ಕ್ರೀಡೆ

China masters 2023: ಫೈನಲ್‌ನಲ್ಲಿ ಎಡವಿದ ಸಾತ್ವಿಕ್‌ ಚಿರಾಗ್‌ ಜೋಡಿ

ಬೀಜಿಂಗ್‌ : ಚೀನಾ ಮಾಸ್ಟರ್ಸ್‌ ಬ್ಯಾಡ್ಮಂಟನ್‌ ಟೂರ್ನಮೆಂಟ್‌ನ ಫೈನಲ್‌ ನಲ್ಲಿ ಭಾರತದ ಚಿರಾಗ್‌ ಶೆಟ್ಟಿ ಹಾಗೂ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಅವರು ವಿಶ್ವದ ನಂ.1 ಜೋಡಿಗಳಾದ ಲಿಯಾಂಗ್‌ ವೀ ಕೆಂಗ್‌ ಹಾಗೂ ವಾಂಗ್‌ ಚಾಂಗ್‌ ವಿರುದ್ಧ ಫೈನಲ್‌ನಲ್ಲಿ ಪರಾಭವಗೊಂಡಿದ್ದಾರೆ.

ಭಾನುವಾರ ನಡೆದ ಈ ಪಂದ್ಯದಲ್ಲಿ ನ.1 ಶ್ರೇಯಾಂಕದ ಭಾರತದ ಜೋಡಿ ಒಂದು ಗಂಟೆ ಹಾಗೂ 9 ನಿಮಿಷಗಳ ಕಾಲ ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲಿ ಚೀನಾದ ಜೋಡಿ 19-21, 21-18, 19-21 ಗೇಮ್‌ಗಳ ಅಂತರದಿಂದ ಸೋಲನುಭವಿಸಿದರು. ಆರಂಭದಿಂದಲೇ ಲಿಯಾಂಗ್ ಹಾಗೂ ವಾಂಗ್‌ರಿಂದ ಸಾತ್ವಿಕ್ ಹೆಚ್ಚು ಒತ್ತಡಕ್ಕೆ ಒಳಗಾದರು. ಮೊದಲ ಗೇಮ್‌ನ್ನು 19-21 ಅಂತರದಿಂದ ಸೋತು ಹಿನ್ನಡೆಯಲ್ಲಿದ್ದ ಭಾರತದ ಜೋಡಿ ಎರಡನೇ ಗೇಮ್ ಅನ್ನು 21-18 ಅಂತರದಿಂದ ಗೆದ್ದುಕೊಂಡು ಮೂರು ಹಾಗೂ ಅಂತಿಮ ಸುತ್ತಿಗೆ ಕಾಲಿಟ್ಟಿತು. ಈ ನಿರ್ಣಾಯಕ ಸುತ್ತಿನಲ್ಲಿ ಚೀನಾದ ಜೋಡಿ ಅಂತಿಮವಾಗಿ 21-19 ಅಂತರದಿಂದ ಗೆಲುವು ದಾಖಲಿಸಿ ಪ್ರಶಸ್ತಿಗೆ ಮುತ್ತಿಕ್ಕಿತು.

ಈ ಗೆಲುವಿನೊಂದಿಗೆ ಲಿಯಾಂಗ್ ಹಾಗೂ ವಾಂಗ್ ಅವರು ಏಷ್ಯನ್‌ ಗೇಮ್ಸ್‌ನಲ್ಲಿ ಭಾರತದ ಜೋಡಿ ವಿರುದ್ಧದ ಸೋಲಿಗೆ ಸೇಡು ತೀರಿಸಿಕೊಂಡರು. ಫೈನಲ್‌ನಲ್ಲಿ ಭಾರತದ ಶಟ್ಲರ್‌ಗಳು ತಮ್ಮ ಶ್ರೇಷ್ಠ ಪ್ರದರ್ಶನ ನೀಡುವಲ್ಲಿ ವಿಫಲರಾದರು.

ಸಾತ್ವಿಕ್ ಹಾಗೂ ಚಿರಾಗ್ 2023ನೇ ವರ್ಷದಲ್ಲಿ ಬ್ಯಾಡ್ಮಿಂಟನ್ ಏಷ್ಯನ್ ಚಾಂಪಿಯನ್‌ಶಿಪ್, ಇಂಡೋನೇಷ್ಯಾ ಸೂಪರ್-1000, ಕೊರಿಯಾ ಸೂಪರ್ 500, ಸ್ವಿಸ್ ಸೂಪರ್ 300 ಹಾಗೂ ಏಷ್ಯನ್‌ ಗೇಮ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ್ದರು.

andolanait

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

7 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

11 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

11 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

12 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

12 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

13 hours ago