ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ ತಂಡ ಪ್ರಕಟ : ನ್ಯೂಜಿಲೆಂಡ್‌ಗೆ ಸ್ಯಾಂಟ್ನರ್‌ ನಾಯಕ

ವೆಲ್ಲಿಂಗ್ಟನ್‌: ಮುಂದಿನ ತಿಂಗಳು ಪಾಕಿಸ್ತಾನದಲ್ಲಿ ನಡೆಯುವ ಚಾಂಪಿಯನ್ಸ್‌ ಟ್ರೋಪಿ ಏಕದಿನ ಕ್ರಿಕೆಟ್‌ ಟೂರ್ನಿಗೆ ನ್ಯೂಜಿಲೆಂಡ್‌ನ 15 ಸದಸ್ಯರ ತಂಡ ಪ್ರಕಟವಾಗಿದ್ದು, ತಂಡದ ನಾಯಕನಾಗಿ ಸ್ಪಿನ್‌ ಬೌಲರ್‌ ಮಿಚೆಲ್‌ ಸ್ಯಾಂಟ್ನರ್‌ ಆಯ್ಕೆಯಾಗಿದ್ದಾರೆ.

ಅನುಭವಿಗಳಾದ ಕೇನ್‌ ವಿಲಿಯಮ್ಸನ್‌, ಟಾಮ್‌ ಬ್ಲಂಡೆಲ್‌, ಟಾಮ್‌ ಲಥಾಮ್‌, ಡೆವೋನ್‌ ಕಾನ್ವೇ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಜೊತೆಗೆ ಐವರು ವೇಗಿಗಳಿಗೆ ಸ್ಥಾನ ನೀಡಲಾಗಿದ್ದು, ಬೆನ್‌ ಸೀರ್ಸ್‌, ನಾಥನ್‌ ಸ್ಮಿತ್‌ ಹಾಗೂ ವಿಲ್‌ ಓ ರೂರ್ಕಿ ಮೊದಲ ಬಾರಿಗೆ ಐಸಿಸಿ ಟೂರ್ನಿಯಲ್ಲಿ ಆಡಲು ಸಜ್ಜಾಗಿದ್ದಾರೆ.

ನ್ಯೂಜಿಲೆಂಡ್‌ ಕಂಡ ಶ್ರೇಷ್ಠ ಬೌಲರ್‌ಗಳೆನಿಸಿದ್ದ ಟಿಮ್‌ ಸೌಥಿ ಮತ್ತು ಟ್ರೆಂಟ್‌ ಬೌಲ್ಟ್‌ ವಿದಾಯದ ಬಳಿಕ ವೇಗದ ಬೌಲಿಂಗ್‌ ವಿಭಾಗವನ್ನು ಮುನ್ನಡೆಸುವ ಹೊಣೆ ಮ್ಯಾಟ್‌ ಹೆನ್ರಿ ಮತ್ತು ಲಾಕಿ ಫರ್ಗ್ಯೂಸನ್‌ ಮೇಲಿದೆ.

ಚಾಂಪಿಯನ್ಸ್‌ ಟ್ರೋಫಿಯು ಫೆಬ್ರವರಿ 19ರಂದು ಆರಂಭವಾಗಲಿದೆ. ನ್ಯೂಜಿಲೆಂಡ್‌ ತನ್ನ ಮೊದಲ ಪಂದ್ಯವನ್ನು ಅತಿಥೇಯ ಪಾಕಿಸ್ತಾನ ವಿರುದ್ಧ ಆಡಲಿದೆ.

ನ್ಯೂಜಿಲೆಂಡ್‌ ತಂಡ: ಮಿಚೇಲ್‌ ಸ್ಯಾಂಟ್ನರ್‌ (ನಾಯಕ), ಕೇನ್‌ ವಿಲಿಯಮ್ಸನ್‌, ವಿಲ್‌ ಯಂಗ್‌, ಮಿಚೇಲ್‌ ಬ್ರೇಸ್‌ವೆಲ್‌, ಮಾರ್ಕ್‌ ಚಾಪ್‌ಮನ್‌, ಡೆವೋನ್‌ ಕಾನ್ವೆ, ಲಾಕಿ ಫರ್ಗ್ಯೂಸನ್‌, ಗ್ಲೆನ್‌ ಫಿಲಿಪ್ಸ್‌, ರಚಿನ್‌ ರವೀಂದ್ರ, ಮ್ಯಾಟ್‌ ಹೆನ್ರಿ, ಟಾಮ್‌ ಲಥಾಮ್‌, ಡೆರಿಲ್‌ ಮಿಚೇಲ್‌, ವಿಲ್‌ ಓ ರೂರ್ಕಿ, ಬೆನ್‌ ಸೀರ್ಸ್‌, ನಾಥನ್‌ ಸ್ಮಿತ್‌

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

8 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

16 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

16 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

16 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

19 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

19 hours ago