ಕ್ರೀಡೆ

China masters 2023: ಫೈನಲ್‌ನಲ್ಲಿ ಎಡವಿದ ಸಾತ್ವಿಕ್‌ ಚಿರಾಗ್‌ ಜೋಡಿ

ಬೀಜಿಂಗ್‌ : ಚೀನಾ ಮಾಸ್ಟರ್ಸ್‌ ಬ್ಯಾಡ್ಮಂಟನ್‌ ಟೂರ್ನಮೆಂಟ್‌ನ ಫೈನಲ್‌ ನಲ್ಲಿ ಭಾರತದ ಚಿರಾಗ್‌ ಶೆಟ್ಟಿ ಹಾಗೂ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಅವರು ವಿಶ್ವದ ನಂ.1 ಜೋಡಿಗಳಾದ ಲಿಯಾಂಗ್‌ ವೀ ಕೆಂಗ್‌ ಹಾಗೂ ವಾಂಗ್‌ ಚಾಂಗ್‌ ವಿರುದ್ಧ ಫೈನಲ್‌ನಲ್ಲಿ ಪರಾಭವಗೊಂಡಿದ್ದಾರೆ.

ಭಾನುವಾರ ನಡೆದ ಈ ಪಂದ್ಯದಲ್ಲಿ ನ.1 ಶ್ರೇಯಾಂಕದ ಭಾರತದ ಜೋಡಿ ಒಂದು ಗಂಟೆ ಹಾಗೂ 9 ನಿಮಿಷಗಳ ಕಾಲ ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲಿ ಚೀನಾದ ಜೋಡಿ 19-21, 21-18, 19-21 ಗೇಮ್‌ಗಳ ಅಂತರದಿಂದ ಸೋಲನುಭವಿಸಿದರು. ಆರಂಭದಿಂದಲೇ ಲಿಯಾಂಗ್ ಹಾಗೂ ವಾಂಗ್‌ರಿಂದ ಸಾತ್ವಿಕ್ ಹೆಚ್ಚು ಒತ್ತಡಕ್ಕೆ ಒಳಗಾದರು. ಮೊದಲ ಗೇಮ್‌ನ್ನು 19-21 ಅಂತರದಿಂದ ಸೋತು ಹಿನ್ನಡೆಯಲ್ಲಿದ್ದ ಭಾರತದ ಜೋಡಿ ಎರಡನೇ ಗೇಮ್ ಅನ್ನು 21-18 ಅಂತರದಿಂದ ಗೆದ್ದುಕೊಂಡು ಮೂರು ಹಾಗೂ ಅಂತಿಮ ಸುತ್ತಿಗೆ ಕಾಲಿಟ್ಟಿತು. ಈ ನಿರ್ಣಾಯಕ ಸುತ್ತಿನಲ್ಲಿ ಚೀನಾದ ಜೋಡಿ ಅಂತಿಮವಾಗಿ 21-19 ಅಂತರದಿಂದ ಗೆಲುವು ದಾಖಲಿಸಿ ಪ್ರಶಸ್ತಿಗೆ ಮುತ್ತಿಕ್ಕಿತು.

ಈ ಗೆಲುವಿನೊಂದಿಗೆ ಲಿಯಾಂಗ್ ಹಾಗೂ ವಾಂಗ್ ಅವರು ಏಷ್ಯನ್‌ ಗೇಮ್ಸ್‌ನಲ್ಲಿ ಭಾರತದ ಜೋಡಿ ವಿರುದ್ಧದ ಸೋಲಿಗೆ ಸೇಡು ತೀರಿಸಿಕೊಂಡರು. ಫೈನಲ್‌ನಲ್ಲಿ ಭಾರತದ ಶಟ್ಲರ್‌ಗಳು ತಮ್ಮ ಶ್ರೇಷ್ಠ ಪ್ರದರ್ಶನ ನೀಡುವಲ್ಲಿ ವಿಫಲರಾದರು.

ಸಾತ್ವಿಕ್ ಹಾಗೂ ಚಿರಾಗ್ 2023ನೇ ವರ್ಷದಲ್ಲಿ ಬ್ಯಾಡ್ಮಿಂಟನ್ ಏಷ್ಯನ್ ಚಾಂಪಿಯನ್‌ಶಿಪ್, ಇಂಡೋನೇಷ್ಯಾ ಸೂಪರ್-1000, ಕೊರಿಯಾ ಸೂಪರ್ 500, ಸ್ವಿಸ್ ಸೂಪರ್ 300 ಹಾಗೂ ಏಷ್ಯನ್‌ ಗೇಮ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ್ದರು.

andolanait

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

14 mins ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

2 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

3 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

3 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

3 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

3 hours ago