ಕ್ರೀಡೆ

China masters 2023: ಫೈನಲ್‌ನಲ್ಲಿ ಎಡವಿದ ಸಾತ್ವಿಕ್‌ ಚಿರಾಗ್‌ ಜೋಡಿ

ಬೀಜಿಂಗ್‌ : ಚೀನಾ ಮಾಸ್ಟರ್ಸ್‌ ಬ್ಯಾಡ್ಮಂಟನ್‌ ಟೂರ್ನಮೆಂಟ್‌ನ ಫೈನಲ್‌ ನಲ್ಲಿ ಭಾರತದ ಚಿರಾಗ್‌ ಶೆಟ್ಟಿ ಹಾಗೂ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಅವರು ವಿಶ್ವದ ನಂ.1 ಜೋಡಿಗಳಾದ ಲಿಯಾಂಗ್‌ ವೀ ಕೆಂಗ್‌ ಹಾಗೂ ವಾಂಗ್‌ ಚಾಂಗ್‌ ವಿರುದ್ಧ ಫೈನಲ್‌ನಲ್ಲಿ ಪರಾಭವಗೊಂಡಿದ್ದಾರೆ.

ಭಾನುವಾರ ನಡೆದ ಈ ಪಂದ್ಯದಲ್ಲಿ ನ.1 ಶ್ರೇಯಾಂಕದ ಭಾರತದ ಜೋಡಿ ಒಂದು ಗಂಟೆ ಹಾಗೂ 9 ನಿಮಿಷಗಳ ಕಾಲ ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲಿ ಚೀನಾದ ಜೋಡಿ 19-21, 21-18, 19-21 ಗೇಮ್‌ಗಳ ಅಂತರದಿಂದ ಸೋಲನುಭವಿಸಿದರು. ಆರಂಭದಿಂದಲೇ ಲಿಯಾಂಗ್ ಹಾಗೂ ವಾಂಗ್‌ರಿಂದ ಸಾತ್ವಿಕ್ ಹೆಚ್ಚು ಒತ್ತಡಕ್ಕೆ ಒಳಗಾದರು. ಮೊದಲ ಗೇಮ್‌ನ್ನು 19-21 ಅಂತರದಿಂದ ಸೋತು ಹಿನ್ನಡೆಯಲ್ಲಿದ್ದ ಭಾರತದ ಜೋಡಿ ಎರಡನೇ ಗೇಮ್ ಅನ್ನು 21-18 ಅಂತರದಿಂದ ಗೆದ್ದುಕೊಂಡು ಮೂರು ಹಾಗೂ ಅಂತಿಮ ಸುತ್ತಿಗೆ ಕಾಲಿಟ್ಟಿತು. ಈ ನಿರ್ಣಾಯಕ ಸುತ್ತಿನಲ್ಲಿ ಚೀನಾದ ಜೋಡಿ ಅಂತಿಮವಾಗಿ 21-19 ಅಂತರದಿಂದ ಗೆಲುವು ದಾಖಲಿಸಿ ಪ್ರಶಸ್ತಿಗೆ ಮುತ್ತಿಕ್ಕಿತು.

ಈ ಗೆಲುವಿನೊಂದಿಗೆ ಲಿಯಾಂಗ್ ಹಾಗೂ ವಾಂಗ್ ಅವರು ಏಷ್ಯನ್‌ ಗೇಮ್ಸ್‌ನಲ್ಲಿ ಭಾರತದ ಜೋಡಿ ವಿರುದ್ಧದ ಸೋಲಿಗೆ ಸೇಡು ತೀರಿಸಿಕೊಂಡರು. ಫೈನಲ್‌ನಲ್ಲಿ ಭಾರತದ ಶಟ್ಲರ್‌ಗಳು ತಮ್ಮ ಶ್ರೇಷ್ಠ ಪ್ರದರ್ಶನ ನೀಡುವಲ್ಲಿ ವಿಫಲರಾದರು.

ಸಾತ್ವಿಕ್ ಹಾಗೂ ಚಿರಾಗ್ 2023ನೇ ವರ್ಷದಲ್ಲಿ ಬ್ಯಾಡ್ಮಿಂಟನ್ ಏಷ್ಯನ್ ಚಾಂಪಿಯನ್‌ಶಿಪ್, ಇಂಡೋನೇಷ್ಯಾ ಸೂಪರ್-1000, ಕೊರಿಯಾ ಸೂಪರ್ 500, ಸ್ವಿಸ್ ಸೂಪರ್ 300 ಹಾಗೂ ಏಷ್ಯನ್‌ ಗೇಮ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ್ದರು.

andolanait

Recent Posts

ಬಂಧನದಲ್ಲಿರುವ ಮುನಿರತ್ನ ಆರೋಗ್ಯದಲ್ಲಿ ದಿಢೀರ್‌ ಏರುಪೇರು: ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ…

1 hour ago

ದಸರಾ ಚಲನಚಿತ್ರೋತ್ಸವ- 2024| ಉತ್ತಮ ಕಿರುಚಿತ್ರ ಆಯ್ಕೆಗೆ ಪರಿಣಿತರಿಂದ ವೀಕ್ಷಣೆ

ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ ಮೈಸೂರು : ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ…

2 hours ago

ಮೈಶುಗರ್: 2.5 ಲಕ್ಷ ಟನ್‌ನಷ್ಟು ಕಬ್ಬು ಅರೆಯಲು ಯಾವುದೇ ತೊಂದರೆ ಇಲ್ಲ: ಡಾ: ಹೆಚ್.ಎಲ್ ನಾಗರಾಜು

ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು…

2 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಆನೆ ಸಾವು

ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು…

2 hours ago

ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ರಾಜಕಾರಣ: ವಿಪಕ್ಷ ನಾಯಕ ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿದ ಘಟನೆ ಹಾಗೂ…

3 hours ago

ಜೊತೆಗಿದ್ದ ಯುವತಿಗೆ ಲೈಂಗಿಕ ಕಿರುಕುಳ: ಕೊರಿಯೋಗ್ರಾಫರ್‌ ವಿರುದ್ಧ ದೂರು ದಾಖಲು

ಮೈಸೂರು: ಬಾಲಿವುಡ್‌ನಿಂದ ಸ್ಯಾಂಡಲ್‌ವುಡ್‌ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್‌ ನಟರಿಗೆ ಕೊರಿಯೋಗ್ರಾಫರ್‌ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್‌…

3 hours ago