇ 3 ರನ್‌ ಗಳಿಸಿದರೇ, ಕಿಂಗ್‌ ಕೊಹ್ಲಿ ಔಟಾಗದೇ 111 ಎಸೆತಗಳಲ್ಲಿ 7 ಬೌಂಡರಿ ಸಹಿತ 100 ರನ್‌ ಗಳಿಸಿ ತಂಡಕ್ಕೆ ಗೆಲುವು ತಂದಿಟ್ಟರು.

ಪಾಕ್‌ ಪರವಾಗಿ ಶಾಹೀನ್‌ ಅಫ್ರಿದಿ ಎರಡು, ಕಶ್ದಿಲ್‌ ಹಾಗೂ ಅಬ್ರಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಪಂದ್ಯಶ್ರೇಷ್ಠ: ವಿರಾಟ್‌ ಕೊಹ್ಲಿ

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

4 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

5 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

6 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

7 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

11 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

11 hours ago