ಕ್ರೀಡೆ

Champions Trophy ಮುಖಾಮುಖಿ: ಭಾರತvsಪಾಕಿಸ್ತಾನ್‌ ಯಾರದ್ದು ಮೇಲುಗೈ ಗೊತ್ತಾ?

ದುಬೈ: ಬಹುನಿರೀಕ್ಷಿತ ಬದ್ದ ವೈರಿಗಳ ಮುಖಾಮುಖಿಗೆ ವೇದಿಕೆ ಸಿದ್ದವಾಗಿ. ಪಾಕಿಸ್ತಾನ ಆಯೋಜಕತ್ವದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಲಿದ್ದು, ಕ್ರಿಕೆಟ್‌ ಅಭಿಮಾನಿಗಳಿಗೆ ರಸದೌತಣ ಸಿಗಲಿದೆ.

ಅಂದಹಾಗೆ ಇಂದು ಮದ್ಯಾಹ್ನ 2.30 ಗಂಟೆಗೆ ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕ್‌ ಕಾದಾಟ ನಡೆಸಲಿದೆ. ಇನ್ನು ಈ ಐತಿಹಾಸಿಕ ಕಾದಾಟಕ್ಕೆ ಕ್ರೀಡಾಲೋಕವೇ ಕಾದುಕೂತಿರುವುದು ಅಚ್ಚರಿ ಸಂಗತಿ.

ಇನ್ನು ಚಾಂಪಿಯನ್ಸ್‌ ಟ್ರೋಫಿಯಲ್ಲಿ ಈ ಇಬ್ಬರ ಈವರೆಗಿನ ಮುಖಾಮುಖಿ ಗಮನಿಸುವುದಾದರೇ, ಇತ್ತಂಡಗಳು ಈವರೆಗೆ ಐದು ಬಾರಿ ಮುಖಾಮುಖಿಯಾಗಿದ್ದು, ಅದರಲ್ಲಿ ಬರೋಬ್ಬರಿ ಮೂರು ಬಾರಿ ಗೆಲುವು ದಾಖಲಿಸಿರುವ ಪಾಕಿಸ್ತಾನ್‌ ಮುನ್ನಡೆ ಕಾಯ್ದುಕೊಂಡಿದೆ.

ಟೀಂ ಇಂಡಿಯಾ 2013, 2017ರಲ್ಲಿ ಬಿಟ್ಟರೇ ಇನ್ನೆಲ್ಲಿಯೂ ಗೆಲುವು ದಾಖಲಿಸಿಲ್ಲ. ಉಳಿದಂತೆ ಮೂರು ಬಾರಿ ಪಾಕಿಸ್ತಾನ ಗೆಲುವು ದಾಖಲಿಸಿದೆ. 2017ರ ಚಾಂಪಿಯನ್ಸ್‌ ಟ್ರೋಫಿ ಫೈನಲ್ಸ್‌ನಲ್ಲಿ ಭಾರತ ಮಣಿಸಿ ಟ್ರೋಫಿಗೆ ಮುತ್ತಿಟ್ಟಿದೆ.

ಮುಖಾಮುಖಿ ವಿವರ:
2004 ರಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿ ಮೊದಲ ಬಾರಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟೀಂ ಇಂಡಿಯಾ 200 ರನ್‌ ಗಳಿಗೆ ಆಲ್‌ಔಟ್‌ ಆದರೇ, ಇದನ್ನು ಚೇಸ್‌ ಮಾಡಿದ ಪಾಕ್‌ 3 ಅಂತರದ ಗೆಲುವು ದಾಖಲಿಸಿತ್ತು.

2009ರಲ್ಲಿ ಸೆಂಚೂರಿಯನ್‌ ನಲ್ಲಿ ಭಾರತ ಹಾಗೂ ಪಾಕ್‌ ಎರಡನೇ ಬಾರಿಗೆ ಮುಖಾಮುಖಿಯಾಗಿತ್ತು. ಮೊದಲು ಬ್ಯಾಟ್‌ ಮಾಡಿದ್ದ ಪಾಕ್‌ 303 ರನ್‌ ಬಾರಿಸಿದರೇ, ಈ ಮೊತ್ತ ಬೆನ್ನತ್ತಿದ್ದ ಭಾರತ ಕೇವಲ 248 ರನ್‌ ಗಳಿಗೆ ಆಲ್‌ಔಟ್‌ ಆಗಿ 54 ರನ್‌ಗಳ ಅಂತರದಿಂದ ಸೋಲು ಕಂಡಿತ್ತು.

2013ರಲ್ಲಿ ಬರ್ಮಿಂಗ್‌ ಹ್ಯಾಮ್‌ನಲ್ಲಿ ಮೂರನೇ ಬಾರಿಗೆ ಇತ್ತಂಡಗಳು ಮುಖಾಮುಖಿಯಾಗಿದ್ದವು. ಟೀಂ ಇಂಡಿಯಾ ಪ್ರದರ್ಶನಕ್ಕೆ ಮಂಕಾದ ಪಾಕ್‌ 165 ರನ್‌ಗೆ ಸರ್ವಪತನ ಕಂಡಿತು. ಅದ್ಯಾಗೂ ಮಳೆಯಿಂದಾಗಿ ಡಕ್ವರ್ಥ್‌ ಲೂಯಿಸ್‌ ನಿಯಮದಡಿ ಭಾರತಕ್ಕೆ 8 ವಿಕೆಟ್‌ಗಳ ಗೆಲುವು ಸಿಕ್ಕಿತು. ಈ ಟೂರ್ನಿಯಲ್ಲಿ ಧೋನಿ ನಾಯಕತ್ವದಲ್ಲಿ ಭಾರತ ತಂಡ ಟ್ರೋಫಿ ಎತ್ತಿ ಹಿಡಿದಿತ್ತು.

2017 ರಲ್ಲಿ ಬರ್ಮಿಂಗ್‌ ಹ್ಯಾಮ್‌ನಲ್ಲಿ ಬಿ ಗುಂಪಿನಲ್ಲಿ ಇತ್ತಂಡಗಳು ಎದುರಾಗಿದ್ದವು. ಮೊದಲು ಬ್ಯಾಟ್‌ ಮಾಡಿದ ಭಾರತ 319 ರನ್‌ ಬಾರಿಸಿದರೇ, ಈ ಮೊತ್ತ ಬೆನ್ನತ್ತಿದ ಪಾಕ್‌ ಕೇವಲ 164 ರನ್‌ ಗಳಿಸಿ 124 ರನ್‌ಗಳ ಅಂತರದ ಹೀನಾಯ ಸೋಲು ಕಂಡಿತು.

2017ರಲ್ಲಿ ಫೈನಲ್ಸ್‌ನಲ್ಲಿ ಇತ್ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗಿದ್ದವು. ಆರಂಭದಿಂದಲೇ ಬಿರುಸಿನ ಆಟವಾಡಿದ ಪಾಕ್‌ ಬರೋಬ್ಬರಿ 338 ರನ್‌ ಕಲೆಹಾಕಿತು. ಈ ಮೊತ್ತ ಬೆನ್ನತ್ತಿದ ಭಾರತ 158 ರನ್‌ಗಳಿಗೆ ಸರ್ವಪತನ ಕಂಡು 180 ರನ್‌ಗಳ ಭಾರೀ ಅಂತರದಿಂದ ಸೋಲು ಕಾಣುವ ಮೂಲಕ ಟ್ರೋಫಿ ಕೈಚೆಲ್ಲಿತು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

12 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

13 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

13 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

14 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

19 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

19 hours ago