ಕ್ರೀಡೆ

China masters 2023: ಫೈನಲ್‌ನಲ್ಲಿ ಎಡವಿದ ಸಾತ್ವಿಕ್‌ ಚಿರಾಗ್‌ ಜೋಡಿ

ಬೀಜಿಂಗ್‌ : ಚೀನಾ ಮಾಸ್ಟರ್ಸ್‌ ಬ್ಯಾಡ್ಮಂಟನ್‌ ಟೂರ್ನಮೆಂಟ್‌ನ ಫೈನಲ್‌ ನಲ್ಲಿ ಭಾರತದ ಚಿರಾಗ್‌ ಶೆಟ್ಟಿ ಹಾಗೂ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಅವರು ವಿಶ್ವದ ನಂ.1 ಜೋಡಿಗಳಾದ ಲಿಯಾಂಗ್‌ ವೀ ಕೆಂಗ್‌ ಹಾಗೂ ವಾಂಗ್‌ ಚಾಂಗ್‌ ವಿರುದ್ಧ ಫೈನಲ್‌ನಲ್ಲಿ ಪರಾಭವಗೊಂಡಿದ್ದಾರೆ.

ಭಾನುವಾರ ನಡೆದ ಈ ಪಂದ್ಯದಲ್ಲಿ ನ.1 ಶ್ರೇಯಾಂಕದ ಭಾರತದ ಜೋಡಿ ಒಂದು ಗಂಟೆ ಹಾಗೂ 9 ನಿಮಿಷಗಳ ಕಾಲ ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲಿ ಚೀನಾದ ಜೋಡಿ 19-21, 21-18, 19-21 ಗೇಮ್‌ಗಳ ಅಂತರದಿಂದ ಸೋಲನುಭವಿಸಿದರು. ಆರಂಭದಿಂದಲೇ ಲಿಯಾಂಗ್ ಹಾಗೂ ವಾಂಗ್‌ರಿಂದ ಸಾತ್ವಿಕ್ ಹೆಚ್ಚು ಒತ್ತಡಕ್ಕೆ ಒಳಗಾದರು. ಮೊದಲ ಗೇಮ್‌ನ್ನು 19-21 ಅಂತರದಿಂದ ಸೋತು ಹಿನ್ನಡೆಯಲ್ಲಿದ್ದ ಭಾರತದ ಜೋಡಿ ಎರಡನೇ ಗೇಮ್ ಅನ್ನು 21-18 ಅಂತರದಿಂದ ಗೆದ್ದುಕೊಂಡು ಮೂರು ಹಾಗೂ ಅಂತಿಮ ಸುತ್ತಿಗೆ ಕಾಲಿಟ್ಟಿತು. ಈ ನಿರ್ಣಾಯಕ ಸುತ್ತಿನಲ್ಲಿ ಚೀನಾದ ಜೋಡಿ ಅಂತಿಮವಾಗಿ 21-19 ಅಂತರದಿಂದ ಗೆಲುವು ದಾಖಲಿಸಿ ಪ್ರಶಸ್ತಿಗೆ ಮುತ್ತಿಕ್ಕಿತು.

ಈ ಗೆಲುವಿನೊಂದಿಗೆ ಲಿಯಾಂಗ್ ಹಾಗೂ ವಾಂಗ್ ಅವರು ಏಷ್ಯನ್‌ ಗೇಮ್ಸ್‌ನಲ್ಲಿ ಭಾರತದ ಜೋಡಿ ವಿರುದ್ಧದ ಸೋಲಿಗೆ ಸೇಡು ತೀರಿಸಿಕೊಂಡರು. ಫೈನಲ್‌ನಲ್ಲಿ ಭಾರತದ ಶಟ್ಲರ್‌ಗಳು ತಮ್ಮ ಶ್ರೇಷ್ಠ ಪ್ರದರ್ಶನ ನೀಡುವಲ್ಲಿ ವಿಫಲರಾದರು.

ಸಾತ್ವಿಕ್ ಹಾಗೂ ಚಿರಾಗ್ 2023ನೇ ವರ್ಷದಲ್ಲಿ ಬ್ಯಾಡ್ಮಿಂಟನ್ ಏಷ್ಯನ್ ಚಾಂಪಿಯನ್‌ಶಿಪ್, ಇಂಡೋನೇಷ್ಯಾ ಸೂಪರ್-1000, ಕೊರಿಯಾ ಸೂಪರ್ 500, ಸ್ವಿಸ್ ಸೂಪರ್ 300 ಹಾಗೂ ಏಷ್ಯನ್‌ ಗೇಮ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ್ದರು.

andolanait

Recent Posts

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

5 mins ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

2 hours ago

ಪೊಲೀಸ್ ಠಾಣೆ ಕೂಗಳತೆ ದೂರದಲ್ಲಿ ಯುವಕನ ಭೀಕರ ಕೊಲೆ

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…

3 hours ago

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

8 hours ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

8 hours ago

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

8 hours ago