ಕ್ರೀಡೆ

ಭಾರತ-ಪಾಕ್‌ ಪಂದ್ಯಾಟ ರದ್ದು ಪಡಿಸಬೇಕೆಂದು ಕರೆ ನೀಡಿದ್ದ ಗಂಭೀರ್‌ ಅವರಿಂದಲೇ ಕಮೆಂಟರಿ!

ನವದೆಹಲಿ : ಶ್ರೀಲಂಕಾದ ಪಲ್ಲೆಕೆಲೆ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯಾಕಪ್ 2023 ರ ಭಾರತ-ಪಾಕಿಸ್ತಾನ ಪಂದ್ಯಾಟದಲ್ಲಿ ಕಮೆಂಟರಿ ಬಾಕ್ಸ್‌ನಲ್ಲಿ ಕುಳಿತಿದ್ದ ಟೀಮ್‌ ಇಂಡಿಯಾದ ಮಾಜಿ ಆಟಗಾರ ಗೌತಮ್ ಗಂಭೀರ್ ಅವರು ನೆಟ್ಟಿಗರಿಂದ ಟ್ರೋಲ್‌ಗೆ ಗುರಿಯಾಗಿದ್ದಾರೆ.

“ಪಾಕಿಸ್ತಾನದೊಂದಿಗಿನ ಸಮಸ್ಯೆಗಳು ಬಗೆಹರಿಯುವವರೆಗೆ ಭಾರತದ ತಂಡ ಪಾಕ್‌ ಜೊತೆ ಯಾವುದೇ ಕ್ರೀಡಾಕೂಟದಲ್ಲಿ ಭಾಗಿಯಾಗಬಾರದು. ಯಾವುದೇ ಕಾರ್ಯಕ್ರಮವಾಗಲಿ, ಕ್ರಿಕೆಟ್ ಪಂದ್ಯವೇ ಆಗಲಿ ನಮ್ಮ ಸೈನಿಕರ ಪ್ರಾಣಕ್ಕಿಂತ ಮಿಗಿಲಾದದ್ದು ಅಲ್ಲ. ಯಾವುದೇ ಘಟನೆಯು ದೇಶಕ್ಕಿಂತ ದೊಡ್ಡದಲ್ಲ. ಪಾಕಿಸ್ತಾನದೊಂದಿಗಿನ ಪಂದ್ಯವನ್ನು ರದ್ದುಗೊಳಿಸಬೇಕು” ಎಂದು ಕಳೆದ ಮೂರು ವಾರಗಳ ಹಿಂದೆ ಸಂದರ್ಶನವೊಂದರಲ್ಲಿ ಗೌತಮ್‌ ಗಂಭೀರ್‌ ಹೇಳಿದ್ದರು ಎನ್ನಲಾಗಿದೆ.

ಬಿಜೆಪಿಯ ಸಂಸದರೂ ಆಗಿರುವ ಗೌತಮ್‌ ಗಂಭೀರ್‌ ಅವರು ಸ್ವತಃ ಕ್ರಿಕೆಟಿಗ ಆಗಿಯೂ ಕೂಡಾ ಈ ಹೇಳಿಕೆ ನೀಡಿರುವುದು ಸಾಕಷ್ಟು ಗಮನ ಸೆಳೆದಿತ್ತು. ಆದರೆ, ಇದೀಗ, ಹೇಳಿಕೆ ನೀಡಿ ತಿಂಗಳು ಪೂರ್ತಿ ಆಗುವುದರೊಳಗೆ ಭಾರತ ಹಾಗೂ ಪಾಕ್‌ ನಡುವಣ ಪಂದ್ಯಾಟಕ್ಕೆ ಕಾಮೆಂಟ್ರಿ ನೀಡಲು ಗಂಭೀರ್‌ ಅವರು ಉಪಸ್ಥಿತಿ ಇರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಬಿಜೆಪಿಯ ಸಂಸದರೂ ಆಗಿರುವ ಗೌತಮ್‌ ಗಂಭೀರ್‌ ಅವರು ನೆಟ್ಟಿಗರ ಟ್ರೋಲಿಗೆ ಗುರಿಯಾಗಿದ್ದಾರೆ.

“ಇದು ಬಿಜೆಪಿ ಸಂಸದ ಗೌತಮ್ ಗಂಭೀರ್. ಕೆಲವು ವಾರಗಳ ಹಿಂದೆ, ಭಾರತವು ಪಾಕಿಸ್ತಾನದೊಂದಿಗೆ ಆಡುವುದನ್ನು ಅವರು ತೀವ್ರವಾಗಿ ಆಕ್ಷೇಪಿಸಿದ್ದರು. ಭಾರತ ಮತ್ತು ಪಾಕಿಸ್ತಾನದ ಪಂದ್ಯವನ್ನು ರದ್ದುಗೊಳಿಸಬೇಕು ಎಂದು ಅವರು ಹೇಳಿದ್ದರು. ಆದರೆ, ಇಂದು ಅವರು ಕಾಮೆಂಟರಿ ಬಾಕ್ಸ್‌ನಲ್ಲಿ ಪಾಕಿಸ್ತಾನಿ ವೇಗದ ಬೌಲರ್‌ಗಳ ಕಡೆಗೆ ವಿಪರೀತವಾಗಿ ಒಲವು ತೋರುತ್ತಿದ್ದಾರೆ.

ಭಾರತದಲ್ಲಿರುವ ಅತ್ಯಂತ ನಾಚಿಕೆಯಿಲ್ಲದ ವ್ಯಕ್ತಿ” ಎಂದು ಗೌತಮ್‌ ಗಂಭಿರ್‌ ಅವರು ಪಾಕ್‌ ಮಾಜಿ ಆಟಗಾರ ವಸೀಮ್‌ ಅಕ್ರಮ್‌ ಜೊತೆಗೆ ಕಾಮೆಂಟರಿ ಬಾಕ್ಸ್‌ ಒಳಗೆ ಕೂತಿರುವ ಚಿತ್ರವನ್ನು ಹಂಚಿಕೊಂಡು ರೋಷನ್‌ ರೈ ಎಂಬವರು ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಮತ್ತೋರ್ವ ನೆಟ್ಟಿಗ, “ರಾಜಕಾರಣಿ ಗೌತಮ್‌ ಗಂಭೀರ್‌ ಹಾಗೆ ಹೇಳಿದ್ದರು, ಇದೀಗ ಕ್ರಿಕೆಟಿಗ ಗೌತಮ್‌ ಗಂಭೀರ್‌ ಕಾಮೆಂಟ್ರಿ ಮಾಡುತ್ತಿದ್ದಾರೆ. ಕಾಪಟ್ಯಕ್ಕೂ ಒಂದು ಮಿತಿ ಇರುತ್ತದೆ” ಎಂದು ವ್ಯಂಗ್ಯವಾಡಿದ್ದಾರೆ.

“ಆಗಸ್ಟ್ 12 ರಂದು ಗಂಭೀರ್ ಬಿಜೆಪಿ ಸಂಸದರಂತೆ ವರ್ತಿಸುತ್ತಿದ್ದರು. ಇಂದು ಅವರು ಮಾಜಿ ಕ್ರಿಕೆಟಿಗರಂತೆ ವರ್ತಿಸುತ್ತಿದ್ದಾರೆ” ಎಂದು ಇನ್ನೋರ್ವ ನೆಟ್ಟಿಗ ಟೀಕಿಸಿದ್ದಾರೆ.

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

2 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

2 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

2 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

2 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

2 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

2 hours ago