ಜೂನ್. 29ರ ಶನಿವಾರ ಟಿ20 ವಿಶ್ವಕಪ್ ನ ಫೈನಲ್ ನಡೆದು, ಭಾರತ ತಂಡ ರೋಚಕ ಜಯದೊಂದಿಗೆ ಎರಡನೇ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದುತ್ತು. ಪಂದ್ಯದಲ್ಲಿನ ಪ್ರತಿ ಎಸೆತವೂ ಆಟದ ಗತಿ ಬದಲಿಸುವಂತಿದ್ದುದ್ದರಿಂದ ಇಡೀ ದೇಶವೇ ಫೈನಲ್ ಪಂದ್ಯದಲ್ಲಿ ಭಾರತ ತಂಡದ ಗೆಲುವಿಗಾಗಿ ಕಾಯುತ್ತ ಕುಳಿತಿತ್ತು.
ಮೂರು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ 9.30ರ ವಿಮಾನ ಹತ್ತಿ ಬೆಂಗಳೂರಿಗೆ ವಾಪಾಸಾಗಬೇಕಿತ್ತು. ಒತ್ತಡಗಳ ನಡುವೆ ಅವರಿಗೆ ಸಿಕ್ಕಿದ್ದು ಕೆಲವೇ ಕೆಲವು ನಿಮಿಷಗಳು ಮಾತ್ರ, ಅದೇ ಅವರ ಒತ್ತಡಗಳನ್ನೆಲ್ಲಾ ಬದಿಗಿಟ್ಟು ವಿಮಾನದ ಬಾಗಿಲಲ್ಲಿ ನಿಂತು ವಿಶ್ವಕಪ್ ಟಿ20 ಫೈನಲ್ ಪಂದ್ಯ ವೀಕ್ಷಿಸಿದ್ದಾರೆ.
ಈ ವಿಡಿಯೋವನ್ನು ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಅವರು ಹಂಚಿಕೊಂಡಿದ್ದರು. ಅದರ ಜೊತೆಗೆ ಭಾರತವು ಸಂಘಟಿತ ಪ್ರದರ್ಶನದ ಮೂಲಕ ವಿಶ್ವಕಪ್ ಗೆದ್ದು ಬರಲಿ ಎಂದು ಮನದುಂಬಿ ಹಾರೈಸಿದ್ದರು.
ಈ ರೀತಿ ಸಿದ್ದರಾಮಯ್ಯನವರು ಶೇರ್ ಮಾಡಿದ್ದ ವೀಡಿಯೋ ಇದೀಗ ಜಾಲತಾಣದಲ್ಲಿ ಭಾರೀ ಹವಾ ಸೃಷ್ಟಿಸಿದೆ. ಈ ವರೆಗೆ ವೀಡಿಯೋವನ್ನು 70 ಲಕ್ಷಕ್ಕೂ ಅಧಿಕ ಜನ ವೀಕ್ಷಿಸಿದ್ದಾರೆ, 1,30,000 ಮಂದಿ ಸಿದ್ದರಾಮಯ್ಯನವರ ಕ್ರಿಕೆಟ್ ಪ್ರೇಮಕ್ಕೆ ಲೈಕ್ ಒತ್ತಿ ಮೆಚ್ಚಿದ್ದಾರೆ. ಸಾವಿರಾರು ಮಂದಿ ಕಮೆಂಟ್ ಗಳ ಸುರಿಮಳೆಗೈದು ನಿಮ್ಮ ಕ್ರೀಡಾ ಪ್ರೀತಿಗೆ ನಾವು ಅಭಿಮಾನಿಯಾಗಿದ್ದೇವೆಂದು ಕೊಂಡಾಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಕರ್ನಾಟಕದ ರಾಜಕಾರಣಿಯೊಬ್ಬರ ಸಾಮಾಜಿಕ ಜಾಲತಾಣದಲ್ಲಿ ಹಾಕಲ್ಪಟ್ಟ ಯಾವೊಂದು ವೀಡಿಯೋ ಕೂಡ ಇಷ್ಟು ವೈರಲ್ ಆಗಿಲ್ಲ ಎಂಬುದು ಗಮನಾರ್ಹ.
ಆಗಾಗ್ಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಐಪಿಎಲ್, ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ಹೋಗಿ ಪಂದ್ಯ ವೀಕ್ಷಿಸಿ ಆಟಗಾರರಿಗೆ ಚಪ್ಪಾಳೆಯ ಮೂಲಕ ಹುರಿದುಂಬಿಸುತ್ತಿದ್ದ ಸಿದ್ದರಾಮಯ್ಯನವರು ಬಿಡುವಿರದ ದಿನಚರಿಯ ಕಾರಣಕ್ಕೆ ವಿಮಾನದ ಬಾಗಿಲಲ್ಲಿ ನಿಂತು ಕ್ರಿಕೆಟ್ ವೀಕ್ಷಿಸಿದ್ದಕ್ಕೆ ಕರುನಾಡು ಕೊಂಡಾಡುತ್ತಿದೆ.
ಒಂದೆಡೆ ಭಾರತ ವಿಶ್ವಕಪ್ ಗೆದ್ದಿದೆ, ಇನ್ನೊಂದೆಡೆ ಸಿದ್ದರಾಮಯ್ಯನವರು ನಾಡಿನ ಕ್ರಿಕೆಟ್ ಪ್ರಿಯರ ಮನ ಗೆದ್ದಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…
ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…