ಕ್ರೀಡೆ

China masters 2023: ಫೈನಲ್‌ನಲ್ಲಿ ಎಡವಿದ ಸಾತ್ವಿಕ್‌ ಚಿರಾಗ್‌ ಜೋಡಿ

ಬೀಜಿಂಗ್‌ : ಚೀನಾ ಮಾಸ್ಟರ್ಸ್‌ ಬ್ಯಾಡ್ಮಂಟನ್‌ ಟೂರ್ನಮೆಂಟ್‌ನ ಫೈನಲ್‌ ನಲ್ಲಿ ಭಾರತದ ಚಿರಾಗ್‌ ಶೆಟ್ಟಿ ಹಾಗೂ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಅವರು ವಿಶ್ವದ ನಂ.1 ಜೋಡಿಗಳಾದ ಲಿಯಾಂಗ್‌ ವೀ ಕೆಂಗ್‌ ಹಾಗೂ ವಾಂಗ್‌ ಚಾಂಗ್‌ ವಿರುದ್ಧ ಫೈನಲ್‌ನಲ್ಲಿ ಪರಾಭವಗೊಂಡಿದ್ದಾರೆ.

ಭಾನುವಾರ ನಡೆದ ಈ ಪಂದ್ಯದಲ್ಲಿ ನ.1 ಶ್ರೇಯಾಂಕದ ಭಾರತದ ಜೋಡಿ ಒಂದು ಗಂಟೆ ಹಾಗೂ 9 ನಿಮಿಷಗಳ ಕಾಲ ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲಿ ಚೀನಾದ ಜೋಡಿ 19-21, 21-18, 19-21 ಗೇಮ್‌ಗಳ ಅಂತರದಿಂದ ಸೋಲನುಭವಿಸಿದರು. ಆರಂಭದಿಂದಲೇ ಲಿಯಾಂಗ್ ಹಾಗೂ ವಾಂಗ್‌ರಿಂದ ಸಾತ್ವಿಕ್ ಹೆಚ್ಚು ಒತ್ತಡಕ್ಕೆ ಒಳಗಾದರು. ಮೊದಲ ಗೇಮ್‌ನ್ನು 19-21 ಅಂತರದಿಂದ ಸೋತು ಹಿನ್ನಡೆಯಲ್ಲಿದ್ದ ಭಾರತದ ಜೋಡಿ ಎರಡನೇ ಗೇಮ್ ಅನ್ನು 21-18 ಅಂತರದಿಂದ ಗೆದ್ದುಕೊಂಡು ಮೂರು ಹಾಗೂ ಅಂತಿಮ ಸುತ್ತಿಗೆ ಕಾಲಿಟ್ಟಿತು. ಈ ನಿರ್ಣಾಯಕ ಸುತ್ತಿನಲ್ಲಿ ಚೀನಾದ ಜೋಡಿ ಅಂತಿಮವಾಗಿ 21-19 ಅಂತರದಿಂದ ಗೆಲುವು ದಾಖಲಿಸಿ ಪ್ರಶಸ್ತಿಗೆ ಮುತ್ತಿಕ್ಕಿತು.

ಈ ಗೆಲುವಿನೊಂದಿಗೆ ಲಿಯಾಂಗ್ ಹಾಗೂ ವಾಂಗ್ ಅವರು ಏಷ್ಯನ್‌ ಗೇಮ್ಸ್‌ನಲ್ಲಿ ಭಾರತದ ಜೋಡಿ ವಿರುದ್ಧದ ಸೋಲಿಗೆ ಸೇಡು ತೀರಿಸಿಕೊಂಡರು. ಫೈನಲ್‌ನಲ್ಲಿ ಭಾರತದ ಶಟ್ಲರ್‌ಗಳು ತಮ್ಮ ಶ್ರೇಷ್ಠ ಪ್ರದರ್ಶನ ನೀಡುವಲ್ಲಿ ವಿಫಲರಾದರು.

ಸಾತ್ವಿಕ್ ಹಾಗೂ ಚಿರಾಗ್ 2023ನೇ ವರ್ಷದಲ್ಲಿ ಬ್ಯಾಡ್ಮಿಂಟನ್ ಏಷ್ಯನ್ ಚಾಂಪಿಯನ್‌ಶಿಪ್, ಇಂಡೋನೇಷ್ಯಾ ಸೂಪರ್-1000, ಕೊರಿಯಾ ಸೂಪರ್ 500, ಸ್ವಿಸ್ ಸೂಪರ್ 300 ಹಾಗೂ ಏಷ್ಯನ್‌ ಗೇಮ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ್ದರು.

andolanait

Recent Posts

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

30 mins ago

ಮತ್ತೆ ಗ್ರಾಹಕರಿಗೆ ಶಾಕ್ ; ಪೆಟ್ರೋಲ್, ಡೀಸೆಲ್ ದರ 95 ಪೈಸೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…

1 hour ago

2008ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್‌

ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…

1 hour ago

ಹಕ್ಕು ಪತ್ರ ವಿತರಣೆಯಲ್ಲಿ ದಾಖಲೆ ನಿರ್ಮಾಣ ಮಾಡಿದ ಕಂದಾಯ ಇಲಾಖೆ

ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…

1 hour ago

ಸಂಶೋಧನೆಗೆ ಸಂಕಟ | ಶಿಷ್ಯವೇತನಕ್ಕೆ ಆಗ್ರಹಿಸಿ ಮೈ.ವಿ.ವಿ ಸಂಶೋಧಕರ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…

1 hour ago

ಪ್ರಶ್ನೆ ಪತ್ರಿಕೆ ಸೋರಿಕೆ | ನೀಟ್‌ ರದ್ದು, ವಿದ್ಯಾರ್ಥಿಗಳ ಆತಹತ್ಯೆಗೆ ಮೋದಿ ಕಾರಣ ; ಸಿಎಂ ಆರೋಪ

ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…

2 hours ago