ಕ್ರೀಡೆ

ಚೆಸ್| ವಿಶ್ವನಾಥನ್ ಆನಂದ್ ಹಿಂದಿಕ್ಕಿದ ಡಿ.ಗುಕೇಶ್‌ ಭಾರತದ ನಂ.1 ಚೆಸ್‌ ಆಟಗಾರ

ನವದೆಹಲಿ : 17 ವರ್ಷದ ಡಿ. ಗುಕೇಶ್‌ ಅಂತಾರಾಷ್ಟ್ರೀಯ ಚೆಸ್‌ನ ಲೈವ್‌ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ದಿಗ್ಗಜ ವಿಶ್ವನಾಥನ್‌ ಆನಂದ್‌ರನ್ನು ಹಿಂದಿಕ್ಕಿ ಭಾರತದ ನಂ.1 ಆಟಗಾರ ಎನಿಸಿದ್ದಾರೆ.

ಅಜರ್‌ಬೈಜಾನ್‌ನ ಬಾಕುನಲ್ಲಿ ನಡೆಯುತ್ತಿರುವ ವಿಶ್ವಕಪ್‌ನ 2ನೇ ಸುತ್ತಿನಲ್ಲಿ ಸ್ಥಳೀಯ ಆಟಗಾರ ಇಸ್ಕ್ಯಾನ್ಡರೊವ್ ವಿರುದ್ದ ಗೆಲುವು ಸಾಧಿಸಿ 2.5 ರೇಟಿಂಗ್ ಅಂಕಗಳನ್ನು ಗಳಿಸಿದರು. ಇದರೊಂದಿಗೆ ಗುಕೇಶ್‌ರ ಲೈವ್ ರೇಟಿಂಗ್ 2755.9 ಅಂಕಕ್ಕೆ ಏರಿಕೆಯಾಗಿದ್ದು, ವಿಶ್ವ ರ‍್ಯಾಂಕಿಂಗ್‌ನಲ್ಲಿ 9ನೇ ಸ್ಥಾನಕ್ಕೇರಿದ್ದಾರೆ. ಆನಂದ್‌ 2754.0 ಅಂಕ ಹೊಂದಿದ್ದು, ಒಂದು ಸ್ಥಾನ ಇಳಿಕೆ ಕಂಡು 10ನೇ ಸ್ಥಾನ ಪಡೆದಿದ್ದಾರೆ.

1991ರ ಜುಲೈನಲ್ಲಿ ಮೊದಲ ಬಾರಿಗೆ ವಿಶ್ವ ರ‍್ಯಾಂಕಿಂಗ್‌ನಲ್ಲಿ ಅಗ್ರ 10ರ ಪಟ್ಟಿಗೆ ಸೇರ್ಪಡೆಗೊಂಡಿದ್ದ ವಿಶ್ವನಾಥನ್ ಆನಂದ್, 1987ರ ಜನವರಿಯಿಂದಲೂ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಭಾರತದ ನಂ.1 ಆಟಗಾರನಾಗಿ ಮುಂದುವರೆದಿದ್ದರು. ಡಿ ಗುಕೇಶ್ ಮುಂದಿನ ರ‍್ಯಾಂಕಿಂಗ್‌ ಪಟ್ಟಿ ಪ್ರಕಟಗೊಳ್ಳುವವರೆಗೂ(ಸೆ.01) ರೇಟಿಂಗ್ ಕಾಯ್ದುಕೊಂಡರೆ, 1986ರಲ್ಲಿ ಪ್ರವೀಣ್ ಥಿಪ್ಸೆ ಬಳಿಕ ಆನಂದ್‌ಗಿಂತ ಉತ್ತಮ ರ‍್ಯಾಂಕಿಂಗ್‌ ಪಡೆದ ಮೊದಲ ಆಟಗಾರ ಎನ್ನುವ ದಾಖಲೆ ಬರೆಯಲಿದ್ದಾರೆ.

andolanait

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

2 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

2 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

2 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

3 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

3 hours ago