ಕ್ರೀಡೆ

ಚೆಸ್| ವಿಶ್ವನಾಥನ್ ಆನಂದ್ ಹಿಂದಿಕ್ಕಿದ ಡಿ.ಗುಕೇಶ್‌ ಭಾರತದ ನಂ.1 ಚೆಸ್‌ ಆಟಗಾರ

ನವದೆಹಲಿ : 17 ವರ್ಷದ ಡಿ. ಗುಕೇಶ್‌ ಅಂತಾರಾಷ್ಟ್ರೀಯ ಚೆಸ್‌ನ ಲೈವ್‌ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ದಿಗ್ಗಜ ವಿಶ್ವನಾಥನ್‌ ಆನಂದ್‌ರನ್ನು ಹಿಂದಿಕ್ಕಿ ಭಾರತದ ನಂ.1 ಆಟಗಾರ ಎನಿಸಿದ್ದಾರೆ.

ಅಜರ್‌ಬೈಜಾನ್‌ನ ಬಾಕುನಲ್ಲಿ ನಡೆಯುತ್ತಿರುವ ವಿಶ್ವಕಪ್‌ನ 2ನೇ ಸುತ್ತಿನಲ್ಲಿ ಸ್ಥಳೀಯ ಆಟಗಾರ ಇಸ್ಕ್ಯಾನ್ಡರೊವ್ ವಿರುದ್ದ ಗೆಲುವು ಸಾಧಿಸಿ 2.5 ರೇಟಿಂಗ್ ಅಂಕಗಳನ್ನು ಗಳಿಸಿದರು. ಇದರೊಂದಿಗೆ ಗುಕೇಶ್‌ರ ಲೈವ್ ರೇಟಿಂಗ್ 2755.9 ಅಂಕಕ್ಕೆ ಏರಿಕೆಯಾಗಿದ್ದು, ವಿಶ್ವ ರ‍್ಯಾಂಕಿಂಗ್‌ನಲ್ಲಿ 9ನೇ ಸ್ಥಾನಕ್ಕೇರಿದ್ದಾರೆ. ಆನಂದ್‌ 2754.0 ಅಂಕ ಹೊಂದಿದ್ದು, ಒಂದು ಸ್ಥಾನ ಇಳಿಕೆ ಕಂಡು 10ನೇ ಸ್ಥಾನ ಪಡೆದಿದ್ದಾರೆ.

1991ರ ಜುಲೈನಲ್ಲಿ ಮೊದಲ ಬಾರಿಗೆ ವಿಶ್ವ ರ‍್ಯಾಂಕಿಂಗ್‌ನಲ್ಲಿ ಅಗ್ರ 10ರ ಪಟ್ಟಿಗೆ ಸೇರ್ಪಡೆಗೊಂಡಿದ್ದ ವಿಶ್ವನಾಥನ್ ಆನಂದ್, 1987ರ ಜನವರಿಯಿಂದಲೂ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಭಾರತದ ನಂ.1 ಆಟಗಾರನಾಗಿ ಮುಂದುವರೆದಿದ್ದರು. ಡಿ ಗುಕೇಶ್ ಮುಂದಿನ ರ‍್ಯಾಂಕಿಂಗ್‌ ಪಟ್ಟಿ ಪ್ರಕಟಗೊಳ್ಳುವವರೆಗೂ(ಸೆ.01) ರೇಟಿಂಗ್ ಕಾಯ್ದುಕೊಂಡರೆ, 1986ರಲ್ಲಿ ಪ್ರವೀಣ್ ಥಿಪ್ಸೆ ಬಳಿಕ ಆನಂದ್‌ಗಿಂತ ಉತ್ತಮ ರ‍್ಯಾಂಕಿಂಗ್‌ ಪಡೆದ ಮೊದಲ ಆಟಗಾರ ಎನ್ನುವ ದಾಖಲೆ ಬರೆಯಲಿದ್ದಾರೆ.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

12 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

12 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

12 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

12 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

12 hours ago