ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ ತಂಡ ಪ್ರಕಟ : ನ್ಯೂಜಿಲೆಂಡ್‌ಗೆ ಸ್ಯಾಂಟ್ನರ್‌ ನಾಯಕ

ವೆಲ್ಲಿಂಗ್ಟನ್‌: ಮುಂದಿನ ತಿಂಗಳು ಪಾಕಿಸ್ತಾನದಲ್ಲಿ ನಡೆಯುವ ಚಾಂಪಿಯನ್ಸ್‌ ಟ್ರೋಪಿ ಏಕದಿನ ಕ್ರಿಕೆಟ್‌ ಟೂರ್ನಿಗೆ ನ್ಯೂಜಿಲೆಂಡ್‌ನ 15 ಸದಸ್ಯರ ತಂಡ ಪ್ರಕಟವಾಗಿದ್ದು, ತಂಡದ ನಾಯಕನಾಗಿ ಸ್ಪಿನ್‌ ಬೌಲರ್‌ ಮಿಚೆಲ್‌ ಸ್ಯಾಂಟ್ನರ್‌ ಆಯ್ಕೆಯಾಗಿದ್ದಾರೆ.

ಅನುಭವಿಗಳಾದ ಕೇನ್‌ ವಿಲಿಯಮ್ಸನ್‌, ಟಾಮ್‌ ಬ್ಲಂಡೆಲ್‌, ಟಾಮ್‌ ಲಥಾಮ್‌, ಡೆವೋನ್‌ ಕಾನ್ವೇ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಜೊತೆಗೆ ಐವರು ವೇಗಿಗಳಿಗೆ ಸ್ಥಾನ ನೀಡಲಾಗಿದ್ದು, ಬೆನ್‌ ಸೀರ್ಸ್‌, ನಾಥನ್‌ ಸ್ಮಿತ್‌ ಹಾಗೂ ವಿಲ್‌ ಓ ರೂರ್ಕಿ ಮೊದಲ ಬಾರಿಗೆ ಐಸಿಸಿ ಟೂರ್ನಿಯಲ್ಲಿ ಆಡಲು ಸಜ್ಜಾಗಿದ್ದಾರೆ.

ನ್ಯೂಜಿಲೆಂಡ್‌ ಕಂಡ ಶ್ರೇಷ್ಠ ಬೌಲರ್‌ಗಳೆನಿಸಿದ್ದ ಟಿಮ್‌ ಸೌಥಿ ಮತ್ತು ಟ್ರೆಂಟ್‌ ಬೌಲ್ಟ್‌ ವಿದಾಯದ ಬಳಿಕ ವೇಗದ ಬೌಲಿಂಗ್‌ ವಿಭಾಗವನ್ನು ಮುನ್ನಡೆಸುವ ಹೊಣೆ ಮ್ಯಾಟ್‌ ಹೆನ್ರಿ ಮತ್ತು ಲಾಕಿ ಫರ್ಗ್ಯೂಸನ್‌ ಮೇಲಿದೆ.

ಚಾಂಪಿಯನ್ಸ್‌ ಟ್ರೋಫಿಯು ಫೆಬ್ರವರಿ 19ರಂದು ಆರಂಭವಾಗಲಿದೆ. ನ್ಯೂಜಿಲೆಂಡ್‌ ತನ್ನ ಮೊದಲ ಪಂದ್ಯವನ್ನು ಅತಿಥೇಯ ಪಾಕಿಸ್ತಾನ ವಿರುದ್ಧ ಆಡಲಿದೆ.

ನ್ಯೂಜಿಲೆಂಡ್‌ ತಂಡ: ಮಿಚೇಲ್‌ ಸ್ಯಾಂಟ್ನರ್‌ (ನಾಯಕ), ಕೇನ್‌ ವಿಲಿಯಮ್ಸನ್‌, ವಿಲ್‌ ಯಂಗ್‌, ಮಿಚೇಲ್‌ ಬ್ರೇಸ್‌ವೆಲ್‌, ಮಾರ್ಕ್‌ ಚಾಪ್‌ಮನ್‌, ಡೆವೋನ್‌ ಕಾನ್ವೆ, ಲಾಕಿ ಫರ್ಗ್ಯೂಸನ್‌, ಗ್ಲೆನ್‌ ಫಿಲಿಪ್ಸ್‌, ರಚಿನ್‌ ರವೀಂದ್ರ, ಮ್ಯಾಟ್‌ ಹೆನ್ರಿ, ಟಾಮ್‌ ಲಥಾಮ್‌, ಡೆರಿಲ್‌ ಮಿಚೇಲ್‌, ವಿಲ್‌ ಓ ರೂರ್ಕಿ, ಬೆನ್‌ ಸೀರ್ಸ್‌, ನಾಥನ್‌ ಸ್ಮಿತ್‌

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗಿನಲ್ಲಿ ಹೆಚ್‌ಪಿವಿ ಲಸಿಕೆ ಪಡೆಯಲು ಹಿಂದೇಟು

ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…

8 mins ago

ರಾಷ್ಟ್ರೀಯ ಕೆಟಲ್‌ಬಾಲ್ ಟೂರ್ನಿಯಲ್ಲಿ ಮಿಂಚಿದ ಪ್ರತಿಭೆಗಳು

ಹೇಮಂತ್‌ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್‌ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…

13 mins ago

ಮುಸುಕಿನ ಜೋಳಕ್ಕೆ ರೋಗ ಬಾಧೆ; ಸಂಕಷ್ಟಕ್ಕೆ ಸಿಲುಕಿದ ರೈತರು

ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ  ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ…

18 mins ago

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

8 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

11 hours ago