ಲಂಡನ್ : ಆಷಸ್ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಆಟಗಾರರ ಜತೆ ಮಾತಿನ ಚಕಮಕಿ ನಡೆಸಿದ ಮೂವರು ಮೆಲ್ಬೋರ್ನ್ ಕ್ರಿಕೆಟ್ ಅಸೋಸಿಯೇಷನ್ ಸದಸ್ಯರನ್ನು ಅಮಾನತುಗೊಳಿಸಲಾಗಿದೆ. ಇಂಗ್ಲೆಂಡ್ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಜಾನಿ ಬೈರ್ಸ್ಟೋವ್ ಅವರ ಸ್ಟಂಪ್ ಔಟ್ ಸಂಬಂಧ ಈ ಘಟನೆ ನಡೆದಿತ್ತು.
ಭಾನುವಾರ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಮುಗಿದಿದ್ದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 43 ರನ್ಗಳಿಂದ ಗೆಲುವು ಪಡೆದಿತ್ತು. ಆ ಮೂಲಕ ಆಷಸ್ ಟೆಸ್ಟ್ ಸರಣಿಯಲ್ಲಿ 2-0 ಮುನ್ನಡೆ ಪಡೆದಿದೆ. ಅಂದ ಹಾಗೆ ಐದನೇ ದಿನ ಕ್ಯಾಮೆರಾನ್ ಗ್ರೀನ್ ಎಸೆದ ಬೌನ್ಸ್ ಅನ್ನು ಜಾನಿ ಬೈರ್ಸ್ಟೋವ್ ಆಡದೆ ಹಿಂದಕ್ಕೆ ಬಿಟ್ಟಿದ್ದರು. ನಂತರ ಬೈರ್ಸ್ಟೋವ್ ಕ್ರೀಸ್ ಬಿಟ್ಟು ಮುಂದಕ್ಕೆ ನಡೆದು ಹೋಗುವ ವೇಳೆ ಅಲೆಕ್ಸ್ ಕೇರಿ ಸ್ಪಂಪ್ ಔಟ್ ಮಾಡಿದ್ದರು. ಇದನ್ನು ಜಾನಿ ಬೈರ್ಸ್ಟೋವ್ ನಿರೀಕ್ಷಿಸಿರಲಿಲ್ಲ. ಅಂಪೈರ್ ಕೂಡ ಇಂಗ್ಲೆಂಡ್ ಆಟಗಾರ ಔಟ್ ಎಂದು ತೀರ್ಪು ನೀಡಿದ್ದರು.
ಅಂದ ಹಾಗೆ 5ನೇ ದಿನ ಭೋಜನ ವಿರಾಮದ ವೇಳೆ ಡ್ರೆಸ್ಸಿಂಗ್ ಕೊಠಡಿಗೆ ತೆರಳುವಾಗ ಆಸ್ಟ್ರೇಲಿಯಾ ಆಟಗಾರರ ಜತೆ ಮೆಲ್ಬೋರ್ನ್ ಕ್ರಿಕೆಟ್ ಕ್ಲಬ್ನ ಕೆಲ ಸದಸ್ಯರು ಕಿರಿಕ್ ಮಾಡಿಕೊಂಡಿದ್ದರು. ಆರಂಭಿಕ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖವಾಜ ಅವರ ಜತೆ ಎಂಸಿಸಿಯ ಕೆಲ ಸದಸ್ಯರು ಮಾತಿನ ಚಕಮಕಿ ನಡೆಸಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಈ ಘಟನೆ ನಡೆದ ಬಳಿಕ ಇದರ ವಿಡಿಯೋ ನೋಡಿದ ಎಂಸಿಸಿ ತನ್ನ ಮೂವರು ಸದಸ್ಯರನ್ನು ಅಮಾನತುಗೊಳಿಸಿದೆ. ತಮ್ಮ ಕೆಲ ಆಟಗಾರರ ಮೇಲೆ ದೈಹಿಕ ಸ್ಪರ್ಶವಾಗಿದೆ ಎಂದು ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಹೇಳಿಲ್ಲ. ಆದರೂ ಈ ಘಟನೆಯನ್ನು ತನಿಖೆಗೆ ಒಳಪಡಿಸಬೇಕು ಎಂದು ಕ್ರಿಕೆಟ್ ಕಾನೂನು ಪಾಲಕರು ಆಗ್ರಹಿಸಿದ್ದಾರೆ. ಆಸ್ಟ್ರೇಲಿಯಾ ಆಟಗಾರರ ಬಳಿ ಕ್ಷಮೆಯಾಚಿಸಿದ ಎಂಸಿಸಿ, ತನ್ನ ಕೆಲ ಸದಸ್ಯರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.
ಕೆಲ ಸದಸ್ಯರ ವರ್ತನೆ ಸ್ವೀಕಾರರ್ಹವಲ್ಲ : “ತನ್ನ ಮೂವರು ಸದ್ಯಸರನ್ನು ಎಂಸಿಸಿ ಅಮಾನತುಗೊಳಿಸಿದೆ. ಇದರ ಬಗ್ಗೆ ಸಂಪೂರ್ಣ ತನಿಖೆ ನಡೆಸುವವರೆಗೂ ಈ ಸದಸ್ಯರು ಲಾರ್ಡ್ಸ್ ಮೈದಾನಕ್ಕೆ ಪ್ರವೇಶವಿಲ್ಲ. ತಮ್ಮ ಕೆಲ ಸದಸ್ಯರ ವರ್ತನೆ ನಿಜವಾಗಲೂ ಸ್ವೀಕಾರರ್ಹವಲ್ಲ. ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಅವರು ಕೂಡ ದೈಹಿಕ ಕ್ರಿಯೆ ನಡೆದಿದೆ ಎಂದು ಹೇಳಿಲ್ಲ. ಆದರೆ, ಈ ಘಟನೆಯನ್ನು ಒಪ್ಪಲು ಸಾಧ್ಯವಿಲ್ಲ. ಆದರೆ, ಇಂಥಾ ವರ್ತನೆಗಳು ಎಂಸಿಸಿ ಮೌಲ್ಯಗಳಿಗೆ ವಿರುದ್ದವಾಗಿವೆ,” ಎಂದು ಎಂಸಿಸಿ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
“ಈ ಘಟನೆಯನ್ನು ಎಂಸಿಸಿ ಖಂಡಿಸಲಿದೆ ಹಾಗೂ ಕೆಲ ಸದಸ್ಯರು ಮಾಡಿದ ತಪ್ಪಿನಿಂದ ಕ್ರಿಕೆಟ್ ಆಸ್ಟ್ರೇಲಿಯಾ ಬಳಿ ಕ್ಷಮೆಯಾಚಿಸುತ್ತೇವೆ. ಈ ವರ್ತನೆ ನಿಜಕ್ಕೂ ಒಪ್ಪಲು ಸಾಧ್ಯವಿಲ್ಲ. ಆದರೆ, ಪಂದ್ಯದ ಐದೂ ದಿನಗಳು ಅದ್ಭುತವಾಗಿದ್ದವು. ಆಸ್ಟ್ರೇಲಿಯಾ ತಂಡ ಗೆಲ್ಲುವ ಮೂಲಕ ಲಾರ್ಡ್ಸ್ ಟೆಸ್ಟ್ ಮುಕ್ತಾಯವಾಗಿದೆ,” ಎಂದು ಎಂಸಿಸಿ ಹೇಳಿದೆ.
ಜಾನಿ ಬೈರ್ಸ್ಟೋವನ್ ಅವರ ಸ್ಟಂಪ್ ಔಟ್ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಹಾಗೂ ಕೋಚ್ ಬ್ರೆಂಡನ್ ಮೆಕಲಮ್ ಅವರ ಇದನ್ನು ಖಂಡಿಸಿದ್ದಾರೆ. ಆದರೆ, ಕೆಲ ಮಾಜಿ ಆಟಗಾರರು ಇದನ್ನು ಸಮರ್ಥಿಸಿಕೊಂಡಿದ್ದಾರೆ.
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…
ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…
ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ.…
ಮಹದೇವ ಶಂಕನಪುರ ಎಚ್.ಎಸ್.ಶಿವಪ್ರಕಾಶ್ ಅವರ ನಾಟಕ ‘ಮಾದಾರಿ ಮಾದಯ್ಯ’ ಕಳೆದ ೩೫ ವರ್ಷಗಳಿಂದಲೂ ಕನ್ನಡ ನೆಲದಲ್ಲಿ ಅಭಿನಯಿಸಲ್ಪಡುತ್ತಿದೆ. ಮೊದಲಿಗೆ ೧೯೯೦ರಲ್ಲಿ…
ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…
ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…