ಕ್ರೀಡೆ

ವಿಶ್ವಕಪ್ ನಲ್ಲಿ ಪಿಸಿಬಿ ಭಾಗವಹಿಸುವ ಬಗ್ಗೆ ನಿರ್ಧರಿಸಲು ಸಮಿತಿ ರಚನೆ: ಪಾಕ್ ಪ್ರಧಾನಿ

ಇಸ್ಲಾಮಾಬಾದ್: 2023ರಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಭಾಗವಹಿಸುವ ಬಗ್ಗೆ ನಿರ್ಧರಿಸಲು ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಅವರು ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿದ್ದಾರೆ.

ಈ ಸಮಿತಿಯು ತನ್ನ ಶಿಫಾರಸುಗಳನ್ನು ಷರೀಫ್‌ ಅವರಿಗೆ ಸಲ್ಲಿಸುವ ಮೊದಲು, ಕ್ರೀಡೆ ಮತ್ತು ನೀತಿಯನ್ನು ಹೊರತುಪಡಿಸಿ ಸರ್ಕಾರದ ನೀತಿ, ಆಟಗಾರರು, ಅಧಿಕಾರಿಗಳು, ಅಭಿಮಾನಿಗಳು, ಮಾಧ್ಯಮಗಳು ಮತ್ತು ಭಾರತದ ಪರಿಸ್ಥಿತಿ ಸೇರಿದಂತೆ  ಉಭಯ ದೇಶಗಳ ಸಂಬಂಧಗಳ ಕುರಿತು ಎಲ್ಲಾ ಆಯಾಮಗಳಿಂದ ಪರಿಶೀಲಿಸುತ್ತದೆ ಮತ್ತು ಚರ್ಚಿಸಲಿದೆ.

ಪ್ರಧಾನಿ ಷರೀಫ್ ಅವರು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಪೋಷಕ-ಮುಖ್ಯಸ್ಥರೂ ಆಗಿದ್ದಾರೆ.

ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಮತ್ತು ಆತಿಥೇಯ ಬಿಸಿಸಿಐ ಎರಡೂ ಈಗಾಗಲೇ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಿವೆ ಮತ್ತು ಅಕ್ಟೋಬರ್ 5 ರಿಂದ ಪ್ರಾರಂಭವಾಗುವ 50 ಓವರ್‌ಗಳ ಏಕದಿನ ವಿಶ್ವಕಪ್ ಗಾಗಿ ಪಾಕಿಸ್ತಾನ ತಂಡ ಭಾರತಕ್ಕೆ ಪ್ರಯಾಣಿಸುವ ನಿರೀಕ್ಷೆಯಿದೆ.

ಆದಾಗ್ಯೂ, ಉಭಯ ದೇಶಗಳ ನಡುವಿನ ಉದ್ವಿಗ್ನ ಸಂಬಂಧಗಳಿಂದಾಗಿ ಪಾಕ್ ಕ್ರಿಕೆಟ್ ತಂಡ ವಿಶ್ವಕಪ್ ನಲ್ಲಿ ಭಾಗವಹಿಸುವ ಬಗ್ಗೆ ಸರ್ಕಾರವೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಪಿಸಿಬಿ ಹೇಳಿದೆ.

ಕ್ರೀಡಾ ಸಚಿವ ಅಹ್ಸಾನ್ ಮಜಾರಿ, ಮರ್ಯಮ್ ಔರಂಗಜೇಬ್, ಅಸದ್ ಮಹಮೂದ್, ಅಮೀನ್ ಉಲ್ ಹಕ್, ಕಮರ್ ಜಮಾನ್ ಕೈರಾ ಮತ್ತು ಮಾಜಿ ರಾಜತಾಂತ್ರಿಕ ಅಧಿಕಾರಿ ತಾರಿಕ್ ಫಾತ್ಮಿ ಅವರು ಈ ಸಮಿತಿಯ ಸದಸ್ಯರಾಗಿದ್ದಾರೆ.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

8 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

8 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

8 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

8 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

8 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

8 hours ago