ಕ್ರೀಡೆ

ಭಾರತ-ಪಾಕ್‌ ಪಂದ್ಯಾಟ ರದ್ದು ಪಡಿಸಬೇಕೆಂದು ಕರೆ ನೀಡಿದ್ದ ಗಂಭೀರ್‌ ಅವರಿಂದಲೇ ಕಮೆಂಟರಿ!

ನವದೆಹಲಿ : ಶ್ರೀಲಂಕಾದ ಪಲ್ಲೆಕೆಲೆ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯಾಕಪ್ 2023 ರ ಭಾರತ-ಪಾಕಿಸ್ತಾನ ಪಂದ್ಯಾಟದಲ್ಲಿ ಕಮೆಂಟರಿ ಬಾಕ್ಸ್‌ನಲ್ಲಿ ಕುಳಿತಿದ್ದ ಟೀಮ್‌ ಇಂಡಿಯಾದ ಮಾಜಿ ಆಟಗಾರ ಗೌತಮ್ ಗಂಭೀರ್ ಅವರು ನೆಟ್ಟಿಗರಿಂದ ಟ್ರೋಲ್‌ಗೆ ಗುರಿಯಾಗಿದ್ದಾರೆ.

“ಪಾಕಿಸ್ತಾನದೊಂದಿಗಿನ ಸಮಸ್ಯೆಗಳು ಬಗೆಹರಿಯುವವರೆಗೆ ಭಾರತದ ತಂಡ ಪಾಕ್‌ ಜೊತೆ ಯಾವುದೇ ಕ್ರೀಡಾಕೂಟದಲ್ಲಿ ಭಾಗಿಯಾಗಬಾರದು. ಯಾವುದೇ ಕಾರ್ಯಕ್ರಮವಾಗಲಿ, ಕ್ರಿಕೆಟ್ ಪಂದ್ಯವೇ ಆಗಲಿ ನಮ್ಮ ಸೈನಿಕರ ಪ್ರಾಣಕ್ಕಿಂತ ಮಿಗಿಲಾದದ್ದು ಅಲ್ಲ. ಯಾವುದೇ ಘಟನೆಯು ದೇಶಕ್ಕಿಂತ ದೊಡ್ಡದಲ್ಲ. ಪಾಕಿಸ್ತಾನದೊಂದಿಗಿನ ಪಂದ್ಯವನ್ನು ರದ್ದುಗೊಳಿಸಬೇಕು” ಎಂದು ಕಳೆದ ಮೂರು ವಾರಗಳ ಹಿಂದೆ ಸಂದರ್ಶನವೊಂದರಲ್ಲಿ ಗೌತಮ್‌ ಗಂಭೀರ್‌ ಹೇಳಿದ್ದರು ಎನ್ನಲಾಗಿದೆ.

ಬಿಜೆಪಿಯ ಸಂಸದರೂ ಆಗಿರುವ ಗೌತಮ್‌ ಗಂಭೀರ್‌ ಅವರು ಸ್ವತಃ ಕ್ರಿಕೆಟಿಗ ಆಗಿಯೂ ಕೂಡಾ ಈ ಹೇಳಿಕೆ ನೀಡಿರುವುದು ಸಾಕಷ್ಟು ಗಮನ ಸೆಳೆದಿತ್ತು. ಆದರೆ, ಇದೀಗ, ಹೇಳಿಕೆ ನೀಡಿ ತಿಂಗಳು ಪೂರ್ತಿ ಆಗುವುದರೊಳಗೆ ಭಾರತ ಹಾಗೂ ಪಾಕ್‌ ನಡುವಣ ಪಂದ್ಯಾಟಕ್ಕೆ ಕಾಮೆಂಟ್ರಿ ನೀಡಲು ಗಂಭೀರ್‌ ಅವರು ಉಪಸ್ಥಿತಿ ಇರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಬಿಜೆಪಿಯ ಸಂಸದರೂ ಆಗಿರುವ ಗೌತಮ್‌ ಗಂಭೀರ್‌ ಅವರು ನೆಟ್ಟಿಗರ ಟ್ರೋಲಿಗೆ ಗುರಿಯಾಗಿದ್ದಾರೆ.

“ಇದು ಬಿಜೆಪಿ ಸಂಸದ ಗೌತಮ್ ಗಂಭೀರ್. ಕೆಲವು ವಾರಗಳ ಹಿಂದೆ, ಭಾರತವು ಪಾಕಿಸ್ತಾನದೊಂದಿಗೆ ಆಡುವುದನ್ನು ಅವರು ತೀವ್ರವಾಗಿ ಆಕ್ಷೇಪಿಸಿದ್ದರು. ಭಾರತ ಮತ್ತು ಪಾಕಿಸ್ತಾನದ ಪಂದ್ಯವನ್ನು ರದ್ದುಗೊಳಿಸಬೇಕು ಎಂದು ಅವರು ಹೇಳಿದ್ದರು. ಆದರೆ, ಇಂದು ಅವರು ಕಾಮೆಂಟರಿ ಬಾಕ್ಸ್‌ನಲ್ಲಿ ಪಾಕಿಸ್ತಾನಿ ವೇಗದ ಬೌಲರ್‌ಗಳ ಕಡೆಗೆ ವಿಪರೀತವಾಗಿ ಒಲವು ತೋರುತ್ತಿದ್ದಾರೆ.

ಭಾರತದಲ್ಲಿರುವ ಅತ್ಯಂತ ನಾಚಿಕೆಯಿಲ್ಲದ ವ್ಯಕ್ತಿ” ಎಂದು ಗೌತಮ್‌ ಗಂಭಿರ್‌ ಅವರು ಪಾಕ್‌ ಮಾಜಿ ಆಟಗಾರ ವಸೀಮ್‌ ಅಕ್ರಮ್‌ ಜೊತೆಗೆ ಕಾಮೆಂಟರಿ ಬಾಕ್ಸ್‌ ಒಳಗೆ ಕೂತಿರುವ ಚಿತ್ರವನ್ನು ಹಂಚಿಕೊಂಡು ರೋಷನ್‌ ರೈ ಎಂಬವರು ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಮತ್ತೋರ್ವ ನೆಟ್ಟಿಗ, “ರಾಜಕಾರಣಿ ಗೌತಮ್‌ ಗಂಭೀರ್‌ ಹಾಗೆ ಹೇಳಿದ್ದರು, ಇದೀಗ ಕ್ರಿಕೆಟಿಗ ಗೌತಮ್‌ ಗಂಭೀರ್‌ ಕಾಮೆಂಟ್ರಿ ಮಾಡುತ್ತಿದ್ದಾರೆ. ಕಾಪಟ್ಯಕ್ಕೂ ಒಂದು ಮಿತಿ ಇರುತ್ತದೆ” ಎಂದು ವ್ಯಂಗ್ಯವಾಡಿದ್ದಾರೆ.

“ಆಗಸ್ಟ್ 12 ರಂದು ಗಂಭೀರ್ ಬಿಜೆಪಿ ಸಂಸದರಂತೆ ವರ್ತಿಸುತ್ತಿದ್ದರು. ಇಂದು ಅವರು ಮಾಜಿ ಕ್ರಿಕೆಟಿಗರಂತೆ ವರ್ತಿಸುತ್ತಿದ್ದಾರೆ” ಎಂದು ಇನ್ನೋರ್ವ ನೆಟ್ಟಿಗ ಟೀಕಿಸಿದ್ದಾರೆ.

andolanait

Recent Posts

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

11 mins ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

15 mins ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…

20 mins ago

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

29 mins ago

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…

1 hour ago

ದರ್ಶನ್‌ಗೆ ಫಿಸಿಯೊಥೆರಪಿ ಸ್ಟಾಪ್‌ ಮಾಡಿದ ವೈದ್ಯರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌…

2 hours ago