ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್ : ಚಿನ್ನ ಗೆದ್ದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ

ಬರ್ಮಿಂಗ್‌ಹ್ಯಾಮ್ : ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ ಭಾರತ ಕೀರ್ತಿ ಪತಾಕೆ ಹಾರಿಸಿದ್ದಾರೆ. ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಪಿವಿ ಸಿಂಧೂ ಕೆನಡಾ ಮೈಕೆಲ್ ಲೀ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಫೈನಲ್ ಸುತ್ತಿನಲ್ಲಿ ಪಿವಿ ಸಿಂಧು 21-15, 21-13 ಅಂತರದಲ್ಲಿ ಕೆನಡಾ ಸ್ಪರ್ಧಿ ವಿರುದ್ಧ ಗೆಲುವು ದಾಖಲಿಸಿದ್ದಾರೆ. ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟ 2022ರಲ್ಲಿ ಭಾರತ ಗೆದ್ದ 19ನೇ ಚಿನ್ನದ ಪದಕವಾಗಿದೆ.  2014ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದ ಮೈಕೆಲ್ ಲೀ ಸದ್ಯ 13ನೇ ಶ್ರೇಯಾಂಕಿತರಾಗಿದ್ದಾರೆ. 2018ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಪಿವಿ ಸಿಂಧು ಫೈನಲ್ ಪಂದ್ಯದಲ್ಲಿ ಭಾರತದ ಮತ್ತೊಬ್ಬ ಶಟ್ಲರ್ ಸೈನಾ ನೆಹ್ವಾಲ್ ವಿರುದ್ಧ ಮುಗ್ಗರಿಸಿದ್ದರು. ಇದೀಗ ಕಾಮನ್‌ವೆಲ್ತ್ ಗೇಮ್ಸ್ ಕೂಟದಲ್ಲಿ ಸಿಂಧೂ ಚಿನ್ನದ ಪದಕ ಸಾಧನೆ ಮಾಡಿದ್ದಾರೆ. ಸಿಂಧೂ ಚಿನ್ನದ ಪದಕದ ಮೂಲಕ ಭಾರತ ಪಜಕ ಪಟ್ಟಿಯಲ್ಲಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದೆ. 19 ಚಿನ್ನ, 15 ಬೆಳ್ಳಿ ಹಾಗೂ 22 ಕಂಚಿನ ಪದಕದೊಂದಿಗೆ ಒಟ್ಟು 56 ಪದಕ ಗೆದ್ದುಕೊಂಡಿದೆ.

ಮೊದಲ ಸೆಟ್‌ನಲ್ಲಿ ಪಿವಿ ಸಿಂಧೂ ಪರಾಕ್ರಮ ತೋರಿದರು.  21-15 ಅಂತರದಲ್ಲಿ ಮೊದಲ ಸೆಟ್ ಗೆದ್ದುಕೊಂಡರು. ಎರಡನೇ ಸೆಟ್‌ನಲ್ಲಿ ಗೇಮ್‌ಬ್ರೇಕ್‌ನಲ್ಲಿ 11-6 ಅಂತರದಲ್ಲಿ ಮುನ್ನಡೆ ಪಡೆದ ಸಿಂಧೂ 21-13 ಅಂತರದಲ್ಲಿ ಪಂದ್ಯ ಫಿನೀಶ್ ಮಾಡಿದರು.

ಕ್ವಾರ್ಟರ್‌ ಫೈನಲ್‌ನಲ್ಲಿ ಮಾಜಿ ವಿಶ್ವ ಚಾಂಪಿಯನ್‌ ಸಿಂಧು, ಮಲೇಷ್ಯಾದ ಜಿನ್‌ ವೀ ಗೋ ವಿರುದ್ಧ 19-21, 21-14, 21-18 ಅಂತರದಲ್ಲಿ ಗೆಲುವು ದಾಖಲಿಸಿದ್ದರು. ಮೂಲಕ ಅಂತಿಮ 4ರ ಘಟ್ಟಪ್ರವೇಶಿಸಿದರು.  ಭಾನುವಾರ ಮಹಿಳಾ ಸಿಂಗಲ್ಸ್‌ ಸೆಮಿಫೈನಲ್‌ನಲ್ಲಿ ಸಿಂಗಾಪೂರದ ಯೋ ಜಿಯಾ ಮಿನ್‌ ಅವರನ್ನು 21-19, 21-17 ನೇರ ಗೇಮ್‌ಗಳಿಂದ ಮಣಿಸಿದ ಪಿವಿ ಸಿಂಧು ಫೈನಲ್ ಪ್ರವೇಶಿಸಿದ್ದರು.

ಸಿಂಧು ಚಿನ್ನ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ. ಪಿವಿ ಸಿಂಧೂ ಚಾಂಪಿಯನ್‌ಗಳ ಚಾಂಪಿಯನ್.  ಎಕ್ಸಲೆಂಟ್ ಅನ್ನೋದನ್ನು ಸಿಂಧೂ ಪದೆ ಪದೇ ಸಾಬೀತುಪಡಿಸಿದ್ದಾಳೆ. ಸಿಂಧೂ ಸಮರ್ಪಣೆ ಮತ್ತು ಬದ್ಧತೆ ವಿಸ್ಮಯಕಾರಿಯಾಗಿದೆ. ಚಿನ್ನ ಗೆದ್ದ ಸಿಂಧೂಗೆ ಅಭಿನಂದನೆಗಳು. ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆ ಎಂದು ಮೋದಿ ಟ್ವೀಟ್ ಮೂಲಕ ಶುಭಕೋರಿದ್ದಾರೆ.

andolana

Recent Posts

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

2 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

19 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

32 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

10 hours ago