ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್ : ಚಿನ್ನ ಗೆದ್ದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ

ಬರ್ಮಿಂಗ್‌ಹ್ಯಾಮ್ : ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ ಭಾರತ ಕೀರ್ತಿ ಪತಾಕೆ ಹಾರಿಸಿದ್ದಾರೆ. ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಪಿವಿ ಸಿಂಧೂ ಕೆನಡಾ ಮೈಕೆಲ್ ಲೀ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಫೈನಲ್ ಸುತ್ತಿನಲ್ಲಿ ಪಿವಿ ಸಿಂಧು 21-15, 21-13 ಅಂತರದಲ್ಲಿ ಕೆನಡಾ ಸ್ಪರ್ಧಿ ವಿರುದ್ಧ ಗೆಲುವು ದಾಖಲಿಸಿದ್ದಾರೆ. ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟ 2022ರಲ್ಲಿ ಭಾರತ ಗೆದ್ದ 19ನೇ ಚಿನ್ನದ ಪದಕವಾಗಿದೆ.  2014ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದ ಮೈಕೆಲ್ ಲೀ ಸದ್ಯ 13ನೇ ಶ್ರೇಯಾಂಕಿತರಾಗಿದ್ದಾರೆ. 2018ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಪಿವಿ ಸಿಂಧು ಫೈನಲ್ ಪಂದ್ಯದಲ್ಲಿ ಭಾರತದ ಮತ್ತೊಬ್ಬ ಶಟ್ಲರ್ ಸೈನಾ ನೆಹ್ವಾಲ್ ವಿರುದ್ಧ ಮುಗ್ಗರಿಸಿದ್ದರು. ಇದೀಗ ಕಾಮನ್‌ವೆಲ್ತ್ ಗೇಮ್ಸ್ ಕೂಟದಲ್ಲಿ ಸಿಂಧೂ ಚಿನ್ನದ ಪದಕ ಸಾಧನೆ ಮಾಡಿದ್ದಾರೆ. ಸಿಂಧೂ ಚಿನ್ನದ ಪದಕದ ಮೂಲಕ ಭಾರತ ಪಜಕ ಪಟ್ಟಿಯಲ್ಲಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದೆ. 19 ಚಿನ್ನ, 15 ಬೆಳ್ಳಿ ಹಾಗೂ 22 ಕಂಚಿನ ಪದಕದೊಂದಿಗೆ ಒಟ್ಟು 56 ಪದಕ ಗೆದ್ದುಕೊಂಡಿದೆ.

ಮೊದಲ ಸೆಟ್‌ನಲ್ಲಿ ಪಿವಿ ಸಿಂಧೂ ಪರಾಕ್ರಮ ತೋರಿದರು.  21-15 ಅಂತರದಲ್ಲಿ ಮೊದಲ ಸೆಟ್ ಗೆದ್ದುಕೊಂಡರು. ಎರಡನೇ ಸೆಟ್‌ನಲ್ಲಿ ಗೇಮ್‌ಬ್ರೇಕ್‌ನಲ್ಲಿ 11-6 ಅಂತರದಲ್ಲಿ ಮುನ್ನಡೆ ಪಡೆದ ಸಿಂಧೂ 21-13 ಅಂತರದಲ್ಲಿ ಪಂದ್ಯ ಫಿನೀಶ್ ಮಾಡಿದರು.

ಕ್ವಾರ್ಟರ್‌ ಫೈನಲ್‌ನಲ್ಲಿ ಮಾಜಿ ವಿಶ್ವ ಚಾಂಪಿಯನ್‌ ಸಿಂಧು, ಮಲೇಷ್ಯಾದ ಜಿನ್‌ ವೀ ಗೋ ವಿರುದ್ಧ 19-21, 21-14, 21-18 ಅಂತರದಲ್ಲಿ ಗೆಲುವು ದಾಖಲಿಸಿದ್ದರು. ಮೂಲಕ ಅಂತಿಮ 4ರ ಘಟ್ಟಪ್ರವೇಶಿಸಿದರು.  ಭಾನುವಾರ ಮಹಿಳಾ ಸಿಂಗಲ್ಸ್‌ ಸೆಮಿಫೈನಲ್‌ನಲ್ಲಿ ಸಿಂಗಾಪೂರದ ಯೋ ಜಿಯಾ ಮಿನ್‌ ಅವರನ್ನು 21-19, 21-17 ನೇರ ಗೇಮ್‌ಗಳಿಂದ ಮಣಿಸಿದ ಪಿವಿ ಸಿಂಧು ಫೈನಲ್ ಪ್ರವೇಶಿಸಿದ್ದರು.

ಸಿಂಧು ಚಿನ್ನ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ. ಪಿವಿ ಸಿಂಧೂ ಚಾಂಪಿಯನ್‌ಗಳ ಚಾಂಪಿಯನ್.  ಎಕ್ಸಲೆಂಟ್ ಅನ್ನೋದನ್ನು ಸಿಂಧೂ ಪದೆ ಪದೇ ಸಾಬೀತುಪಡಿಸಿದ್ದಾಳೆ. ಸಿಂಧೂ ಸಮರ್ಪಣೆ ಮತ್ತು ಬದ್ಧತೆ ವಿಸ್ಮಯಕಾರಿಯಾಗಿದೆ. ಚಿನ್ನ ಗೆದ್ದ ಸಿಂಧೂಗೆ ಅಭಿನಂದನೆಗಳು. ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆ ಎಂದು ಮೋದಿ ಟ್ವೀಟ್ ಮೂಲಕ ಶುಭಕೋರಿದ್ದಾರೆ.

andolana

Recent Posts

ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ 4 ತಾಸು ಲಾಕ್‌ ಆದ ವ್ಯಕ್ತಿ

ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…

26 mins ago

“ಸಿದ್ದರಾಮಯ್ಯ ಅನಿವಾರ್ಯತೆ” ವಿಚಾರವಾಗಿ ನಾಳೆ ಅಹಿಂದ ಸಮಾವೇಶ ಕುರಿತು ಸಭೆ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…

42 mins ago

ಮೈಸೂರು: ಬೀದಿನಾಯಿ ಹೊತ್ತೊಯ್ದ ಚಿರತೆ

ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…

1 hour ago

ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ ಚಿನ್ನ, ಬೆಳ್ಳಿ ಬೆಲೆ

ಬೆಂಗಳೂರು,- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಇಂದು ಪ್ರತೀ ಗ್ರಾಂ ಚಿನ್ನಕ್ಕೆ (24 ಕ್ಯಾರೆಟ್)…

1 hour ago

ಟೆಕ್ಸಾಸ್‌ ಕರಾವಳಿ ಬಳಿ ಮೆಕ್ಸಿಕನ್‌ ನೌಕಾಪಡೆ ವಿಮಾನ ಪತನ: 5 ಮಂದಿ ಸಾವು

ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್‌ ಬಳಿ ಪತನಗೊಂಡು…

2 hours ago

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ಪ್ರಕಾಶ್‌ ರಾಜ್‌ ಆಯ್ಕೆ

ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್‌ ರಾಜ್‌ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…

2 hours ago