ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ ತಂಡ ಪ್ರಕಟ : ನ್ಯೂಜಿಲೆಂಡ್‌ಗೆ ಸ್ಯಾಂಟ್ನರ್‌ ನಾಯಕ

ವೆಲ್ಲಿಂಗ್ಟನ್‌: ಮುಂದಿನ ತಿಂಗಳು ಪಾಕಿಸ್ತಾನದಲ್ಲಿ ನಡೆಯುವ ಚಾಂಪಿಯನ್ಸ್‌ ಟ್ರೋಪಿ ಏಕದಿನ ಕ್ರಿಕೆಟ್‌ ಟೂರ್ನಿಗೆ ನ್ಯೂಜಿಲೆಂಡ್‌ನ 15 ಸದಸ್ಯರ ತಂಡ ಪ್ರಕಟವಾಗಿದ್ದು, ತಂಡದ ನಾಯಕನಾಗಿ ಸ್ಪಿನ್‌ ಬೌಲರ್‌ ಮಿಚೆಲ್‌ ಸ್ಯಾಂಟ್ನರ್‌ ಆಯ್ಕೆಯಾಗಿದ್ದಾರೆ.

ಅನುಭವಿಗಳಾದ ಕೇನ್‌ ವಿಲಿಯಮ್ಸನ್‌, ಟಾಮ್‌ ಬ್ಲಂಡೆಲ್‌, ಟಾಮ್‌ ಲಥಾಮ್‌, ಡೆವೋನ್‌ ಕಾನ್ವೇ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಜೊತೆಗೆ ಐವರು ವೇಗಿಗಳಿಗೆ ಸ್ಥಾನ ನೀಡಲಾಗಿದ್ದು, ಬೆನ್‌ ಸೀರ್ಸ್‌, ನಾಥನ್‌ ಸ್ಮಿತ್‌ ಹಾಗೂ ವಿಲ್‌ ಓ ರೂರ್ಕಿ ಮೊದಲ ಬಾರಿಗೆ ಐಸಿಸಿ ಟೂರ್ನಿಯಲ್ಲಿ ಆಡಲು ಸಜ್ಜಾಗಿದ್ದಾರೆ.

ನ್ಯೂಜಿಲೆಂಡ್‌ ಕಂಡ ಶ್ರೇಷ್ಠ ಬೌಲರ್‌ಗಳೆನಿಸಿದ್ದ ಟಿಮ್‌ ಸೌಥಿ ಮತ್ತು ಟ್ರೆಂಟ್‌ ಬೌಲ್ಟ್‌ ವಿದಾಯದ ಬಳಿಕ ವೇಗದ ಬೌಲಿಂಗ್‌ ವಿಭಾಗವನ್ನು ಮುನ್ನಡೆಸುವ ಹೊಣೆ ಮ್ಯಾಟ್‌ ಹೆನ್ರಿ ಮತ್ತು ಲಾಕಿ ಫರ್ಗ್ಯೂಸನ್‌ ಮೇಲಿದೆ.

ಚಾಂಪಿಯನ್ಸ್‌ ಟ್ರೋಫಿಯು ಫೆಬ್ರವರಿ 19ರಂದು ಆರಂಭವಾಗಲಿದೆ. ನ್ಯೂಜಿಲೆಂಡ್‌ ತನ್ನ ಮೊದಲ ಪಂದ್ಯವನ್ನು ಅತಿಥೇಯ ಪಾಕಿಸ್ತಾನ ವಿರುದ್ಧ ಆಡಲಿದೆ.

ನ್ಯೂಜಿಲೆಂಡ್‌ ತಂಡ: ಮಿಚೇಲ್‌ ಸ್ಯಾಂಟ್ನರ್‌ (ನಾಯಕ), ಕೇನ್‌ ವಿಲಿಯಮ್ಸನ್‌, ವಿಲ್‌ ಯಂಗ್‌, ಮಿಚೇಲ್‌ ಬ್ರೇಸ್‌ವೆಲ್‌, ಮಾರ್ಕ್‌ ಚಾಪ್‌ಮನ್‌, ಡೆವೋನ್‌ ಕಾನ್ವೆ, ಲಾಕಿ ಫರ್ಗ್ಯೂಸನ್‌, ಗ್ಲೆನ್‌ ಫಿಲಿಪ್ಸ್‌, ರಚಿನ್‌ ರವೀಂದ್ರ, ಮ್ಯಾಟ್‌ ಹೆನ್ರಿ, ಟಾಮ್‌ ಲಥಾಮ್‌, ಡೆರಿಲ್‌ ಮಿಚೇಲ್‌, ವಿಲ್‌ ಓ ರೂರ್ಕಿ, ಬೆನ್‌ ಸೀರ್ಸ್‌, ನಾಥನ್‌ ಸ್ಮಿತ್‌

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಯುವಕರಲ್ಲಿ ಮಾನವೀಯತೆ ಹೆಚ್ಚಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ…

3 mins ago

ಚಾಮುಂಡಿ ಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆ

ಮೈಸೂರು: ಚಾಮುಂಡಿಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಂದಾಜು 40 ವರ್ಷ…

11 mins ago

9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮಂಡ್ಯದಲ್ಲಿ ಜನರು 9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನ…

14 mins ago

ಸಣ್ಣ ಮಠವನ್ನು ದೊಡ್ಡ ಮರವನ್ನಾಗಿ ಬೆಳೆಸಿದ್ದು ಬಾಲಗಂಗಾಧರನಾಥರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ತ್ರಿವಿಧ ದಾಸೋಹದ ಮೂಲಕ ಆದಿಚುಂಚನಗಿರಿ ಮಠ ಪ್ರಸಿದ್ಧಿ ಪಡೆದಿದೆ. ಬಾಲಗಂಗಾಧರನಾಥರ ಭೈರವೈಕ್ಯ ಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿ ಅವರು…

21 mins ago

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ಅಮಾನತು

ಬೆಂಗಳೂರು: ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…

2 hours ago

ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್‌…

3 hours ago