ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್ : ಚಿನ್ನ ಗೆದ್ದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ

ಬರ್ಮಿಂಗ್‌ಹ್ಯಾಮ್ : ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ ಭಾರತ ಕೀರ್ತಿ ಪತಾಕೆ ಹಾರಿಸಿದ್ದಾರೆ. ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಪಿವಿ ಸಿಂಧೂ ಕೆನಡಾ ಮೈಕೆಲ್ ಲೀ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಫೈನಲ್ ಸುತ್ತಿನಲ್ಲಿ ಪಿವಿ ಸಿಂಧು 21-15, 21-13 ಅಂತರದಲ್ಲಿ ಕೆನಡಾ ಸ್ಪರ್ಧಿ ವಿರುದ್ಧ ಗೆಲುವು ದಾಖಲಿಸಿದ್ದಾರೆ. ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟ 2022ರಲ್ಲಿ ಭಾರತ ಗೆದ್ದ 19ನೇ ಚಿನ್ನದ ಪದಕವಾಗಿದೆ.  2014ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದ ಮೈಕೆಲ್ ಲೀ ಸದ್ಯ 13ನೇ ಶ್ರೇಯಾಂಕಿತರಾಗಿದ್ದಾರೆ. 2018ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಪಿವಿ ಸಿಂಧು ಫೈನಲ್ ಪಂದ್ಯದಲ್ಲಿ ಭಾರತದ ಮತ್ತೊಬ್ಬ ಶಟ್ಲರ್ ಸೈನಾ ನೆಹ್ವಾಲ್ ವಿರುದ್ಧ ಮುಗ್ಗರಿಸಿದ್ದರು. ಇದೀಗ ಕಾಮನ್‌ವೆಲ್ತ್ ಗೇಮ್ಸ್ ಕೂಟದಲ್ಲಿ ಸಿಂಧೂ ಚಿನ್ನದ ಪದಕ ಸಾಧನೆ ಮಾಡಿದ್ದಾರೆ. ಸಿಂಧೂ ಚಿನ್ನದ ಪದಕದ ಮೂಲಕ ಭಾರತ ಪಜಕ ಪಟ್ಟಿಯಲ್ಲಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದೆ. 19 ಚಿನ್ನ, 15 ಬೆಳ್ಳಿ ಹಾಗೂ 22 ಕಂಚಿನ ಪದಕದೊಂದಿಗೆ ಒಟ್ಟು 56 ಪದಕ ಗೆದ್ದುಕೊಂಡಿದೆ.

ಮೊದಲ ಸೆಟ್‌ನಲ್ಲಿ ಪಿವಿ ಸಿಂಧೂ ಪರಾಕ್ರಮ ತೋರಿದರು.  21-15 ಅಂತರದಲ್ಲಿ ಮೊದಲ ಸೆಟ್ ಗೆದ್ದುಕೊಂಡರು. ಎರಡನೇ ಸೆಟ್‌ನಲ್ಲಿ ಗೇಮ್‌ಬ್ರೇಕ್‌ನಲ್ಲಿ 11-6 ಅಂತರದಲ್ಲಿ ಮುನ್ನಡೆ ಪಡೆದ ಸಿಂಧೂ 21-13 ಅಂತರದಲ್ಲಿ ಪಂದ್ಯ ಫಿನೀಶ್ ಮಾಡಿದರು.

ಕ್ವಾರ್ಟರ್‌ ಫೈನಲ್‌ನಲ್ಲಿ ಮಾಜಿ ವಿಶ್ವ ಚಾಂಪಿಯನ್‌ ಸಿಂಧು, ಮಲೇಷ್ಯಾದ ಜಿನ್‌ ವೀ ಗೋ ವಿರುದ್ಧ 19-21, 21-14, 21-18 ಅಂತರದಲ್ಲಿ ಗೆಲುವು ದಾಖಲಿಸಿದ್ದರು. ಮೂಲಕ ಅಂತಿಮ 4ರ ಘಟ್ಟಪ್ರವೇಶಿಸಿದರು.  ಭಾನುವಾರ ಮಹಿಳಾ ಸಿಂಗಲ್ಸ್‌ ಸೆಮಿಫೈನಲ್‌ನಲ್ಲಿ ಸಿಂಗಾಪೂರದ ಯೋ ಜಿಯಾ ಮಿನ್‌ ಅವರನ್ನು 21-19, 21-17 ನೇರ ಗೇಮ್‌ಗಳಿಂದ ಮಣಿಸಿದ ಪಿವಿ ಸಿಂಧು ಫೈನಲ್ ಪ್ರವೇಶಿಸಿದ್ದರು.

ಸಿಂಧು ಚಿನ್ನ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ. ಪಿವಿ ಸಿಂಧೂ ಚಾಂಪಿಯನ್‌ಗಳ ಚಾಂಪಿಯನ್.  ಎಕ್ಸಲೆಂಟ್ ಅನ್ನೋದನ್ನು ಸಿಂಧೂ ಪದೆ ಪದೇ ಸಾಬೀತುಪಡಿಸಿದ್ದಾಳೆ. ಸಿಂಧೂ ಸಮರ್ಪಣೆ ಮತ್ತು ಬದ್ಧತೆ ವಿಸ್ಮಯಕಾರಿಯಾಗಿದೆ. ಚಿನ್ನ ಗೆದ್ದ ಸಿಂಧೂಗೆ ಅಭಿನಂದನೆಗಳು. ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆ ಎಂದು ಮೋದಿ ಟ್ವೀಟ್ ಮೂಲಕ ಶುಭಕೋರಿದ್ದಾರೆ.

andolana

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

11 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

11 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

11 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

11 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

11 hours ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

12 hours ago