ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ| ಕೊಹ್ಲಿ, ರೋಹಿತ್‌ ಲಯಕ್ಕೆ ಮರಳುವುದು ಅವಶ್ಯಕ: ರೈನಾ

ನವದೆಹಲಿ: ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಏಕದಿನ ಕ್ರಿಕೆಟ್‌ ಟೂರ್ನಿಯಲ್ಲಿ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಮತ್ತು ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಅವರು ಲಯಕ್ಕೆ ಮರಳುವುದು ಅತ್ಯಂತ ನಿರ್ಣಾಯಕವಾಗಲಿದೆ ಎಂದು ಮಾಜಿ ಆಟಗಾರ ಸುರೇಶ್‌ ರೈನಾ ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚೆನ ಸರಣಿಗಳಲ್ಲಿ ರೋಹಿತ್‌ ಹಾಗೂ ವಿರಾಟ್‌ ಕೊಹ್ಲಿ ವೈಫಲ್ಯವನ್ನು ಅನುಭವಿಸಿದ್ದರು.

ಹಿಂದಿನ ಐಸಿಸಿ ಟೂರ್ನಿಗಳಲ್ಲಿ ರೋಹಿತ್‌ ಹಾಗೂ ಕೊಹ್ಲಿ ಪ್ರದರ್ಶನ ಉತ್ತಮವಾಗಿದೆ. ಒಬ್ಬರನ್ನೊಬ್ಬರು ನೆಚ್ಚಿಕೊಂಡು ಅಡುತ್ತಾರೆ. ದೊಡ್ಡ ಮೊತ್ತ ಪೇರಿಸುವ ಸಾಮರ್ಥ್ಯ ಅವರಲ್ಲಿದೆ.

ಒಂದು ವೇಳೆ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಅವರು ಉತ್ತಮ ಪ್ರದರ್ಶನ ನೀಡಲು ವಿಫಲವಾದರೆ, ಭಾರತದ ಚಾಂಪಿಯನ್ಸ್‌ ಟ್ರೋಫಿಯ ಅಭಿಯಾನವು ಅಂತ್ಯವಾಗುವ ಸಂಭವವಿದೆ ಎಂದು ಹೇಳಿದ್ದಾರೆ.

ಚಾಂಪಿಯನ್ಸ್‌ ಟ್ರೋಫಿಗೂ ಮುನ್ನ ಇಂಗ್ಲೆಂಡ್‌ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಇದೆ. ಈ ಸರಣಿಯಲ್ಲಿ ರೋಹಿತ್‌ ಹಾಗೂ ಕೊಹ್ಲಿ ಲಯಕ್ಕೆ ಮರಳುವ ವಿಶ್ವಾಸವನ್ನು ರೈನಾ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನದ ಅತಿಥ್ಯದಲ್ಲಿ ಹೈಬ್ರಿಡ್‌ ಮಾದರಿಯಲ್ಲಿ ಚಾಂಪಿಯನ್ಸ್‌ ಟ್ರೋಫಿ ಫೆ.19 ರಿಂದ ಮಾರ್ಚ್‌ 9 ರವರೆಗೆ ನಡೆಯಲಿದೆ. ಭಾರತ ʼಎʼ ಗುಂಪಿನಲ್ಲಿದ್ದು, ಇದೇ ಗುಂಪಿನಲ್ಲಿರುವ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್‌ ತಂಡಗಳೊಂದಿಗೆ ಸೆಣಸಲಿವೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

7 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

10 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

14 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

16 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

17 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

18 hours ago