ಇಸ್ಲಾಮಾಬಾದ್: 2023ರಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ನಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಭಾಗವಹಿಸುವ ಬಗ್ಗೆ ನಿರ್ಧರಿಸಲು ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಅವರು ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿದ್ದಾರೆ.
ಈ ಸಮಿತಿಯು ತನ್ನ ಶಿಫಾರಸುಗಳನ್ನು ಷರೀಫ್ ಅವರಿಗೆ ಸಲ್ಲಿಸುವ ಮೊದಲು, ಕ್ರೀಡೆ ಮತ್ತು ನೀತಿಯನ್ನು ಹೊರತುಪಡಿಸಿ ಸರ್ಕಾರದ ನೀತಿ, ಆಟಗಾರರು, ಅಧಿಕಾರಿಗಳು, ಅಭಿಮಾನಿಗಳು, ಮಾಧ್ಯಮಗಳು ಮತ್ತು ಭಾರತದ ಪರಿಸ್ಥಿತಿ ಸೇರಿದಂತೆ ಉಭಯ ದೇಶಗಳ ಸಂಬಂಧಗಳ ಕುರಿತು ಎಲ್ಲಾ ಆಯಾಮಗಳಿಂದ ಪರಿಶೀಲಿಸುತ್ತದೆ ಮತ್ತು ಚರ್ಚಿಸಲಿದೆ.
ಪ್ರಧಾನಿ ಷರೀಫ್ ಅವರು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಪೋಷಕ-ಮುಖ್ಯಸ್ಥರೂ ಆಗಿದ್ದಾರೆ.
ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಮತ್ತು ಆತಿಥೇಯ ಬಿಸಿಸಿಐ ಎರಡೂ ಈಗಾಗಲೇ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಿವೆ ಮತ್ತು ಅಕ್ಟೋಬರ್ 5 ರಿಂದ ಪ್ರಾರಂಭವಾಗುವ 50 ಓವರ್ಗಳ ಏಕದಿನ ವಿಶ್ವಕಪ್ ಗಾಗಿ ಪಾಕಿಸ್ತಾನ ತಂಡ ಭಾರತಕ್ಕೆ ಪ್ರಯಾಣಿಸುವ ನಿರೀಕ್ಷೆಯಿದೆ.
ಆದಾಗ್ಯೂ, ಉಭಯ ದೇಶಗಳ ನಡುವಿನ ಉದ್ವಿಗ್ನ ಸಂಬಂಧಗಳಿಂದಾಗಿ ಪಾಕ್ ಕ್ರಿಕೆಟ್ ತಂಡ ವಿಶ್ವಕಪ್ ನಲ್ಲಿ ಭಾಗವಹಿಸುವ ಬಗ್ಗೆ ಸರ್ಕಾರವೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಪಿಸಿಬಿ ಹೇಳಿದೆ.
ಕ್ರೀಡಾ ಸಚಿವ ಅಹ್ಸಾನ್ ಮಜಾರಿ, ಮರ್ಯಮ್ ಔರಂಗಜೇಬ್, ಅಸದ್ ಮಹಮೂದ್, ಅಮೀನ್ ಉಲ್ ಹಕ್, ಕಮರ್ ಜಮಾನ್ ಕೈರಾ ಮತ್ತು ಮಾಜಿ ರಾಜತಾಂತ್ರಿಕ ಅಧಿಕಾರಿ ತಾರಿಕ್ ಫಾತ್ಮಿ ಅವರು ಈ ಸಮಿತಿಯ ಸದಸ್ಯರಾಗಿದ್ದಾರೆ.
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…
ನಾಸಿಕ್ : ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್ನಲ್ಲಿ 2025ರ ಅಕ್ಟೋಬರ್ನಲ್ಲಿ ಸಂಚಲನ ಸೃಷ್ಟಿಸಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ…
ಕೋಲಾರ : ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಭಾರತದ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಫೈನಲ್ ಅಸೆಂಬ್ಲಿ ಲೈನ್ (FAL)…
ಮೈಸೂರು : ಕೃಷಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಕೊಳ್ಳುವ ಮೂಲಕ ಕೃಷಿಯನ್ನು ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ…