ಕ್ರೀಡೆ

ಚೆಸ್| ವಿಶ್ವನಾಥನ್ ಆನಂದ್ ಹಿಂದಿಕ್ಕಿದ ಡಿ.ಗುಕೇಶ್‌ ಭಾರತದ ನಂ.1 ಚೆಸ್‌ ಆಟಗಾರ

ನವದೆಹಲಿ : 17 ವರ್ಷದ ಡಿ. ಗುಕೇಶ್‌ ಅಂತಾರಾಷ್ಟ್ರೀಯ ಚೆಸ್‌ನ ಲೈವ್‌ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ದಿಗ್ಗಜ ವಿಶ್ವನಾಥನ್‌ ಆನಂದ್‌ರನ್ನು ಹಿಂದಿಕ್ಕಿ ಭಾರತದ ನಂ.1 ಆಟಗಾರ ಎನಿಸಿದ್ದಾರೆ.

ಅಜರ್‌ಬೈಜಾನ್‌ನ ಬಾಕುನಲ್ಲಿ ನಡೆಯುತ್ತಿರುವ ವಿಶ್ವಕಪ್‌ನ 2ನೇ ಸುತ್ತಿನಲ್ಲಿ ಸ್ಥಳೀಯ ಆಟಗಾರ ಇಸ್ಕ್ಯಾನ್ಡರೊವ್ ವಿರುದ್ದ ಗೆಲುವು ಸಾಧಿಸಿ 2.5 ರೇಟಿಂಗ್ ಅಂಕಗಳನ್ನು ಗಳಿಸಿದರು. ಇದರೊಂದಿಗೆ ಗುಕೇಶ್‌ರ ಲೈವ್ ರೇಟಿಂಗ್ 2755.9 ಅಂಕಕ್ಕೆ ಏರಿಕೆಯಾಗಿದ್ದು, ವಿಶ್ವ ರ‍್ಯಾಂಕಿಂಗ್‌ನಲ್ಲಿ 9ನೇ ಸ್ಥಾನಕ್ಕೇರಿದ್ದಾರೆ. ಆನಂದ್‌ 2754.0 ಅಂಕ ಹೊಂದಿದ್ದು, ಒಂದು ಸ್ಥಾನ ಇಳಿಕೆ ಕಂಡು 10ನೇ ಸ್ಥಾನ ಪಡೆದಿದ್ದಾರೆ.

1991ರ ಜುಲೈನಲ್ಲಿ ಮೊದಲ ಬಾರಿಗೆ ವಿಶ್ವ ರ‍್ಯಾಂಕಿಂಗ್‌ನಲ್ಲಿ ಅಗ್ರ 10ರ ಪಟ್ಟಿಗೆ ಸೇರ್ಪಡೆಗೊಂಡಿದ್ದ ವಿಶ್ವನಾಥನ್ ಆನಂದ್, 1987ರ ಜನವರಿಯಿಂದಲೂ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಭಾರತದ ನಂ.1 ಆಟಗಾರನಾಗಿ ಮುಂದುವರೆದಿದ್ದರು. ಡಿ ಗುಕೇಶ್ ಮುಂದಿನ ರ‍್ಯಾಂಕಿಂಗ್‌ ಪಟ್ಟಿ ಪ್ರಕಟಗೊಳ್ಳುವವರೆಗೂ(ಸೆ.01) ರೇಟಿಂಗ್ ಕಾಯ್ದುಕೊಂಡರೆ, 1986ರಲ್ಲಿ ಪ್ರವೀಣ್ ಥಿಪ್ಸೆ ಬಳಿಕ ಆನಂದ್‌ಗಿಂತ ಉತ್ತಮ ರ‍್ಯಾಂಕಿಂಗ್‌ ಪಡೆದ ಮೊದಲ ಆಟಗಾರ ಎನ್ನುವ ದಾಖಲೆ ಬರೆಯಲಿದ್ದಾರೆ.

andolanait

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

8 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

9 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

9 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

10 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

10 hours ago