ಕ್ರೀಡೆ

Champions Trophy Final | ಚಾಂಪಿಯನ್ಸ್‌ ಟ್ರೋಫಿ ಗೆದ್ದ ಇಂಡಿಯಾ

ದುಬೈ : ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ನಡೆದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಸರಣಿಯ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ ಭಾರತ ತಂಡ ಟ್ರೋಫಿಯನ್ನು ಎತ್ತಿಹಿಡಿದಿದೆ.  ಈ ಮೂಲಕ ಟೂರ್ನಿಯುದ್ದಕ್ಕೂ ಅಜೇಯ ಓಟ ಮುಂದುವರಿಸಿದ ಹಿಟ್‌ ಮ್ಯಾನ್‌ ಸಾರಥ್ಯದ ಭಾರತ ತಂಡ ಒಂದೇ ಒಂದು ಪಂದ್ಯವನ್ನು ಸೋಲದೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಕಿವೀಸ್‌ ಪಡೆ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 251 ರನ್‌ ಗಳಿಸಿತು. ಈ ಮೊತ್ತ ಬೆನ್ನತ್ತಿದ ಭಾರತ ತಂಡ ಒಂದು ಓವರ್‌ ಬಾಕಿ ಇರುವಾಗಲೇ ಜಯ ಸಾಧಿಸಿತು.

ನ್ಯೂಜಿಲೆಂಡ್‌ ಇನ್ನಿಂಗ್ಸ್‌: ಭಾರತ ತಂಡದ ವಿರುದ್ಧ ಫೈನಲ್ಸ್‌ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಕಿವೀಸ್‌ಗೆ ನಿರೀಕ್ಷಿತ ಆರಂಭ ಸಿಗಲಿಲ್ಲ. ವಿಲ್‌ ಯಂಗ್‌ 15 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರೇ, ರಚಿನ್‌ ರವೀಂದ್ರ 37 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು.

ಡೇರಿಯಲ್‌ ಮಿಚೆಲ್‌ 63(101) ರನ್‌ ಗಳಿಸಿದ್ದೆ ಕಿವೀಸ್‌ ಪರ ಬಂದ ವೈಯಕ್ತಿಕ ಗರಿಷ್ಠ ರನ್‌ ಆಗಿತ್ತು. ಉಳಿದಂತೆ ಬೇರಾರಿಂದಲೂ ಉತ್ತಮ ಜೊತೆಯಾಟ ಸಿಗಲಿಲ್ಲ. ಕೇನ್‌ ವಿಲಿಯಮ್ಸನ್‌ 11, ಟಾಮ್‌ ಲಾಥಮ್‌ 14, ಗ್ಲೇನ್‌ ಫಿಲಿಪ್ಸ್‌ 34, ಮಿಚೆಲ್‌ ಸ್ಯಾಂಟ್ನರ್‌ 8 ರನ್‌ ಗಳಿಸಿದರು.

ಕೊನೆಯಲ್ಲಿ ಅಬ್ಬರಿಸಿದ ಬ್ರೇಸ್‌ ವೆಲ್‌ 40 ಎಸೆತಗಳಲ್ಲಿ 53 ರನ್‌ ಗಳಿಸಿ ತಂಡದ ಮೊತ್ತ ಇನ್ನೂರೈವತ್ತರ ಗಡಿ ದಾಟಲು ಸಹಕರಿಸಿದರು.

ಟೀಂ ಇಂಡಿಯಾ ಪರವಾಗಿ ವರುಣ್‌ ಚಕ್ರವರ್ತಿ, ಕುಲ್ದೀಪ್‌ ಯಾದವ್‌ ತಲಾ ಎರಡು ವಿಕೆಟ್‌, ಜಡೇಜಾ ಹಾಗೂ ಶಮಿ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

ಟೀಂ ಇಂಡಿಯಾ ಇನ್ನಿಂಗ್ಸ್‌: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಭಾರತ ತಂಡಕ್ಕೆ ನಾಯಕ ರೋಹಿತ್‌ ಶರ್ಮಾ ಮತ್ತು ಶುಭ್‌ಮನ್‌ ಗಿಲ್‌ ಉತ್ತಮ ಆರಂಭ ಒದಗಿಸಿದರು. ಗಿಲ್‌ 31 ರನ್‌ ಗಳಿಸಿ ಔಟಾದರೇ, ನಾಯಕ ರೋಹಿತ್‌ ಶರ್ಮಾ 83 ಎಸೆತಗಳಲ್ಲಿ 7 ಬೌಂಡರಿ, 3 ಸಿಕ್ಸರ್‌ ಸಹಿತ 76 ರನ್‌ ಗಳಿಸಿ ಔಟಾದರು.

ಭರವಸೆ ಆಟಗಾರ ವಿರಾಟ್‌ ಕೊಹ್ಲಿ ಕೇವಲ ಒಂದು ರನ್‌ ಗಳಿಸಿ ಬ್ರೇಸ್ವೆಲ್‌ಗೆ ವಿಕೆಟ್‌ ಒಪ್ಪಿಸಿ ಹೊರ ನಡೆದರು.

ಬಳಿಕ ಜೊತೆಯಾದ ಶ್ರೇಯಸ್‌ ಅಯ್ಯರ್‌ ಮತ್ತು ಅಕ್ಷರ್‌ ಪಟೇಲ್‌ ಅರ್ಧಶತಕ ಜೊತೆಯಾಟ ನೀಡಿ ತಂಡದ ಗೆಲುವಿಗೆ ಸಹಕರಿಸಿದರು. ಶ್ರೇಯಸ್‌ 48, ಅಕ್ಷರ್‌ 29 ರನ್‌ ಕಲೆಹಾಕಿ ಔಟಾದರು.

ಕೊನೆಯಲ್ಲಿ ಒಂದಾದ ಕನ್ನಡಿಗ ಕೆ.ಎಲ್‌ ರಾಹುಲ್‌ ಹಾಗೂ ಹಾರ್ದಿಕ್‌ ಪಾಂಡ್ಯ ತಂಡವನ್ನು ಗೆಲುವಿನ ದಡ ಸೇರಿಸಿದರು. ಹಾರ್ದಿಕ್‌ 18 ರನ್‌ ಗಳಿಸಿ ಔಟಾದರೇ, ಕೆ.ಎಲ್‌ ರಾಹುಲ್‌ ಔಟಾಗದೇ 34, ಜಡೇಜಾ ಔಟಾಗದೇ 9 ರನ್‌ ಗಳಿಸಿ ಗೆಲುವಿನ ನಗೆ ಬೀರಿದರು.

ಕಿವೀಸ್‌ ಪರ ಮಿಚೆಲ್‌ ಸ್ಯಾಂಟ್ನರ್‌, ಬ್ರೇಸ್‌ವೆಲ್‌ ತಲಾ ಎರಡು ವಿಕೆಟ್‌, ಜಾಮಿಸನ್‌ ಹಾಗೂ ರಚಿನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…

1 hour ago

ಈ ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ: ಅಧಿಕ ಉಷ್ಣಾಂಶ

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…

1 hour ago

ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…

1 hour ago

ಏಪ್ರಿಲ್‌ನಲ್ಲಿ ಹೊಸ ದಾಖಲೆಯ 2.43 ಲಕ್ಷ ಕೋಟಿ ರೂ ಜಿಎಸ್‌ಟಿ ಸಂಗ್ರಹ

ನವದೆಹಲಿ: ಅಮೇರಿಕಾ-ಇರಾನ್‌ ಯುದ್ಧದ ಹೊರತಾಗಿಯೂ ಏಪ್ರಿಲ್.‌2026ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್‌ನಲ್ಲಿ…

1 hour ago

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

12 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

12 hours ago