ಇಸ್ಲಾಮಾಬಾದ್: 2023ರಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ನಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಭಾಗವಹಿಸುವ ಬಗ್ಗೆ ನಿರ್ಧರಿಸಲು ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಅವರು ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿದ್ದಾರೆ.
ಈ ಸಮಿತಿಯು ತನ್ನ ಶಿಫಾರಸುಗಳನ್ನು ಷರೀಫ್ ಅವರಿಗೆ ಸಲ್ಲಿಸುವ ಮೊದಲು, ಕ್ರೀಡೆ ಮತ್ತು ನೀತಿಯನ್ನು ಹೊರತುಪಡಿಸಿ ಸರ್ಕಾರದ ನೀತಿ, ಆಟಗಾರರು, ಅಧಿಕಾರಿಗಳು, ಅಭಿಮಾನಿಗಳು, ಮಾಧ್ಯಮಗಳು ಮತ್ತು ಭಾರತದ ಪರಿಸ್ಥಿತಿ ಸೇರಿದಂತೆ ಉಭಯ ದೇಶಗಳ ಸಂಬಂಧಗಳ ಕುರಿತು ಎಲ್ಲಾ ಆಯಾಮಗಳಿಂದ ಪರಿಶೀಲಿಸುತ್ತದೆ ಮತ್ತು ಚರ್ಚಿಸಲಿದೆ.
ಪ್ರಧಾನಿ ಷರೀಫ್ ಅವರು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಪೋಷಕ-ಮುಖ್ಯಸ್ಥರೂ ಆಗಿದ್ದಾರೆ.
ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಮತ್ತು ಆತಿಥೇಯ ಬಿಸಿಸಿಐ ಎರಡೂ ಈಗಾಗಲೇ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಿವೆ ಮತ್ತು ಅಕ್ಟೋಬರ್ 5 ರಿಂದ ಪ್ರಾರಂಭವಾಗುವ 50 ಓವರ್ಗಳ ಏಕದಿನ ವಿಶ್ವಕಪ್ ಗಾಗಿ ಪಾಕಿಸ್ತಾನ ತಂಡ ಭಾರತಕ್ಕೆ ಪ್ರಯಾಣಿಸುವ ನಿರೀಕ್ಷೆಯಿದೆ.
ಆದಾಗ್ಯೂ, ಉಭಯ ದೇಶಗಳ ನಡುವಿನ ಉದ್ವಿಗ್ನ ಸಂಬಂಧಗಳಿಂದಾಗಿ ಪಾಕ್ ಕ್ರಿಕೆಟ್ ತಂಡ ವಿಶ್ವಕಪ್ ನಲ್ಲಿ ಭಾಗವಹಿಸುವ ಬಗ್ಗೆ ಸರ್ಕಾರವೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಪಿಸಿಬಿ ಹೇಳಿದೆ.
ಕ್ರೀಡಾ ಸಚಿವ ಅಹ್ಸಾನ್ ಮಜಾರಿ, ಮರ್ಯಮ್ ಔರಂಗಜೇಬ್, ಅಸದ್ ಮಹಮೂದ್, ಅಮೀನ್ ಉಲ್ ಹಕ್, ಕಮರ್ ಜಮಾನ್ ಕೈರಾ ಮತ್ತು ಮಾಜಿ ರಾಜತಾಂತ್ರಿಕ ಅಧಿಕಾರಿ ತಾರಿಕ್ ಫಾತ್ಮಿ ಅವರು ಈ ಸಮಿತಿಯ ಸದಸ್ಯರಾಗಿದ್ದಾರೆ.
ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…
ನವದೆಹಲಿ: ಕೋಗಿಲು ಲೇಔಟ್ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…
ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ…
ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್ ಎಂಬುವವರು ತಮಗೆ ಸೇರಿದ…
ಬೆಂಗಳೂರು: ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಚಿತ್ರದುರ್ಗ: ಚಿತ್ರದುರ್ಗ ಬಸ್ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ. ಮೃತರನ್ನು…