ದುಬೈ: ಬಾಂಗ್ಲಾದೇಶದ ವಿರುದ್ಧ ಮೊದಲ ಪಂದ್ಯ ಆಡುವ ಮೂಲಕ ಭಾರತ ತಂಡವು ಐಸಿಸಿ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ.
ತವರಿನಲ್ಲಿ ಇಂಗ್ಲೆಂಡ್ ವಿರುದ್ಧದ ಸರಣಿ ಗೆಲುವಿನಿಂದ ಆತ್ಮವಿಶ್ವಾಸದಲ್ಲಿರುವ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಇದೇ ತಿಂಗಳ 20ರಂದು ದುಬೈನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡದ ವಿರುದ್ಧ ಗೆಲ್ಲುವ ವಿಶ್ವಾಸದಲ್ಲಿದೆ.
ಎರಡನೇಯ ಪಂದ್ಯವು ಫೆ.23ರಂದು ಪಾಕಿಸ್ತಾನ ತಂಡದ ವಿರುದ್ಧ ನಡೆಯಲಿದ್ದು, ಮಾ.2 ರಂದು ನ್ಯೂಜಿಲೆಂಡ್ ತಂಡದ ವಿರುದ್ಧ ಆಡಲಿದೆ.
ಭಾರತ ತಂಡವು ಎರಡು ಬಾರಿ ಚಾಂಪಿಯನ್ಸ್ ಟ್ರೋಫಿ ಗೆದ್ದಿದೆ. 2002ರಲ್ಲಿ ಶ್ರೀಲಂಕಾದ ಜೊತೆ ಜಂಟಿಯಾಗಿ ಜಯಗಳಿಸಿದ್ದರೆ 2013ರಲ್ಲಿ ಇಂಗ್ಲೆಂಡ್ ತಂಡ ಸೋಲಿಸಿ ಟ್ರೋಫಿ ತನ್ನದಾಗಿಸಿಕೊಂಡಿತ್ತು.
ಭಾರತ ತಂಡ ಹಿಂತಿದೆ: ರೋಹಿತ್ ಶರ್ಮಾ (ನಾಯಕ), ಶ್ರೇಯಸ್ ಐಯ್ಯರ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಅಕ್ಸರ್ ಪಟೇಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕೆಎಲ್ ರಾಹುಲ್, ರಿಷಭ್ ಪಂತ್, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಮಹಮ್ಮದ್ ಶಮಿ, ವರುಣ್ ಚಕ್ರವರ್ತಿ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…