ಕ್ರೀಡೆ

China masters 2023: ಫೈನಲ್‌ನಲ್ಲಿ ಎಡವಿದ ಸಾತ್ವಿಕ್‌ ಚಿರಾಗ್‌ ಜೋಡಿ

ಬೀಜಿಂಗ್‌ : ಚೀನಾ ಮಾಸ್ಟರ್ಸ್‌ ಬ್ಯಾಡ್ಮಂಟನ್‌ ಟೂರ್ನಮೆಂಟ್‌ನ ಫೈನಲ್‌ ನಲ್ಲಿ ಭಾರತದ ಚಿರಾಗ್‌ ಶೆಟ್ಟಿ ಹಾಗೂ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಅವರು ವಿಶ್ವದ ನಂ.1 ಜೋಡಿಗಳಾದ ಲಿಯಾಂಗ್‌ ವೀ ಕೆಂಗ್‌ ಹಾಗೂ ವಾಂಗ್‌ ಚಾಂಗ್‌ ವಿರುದ್ಧ ಫೈನಲ್‌ನಲ್ಲಿ ಪರಾಭವಗೊಂಡಿದ್ದಾರೆ.

ಭಾನುವಾರ ನಡೆದ ಈ ಪಂದ್ಯದಲ್ಲಿ ನ.1 ಶ್ರೇಯಾಂಕದ ಭಾರತದ ಜೋಡಿ ಒಂದು ಗಂಟೆ ಹಾಗೂ 9 ನಿಮಿಷಗಳ ಕಾಲ ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲಿ ಚೀನಾದ ಜೋಡಿ 19-21, 21-18, 19-21 ಗೇಮ್‌ಗಳ ಅಂತರದಿಂದ ಸೋಲನುಭವಿಸಿದರು. ಆರಂಭದಿಂದಲೇ ಲಿಯಾಂಗ್ ಹಾಗೂ ವಾಂಗ್‌ರಿಂದ ಸಾತ್ವಿಕ್ ಹೆಚ್ಚು ಒತ್ತಡಕ್ಕೆ ಒಳಗಾದರು. ಮೊದಲ ಗೇಮ್‌ನ್ನು 19-21 ಅಂತರದಿಂದ ಸೋತು ಹಿನ್ನಡೆಯಲ್ಲಿದ್ದ ಭಾರತದ ಜೋಡಿ ಎರಡನೇ ಗೇಮ್ ಅನ್ನು 21-18 ಅಂತರದಿಂದ ಗೆದ್ದುಕೊಂಡು ಮೂರು ಹಾಗೂ ಅಂತಿಮ ಸುತ್ತಿಗೆ ಕಾಲಿಟ್ಟಿತು. ಈ ನಿರ್ಣಾಯಕ ಸುತ್ತಿನಲ್ಲಿ ಚೀನಾದ ಜೋಡಿ ಅಂತಿಮವಾಗಿ 21-19 ಅಂತರದಿಂದ ಗೆಲುವು ದಾಖಲಿಸಿ ಪ್ರಶಸ್ತಿಗೆ ಮುತ್ತಿಕ್ಕಿತು.

ಈ ಗೆಲುವಿನೊಂದಿಗೆ ಲಿಯಾಂಗ್ ಹಾಗೂ ವಾಂಗ್ ಅವರು ಏಷ್ಯನ್‌ ಗೇಮ್ಸ್‌ನಲ್ಲಿ ಭಾರತದ ಜೋಡಿ ವಿರುದ್ಧದ ಸೋಲಿಗೆ ಸೇಡು ತೀರಿಸಿಕೊಂಡರು. ಫೈನಲ್‌ನಲ್ಲಿ ಭಾರತದ ಶಟ್ಲರ್‌ಗಳು ತಮ್ಮ ಶ್ರೇಷ್ಠ ಪ್ರದರ್ಶನ ನೀಡುವಲ್ಲಿ ವಿಫಲರಾದರು.

ಸಾತ್ವಿಕ್ ಹಾಗೂ ಚಿರಾಗ್ 2023ನೇ ವರ್ಷದಲ್ಲಿ ಬ್ಯಾಡ್ಮಿಂಟನ್ ಏಷ್ಯನ್ ಚಾಂಪಿಯನ್‌ಶಿಪ್, ಇಂಡೋನೇಷ್ಯಾ ಸೂಪರ್-1000, ಕೊರಿಯಾ ಸೂಪರ್ 500, ಸ್ವಿಸ್ ಸೂಪರ್ 300 ಹಾಗೂ ಏಷ್ಯನ್‌ ಗೇಮ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ್ದರು.

andolanait

Recent Posts

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್‌: ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್‌ ತಂದರು. ಹಳ್ಳಿಗಳಲ್ಲೂ ಗ್ಯಾಸ್‌ ಬಂತು. ಈಗ…

25 mins ago

ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…

51 mins ago

ಓದುಗರ ಪತ್ರ: ಟೋಲ್ ದರ ಹೆಚ್ಚಳ ಗಾಯದ ಮೇಲೆ ಬರೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್‌ನಿಂದ ಅನ್ವಯವಾಗುವಂತೆ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…

2 hours ago

ಓದುಗರ ಪತ್ರ: ಐಪಿಎಲ್ ಟಿಕೆಟ್‌ಗೆ ಗೋಗರೆಯುತ್ತಿರುವ ಶಾಸಕರು

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು…

2 hours ago

ಓದುಗರ ಪತ್ರ: ಹಿಂದಿ ಭಾಷೆ ಬಗ್ಗೆ ತಾತ್ಸಾರ ಸಲ್ಲದು

ಎಸ್‌ಎಸ್‌ಎಲ್‌ಸಿ ಹಿಂದಿ ಭಾಷೆಯ ಪರೀಕ್ಷೆ ಮಾ.೩೧ರಂದು ನಡೆಯಲಿದ್ದು, ಪರೀಕ್ಷೆ ಸಂದರ್ಭದಲ್ಲಿಯೇ ಸರ್ಕಾರ ಹಿಂದಿ ವಿಷಯದಲ್ಲಿ ಅಂಕಗಳನ್ನು ಪರಿಗಣಿಸುವುದಿಲ್ಲ, ಬದಲಾಗಿ ಗ್ರೇಡ್…

2 hours ago

ಓದುಗರ ಪತ್ರ: ಶಾಸಕ ದರ್ಶನ್ ಮಾದರಿ ನಡೆ

ಜನರಿಂದ ಚುನಾಯಿತರಾದ ಜನಪ್ರತಿನಿಧಿಗೆ ತನ್ನ ಕ್ಷೇತ್ರಕ್ಕೆ ಮಾಡಬೇಕಾಗಿರುವ ಯೋಜನೆಗಳ ಬಗ್ಗೆ ಸಾಕಷ್ಟು ಒಲವಿರಬೇಕು ಹಾಗೂ ಬದ್ಧತೆ ಇರಬೇಕು ಎನ್ನುವುದಕ್ಕೆ ತಮಗೆ…

2 hours ago