ಕ್ರೀಡೆ

ವಿಶ್ವಕಪ್ ನಲ್ಲಿ ಪಿಸಿಬಿ ಭಾಗವಹಿಸುವ ಬಗ್ಗೆ ನಿರ್ಧರಿಸಲು ಸಮಿತಿ ರಚನೆ: ಪಾಕ್ ಪ್ರಧಾನಿ

ಇಸ್ಲಾಮಾಬಾದ್: 2023ರಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಭಾಗವಹಿಸುವ ಬಗ್ಗೆ ನಿರ್ಧರಿಸಲು ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಅವರು ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿದ್ದಾರೆ.

ಈ ಸಮಿತಿಯು ತನ್ನ ಶಿಫಾರಸುಗಳನ್ನು ಷರೀಫ್‌ ಅವರಿಗೆ ಸಲ್ಲಿಸುವ ಮೊದಲು, ಕ್ರೀಡೆ ಮತ್ತು ನೀತಿಯನ್ನು ಹೊರತುಪಡಿಸಿ ಸರ್ಕಾರದ ನೀತಿ, ಆಟಗಾರರು, ಅಧಿಕಾರಿಗಳು, ಅಭಿಮಾನಿಗಳು, ಮಾಧ್ಯಮಗಳು ಮತ್ತು ಭಾರತದ ಪರಿಸ್ಥಿತಿ ಸೇರಿದಂತೆ  ಉಭಯ ದೇಶಗಳ ಸಂಬಂಧಗಳ ಕುರಿತು ಎಲ್ಲಾ ಆಯಾಮಗಳಿಂದ ಪರಿಶೀಲಿಸುತ್ತದೆ ಮತ್ತು ಚರ್ಚಿಸಲಿದೆ.

ಪ್ರಧಾನಿ ಷರೀಫ್ ಅವರು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಪೋಷಕ-ಮುಖ್ಯಸ್ಥರೂ ಆಗಿದ್ದಾರೆ.

ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಮತ್ತು ಆತಿಥೇಯ ಬಿಸಿಸಿಐ ಎರಡೂ ಈಗಾಗಲೇ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಿವೆ ಮತ್ತು ಅಕ್ಟೋಬರ್ 5 ರಿಂದ ಪ್ರಾರಂಭವಾಗುವ 50 ಓವರ್‌ಗಳ ಏಕದಿನ ವಿಶ್ವಕಪ್ ಗಾಗಿ ಪಾಕಿಸ್ತಾನ ತಂಡ ಭಾರತಕ್ಕೆ ಪ್ರಯಾಣಿಸುವ ನಿರೀಕ್ಷೆಯಿದೆ.

ಆದಾಗ್ಯೂ, ಉಭಯ ದೇಶಗಳ ನಡುವಿನ ಉದ್ವಿಗ್ನ ಸಂಬಂಧಗಳಿಂದಾಗಿ ಪಾಕ್ ಕ್ರಿಕೆಟ್ ತಂಡ ವಿಶ್ವಕಪ್ ನಲ್ಲಿ ಭಾಗವಹಿಸುವ ಬಗ್ಗೆ ಸರ್ಕಾರವೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಪಿಸಿಬಿ ಹೇಳಿದೆ.

ಕ್ರೀಡಾ ಸಚಿವ ಅಹ್ಸಾನ್ ಮಜಾರಿ, ಮರ್ಯಮ್ ಔರಂಗಜೇಬ್, ಅಸದ್ ಮಹಮೂದ್, ಅಮೀನ್ ಉಲ್ ಹಕ್, ಕಮರ್ ಜಮಾನ್ ಕೈರಾ ಮತ್ತು ಮಾಜಿ ರಾಜತಾಂತ್ರಿಕ ಅಧಿಕಾರಿ ತಾರಿಕ್ ಫಾತ್ಮಿ ಅವರು ಈ ಸಮಿತಿಯ ಸದಸ್ಯರಾಗಿದ್ದಾರೆ.

andolanait

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

2 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

4 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

5 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

9 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

14 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

14 hours ago