ಕ್ರೀಡೆ

ಭಾರತ-ಪಾಕ್‌ ಪಂದ್ಯಾಟ ರದ್ದು ಪಡಿಸಬೇಕೆಂದು ಕರೆ ನೀಡಿದ್ದ ಗಂಭೀರ್‌ ಅವರಿಂದಲೇ ಕಮೆಂಟರಿ!

ನವದೆಹಲಿ : ಶ್ರೀಲಂಕಾದ ಪಲ್ಲೆಕೆಲೆ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯಾಕಪ್ 2023 ರ ಭಾರತ-ಪಾಕಿಸ್ತಾನ ಪಂದ್ಯಾಟದಲ್ಲಿ ಕಮೆಂಟರಿ ಬಾಕ್ಸ್‌ನಲ್ಲಿ ಕುಳಿತಿದ್ದ ಟೀಮ್‌ ಇಂಡಿಯಾದ ಮಾಜಿ ಆಟಗಾರ ಗೌತಮ್ ಗಂಭೀರ್ ಅವರು ನೆಟ್ಟಿಗರಿಂದ ಟ್ರೋಲ್‌ಗೆ ಗುರಿಯಾಗಿದ್ದಾರೆ.

“ಪಾಕಿಸ್ತಾನದೊಂದಿಗಿನ ಸಮಸ್ಯೆಗಳು ಬಗೆಹರಿಯುವವರೆಗೆ ಭಾರತದ ತಂಡ ಪಾಕ್‌ ಜೊತೆ ಯಾವುದೇ ಕ್ರೀಡಾಕೂಟದಲ್ಲಿ ಭಾಗಿಯಾಗಬಾರದು. ಯಾವುದೇ ಕಾರ್ಯಕ್ರಮವಾಗಲಿ, ಕ್ರಿಕೆಟ್ ಪಂದ್ಯವೇ ಆಗಲಿ ನಮ್ಮ ಸೈನಿಕರ ಪ್ರಾಣಕ್ಕಿಂತ ಮಿಗಿಲಾದದ್ದು ಅಲ್ಲ. ಯಾವುದೇ ಘಟನೆಯು ದೇಶಕ್ಕಿಂತ ದೊಡ್ಡದಲ್ಲ. ಪಾಕಿಸ್ತಾನದೊಂದಿಗಿನ ಪಂದ್ಯವನ್ನು ರದ್ದುಗೊಳಿಸಬೇಕು” ಎಂದು ಕಳೆದ ಮೂರು ವಾರಗಳ ಹಿಂದೆ ಸಂದರ್ಶನವೊಂದರಲ್ಲಿ ಗೌತಮ್‌ ಗಂಭೀರ್‌ ಹೇಳಿದ್ದರು ಎನ್ನಲಾಗಿದೆ.

ಬಿಜೆಪಿಯ ಸಂಸದರೂ ಆಗಿರುವ ಗೌತಮ್‌ ಗಂಭೀರ್‌ ಅವರು ಸ್ವತಃ ಕ್ರಿಕೆಟಿಗ ಆಗಿಯೂ ಕೂಡಾ ಈ ಹೇಳಿಕೆ ನೀಡಿರುವುದು ಸಾಕಷ್ಟು ಗಮನ ಸೆಳೆದಿತ್ತು. ಆದರೆ, ಇದೀಗ, ಹೇಳಿಕೆ ನೀಡಿ ತಿಂಗಳು ಪೂರ್ತಿ ಆಗುವುದರೊಳಗೆ ಭಾರತ ಹಾಗೂ ಪಾಕ್‌ ನಡುವಣ ಪಂದ್ಯಾಟಕ್ಕೆ ಕಾಮೆಂಟ್ರಿ ನೀಡಲು ಗಂಭೀರ್‌ ಅವರು ಉಪಸ್ಥಿತಿ ಇರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಬಿಜೆಪಿಯ ಸಂಸದರೂ ಆಗಿರುವ ಗೌತಮ್‌ ಗಂಭೀರ್‌ ಅವರು ನೆಟ್ಟಿಗರ ಟ್ರೋಲಿಗೆ ಗುರಿಯಾಗಿದ್ದಾರೆ.

“ಇದು ಬಿಜೆಪಿ ಸಂಸದ ಗೌತಮ್ ಗಂಭೀರ್. ಕೆಲವು ವಾರಗಳ ಹಿಂದೆ, ಭಾರತವು ಪಾಕಿಸ್ತಾನದೊಂದಿಗೆ ಆಡುವುದನ್ನು ಅವರು ತೀವ್ರವಾಗಿ ಆಕ್ಷೇಪಿಸಿದ್ದರು. ಭಾರತ ಮತ್ತು ಪಾಕಿಸ್ತಾನದ ಪಂದ್ಯವನ್ನು ರದ್ದುಗೊಳಿಸಬೇಕು ಎಂದು ಅವರು ಹೇಳಿದ್ದರು. ಆದರೆ, ಇಂದು ಅವರು ಕಾಮೆಂಟರಿ ಬಾಕ್ಸ್‌ನಲ್ಲಿ ಪಾಕಿಸ್ತಾನಿ ವೇಗದ ಬೌಲರ್‌ಗಳ ಕಡೆಗೆ ವಿಪರೀತವಾಗಿ ಒಲವು ತೋರುತ್ತಿದ್ದಾರೆ.

ಭಾರತದಲ್ಲಿರುವ ಅತ್ಯಂತ ನಾಚಿಕೆಯಿಲ್ಲದ ವ್ಯಕ್ತಿ” ಎಂದು ಗೌತಮ್‌ ಗಂಭಿರ್‌ ಅವರು ಪಾಕ್‌ ಮಾಜಿ ಆಟಗಾರ ವಸೀಮ್‌ ಅಕ್ರಮ್‌ ಜೊತೆಗೆ ಕಾಮೆಂಟರಿ ಬಾಕ್ಸ್‌ ಒಳಗೆ ಕೂತಿರುವ ಚಿತ್ರವನ್ನು ಹಂಚಿಕೊಂಡು ರೋಷನ್‌ ರೈ ಎಂಬವರು ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಮತ್ತೋರ್ವ ನೆಟ್ಟಿಗ, “ರಾಜಕಾರಣಿ ಗೌತಮ್‌ ಗಂಭೀರ್‌ ಹಾಗೆ ಹೇಳಿದ್ದರು, ಇದೀಗ ಕ್ರಿಕೆಟಿಗ ಗೌತಮ್‌ ಗಂಭೀರ್‌ ಕಾಮೆಂಟ್ರಿ ಮಾಡುತ್ತಿದ್ದಾರೆ. ಕಾಪಟ್ಯಕ್ಕೂ ಒಂದು ಮಿತಿ ಇರುತ್ತದೆ” ಎಂದು ವ್ಯಂಗ್ಯವಾಡಿದ್ದಾರೆ.

“ಆಗಸ್ಟ್ 12 ರಂದು ಗಂಭೀರ್ ಬಿಜೆಪಿ ಸಂಸದರಂತೆ ವರ್ತಿಸುತ್ತಿದ್ದರು. ಇಂದು ಅವರು ಮಾಜಿ ಕ್ರಿಕೆಟಿಗರಂತೆ ವರ್ತಿಸುತ್ತಿದ್ದಾರೆ” ಎಂದು ಇನ್ನೋರ್ವ ನೆಟ್ಟಿಗ ಟೀಕಿಸಿದ್ದಾರೆ.

andolanait

Recent Posts

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…

3 hours ago

ಈ ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ: ಅಧಿಕ ಉಷ್ಣಾಂಶ

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…

3 hours ago

ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…

3 hours ago

ಏಪ್ರಿಲ್‌ನಲ್ಲಿ ಹೊಸ ದಾಖಲೆಯ 2.43 ಲಕ್ಷ ಕೋಟಿ ರೂ ಜಿಎಸ್‌ಟಿ ಸಂಗ್ರಹ

ನವದೆಹಲಿ: ಅಮೇರಿಕಾ-ಇರಾನ್‌ ಯುದ್ಧದ ಹೊರತಾಗಿಯೂ ಏಪ್ರಿಲ್.‌2026ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್‌ನಲ್ಲಿ…

3 hours ago

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

13 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

14 hours ago