ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ| ಕೊಹ್ಲಿ, ರೋಹಿತ್‌ ಲಯಕ್ಕೆ ಮರಳುವುದು ಅವಶ್ಯಕ: ರೈನಾ

ನವದೆಹಲಿ: ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಏಕದಿನ ಕ್ರಿಕೆಟ್‌ ಟೂರ್ನಿಯಲ್ಲಿ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಮತ್ತು ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಅವರು ಲಯಕ್ಕೆ ಮರಳುವುದು ಅತ್ಯಂತ ನಿರ್ಣಾಯಕವಾಗಲಿದೆ ಎಂದು ಮಾಜಿ ಆಟಗಾರ ಸುರೇಶ್‌ ರೈನಾ ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚೆನ ಸರಣಿಗಳಲ್ಲಿ ರೋಹಿತ್‌ ಹಾಗೂ ವಿರಾಟ್‌ ಕೊಹ್ಲಿ ವೈಫಲ್ಯವನ್ನು ಅನುಭವಿಸಿದ್ದರು.

ಹಿಂದಿನ ಐಸಿಸಿ ಟೂರ್ನಿಗಳಲ್ಲಿ ರೋಹಿತ್‌ ಹಾಗೂ ಕೊಹ್ಲಿ ಪ್ರದರ್ಶನ ಉತ್ತಮವಾಗಿದೆ. ಒಬ್ಬರನ್ನೊಬ್ಬರು ನೆಚ್ಚಿಕೊಂಡು ಅಡುತ್ತಾರೆ. ದೊಡ್ಡ ಮೊತ್ತ ಪೇರಿಸುವ ಸಾಮರ್ಥ್ಯ ಅವರಲ್ಲಿದೆ.

ಒಂದು ವೇಳೆ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಅವರು ಉತ್ತಮ ಪ್ರದರ್ಶನ ನೀಡಲು ವಿಫಲವಾದರೆ, ಭಾರತದ ಚಾಂಪಿಯನ್ಸ್‌ ಟ್ರೋಫಿಯ ಅಭಿಯಾನವು ಅಂತ್ಯವಾಗುವ ಸಂಭವವಿದೆ ಎಂದು ಹೇಳಿದ್ದಾರೆ.

ಚಾಂಪಿಯನ್ಸ್‌ ಟ್ರೋಫಿಗೂ ಮುನ್ನ ಇಂಗ್ಲೆಂಡ್‌ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಇದೆ. ಈ ಸರಣಿಯಲ್ಲಿ ರೋಹಿತ್‌ ಹಾಗೂ ಕೊಹ್ಲಿ ಲಯಕ್ಕೆ ಮರಳುವ ವಿಶ್ವಾಸವನ್ನು ರೈನಾ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನದ ಅತಿಥ್ಯದಲ್ಲಿ ಹೈಬ್ರಿಡ್‌ ಮಾದರಿಯಲ್ಲಿ ಚಾಂಪಿಯನ್ಸ್‌ ಟ್ರೋಫಿ ಫೆ.19 ರಿಂದ ಮಾರ್ಚ್‌ 9 ರವರೆಗೆ ನಡೆಯಲಿದೆ. ಭಾರತ ʼಎʼ ಗುಂಪಿನಲ್ಲಿದ್ದು, ಇದೇ ಗುಂಪಿನಲ್ಲಿರುವ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್‌ ತಂಡಗಳೊಂದಿಗೆ ಸೆಣಸಲಿವೆ.

ಆಂದೋಲನ ಡೆಸ್ಕ್

Recent Posts

ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನ: ಡಿಸಿಎಂ ಅಜಿತ್‌ ಪವಾರ್‌ ಸೇರಿ 5 ಮಂದಿ ದುರ್ಮರಣ

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…

20 mins ago

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

4 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

4 hours ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

4 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

4 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

4 hours ago