ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್ : ಚಿನ್ನ ಗೆದ್ದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ

ಬರ್ಮಿಂಗ್‌ಹ್ಯಾಮ್ : ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ ಭಾರತ ಕೀರ್ತಿ ಪತಾಕೆ ಹಾರಿಸಿದ್ದಾರೆ. ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಪಿವಿ ಸಿಂಧೂ ಕೆನಡಾ ಮೈಕೆಲ್ ಲೀ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಫೈನಲ್ ಸುತ್ತಿನಲ್ಲಿ ಪಿವಿ ಸಿಂಧು 21-15, 21-13 ಅಂತರದಲ್ಲಿ ಕೆನಡಾ ಸ್ಪರ್ಧಿ ವಿರುದ್ಧ ಗೆಲುವು ದಾಖಲಿಸಿದ್ದಾರೆ. ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟ 2022ರಲ್ಲಿ ಭಾರತ ಗೆದ್ದ 19ನೇ ಚಿನ್ನದ ಪದಕವಾಗಿದೆ.  2014ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದ ಮೈಕೆಲ್ ಲೀ ಸದ್ಯ 13ನೇ ಶ್ರೇಯಾಂಕಿತರಾಗಿದ್ದಾರೆ. 2018ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಪಿವಿ ಸಿಂಧು ಫೈನಲ್ ಪಂದ್ಯದಲ್ಲಿ ಭಾರತದ ಮತ್ತೊಬ್ಬ ಶಟ್ಲರ್ ಸೈನಾ ನೆಹ್ವಾಲ್ ವಿರುದ್ಧ ಮುಗ್ಗರಿಸಿದ್ದರು. ಇದೀಗ ಕಾಮನ್‌ವೆಲ್ತ್ ಗೇಮ್ಸ್ ಕೂಟದಲ್ಲಿ ಸಿಂಧೂ ಚಿನ್ನದ ಪದಕ ಸಾಧನೆ ಮಾಡಿದ್ದಾರೆ. ಸಿಂಧೂ ಚಿನ್ನದ ಪದಕದ ಮೂಲಕ ಭಾರತ ಪಜಕ ಪಟ್ಟಿಯಲ್ಲಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದೆ. 19 ಚಿನ್ನ, 15 ಬೆಳ್ಳಿ ಹಾಗೂ 22 ಕಂಚಿನ ಪದಕದೊಂದಿಗೆ ಒಟ್ಟು 56 ಪದಕ ಗೆದ್ದುಕೊಂಡಿದೆ.

ಮೊದಲ ಸೆಟ್‌ನಲ್ಲಿ ಪಿವಿ ಸಿಂಧೂ ಪರಾಕ್ರಮ ತೋರಿದರು.  21-15 ಅಂತರದಲ್ಲಿ ಮೊದಲ ಸೆಟ್ ಗೆದ್ದುಕೊಂಡರು. ಎರಡನೇ ಸೆಟ್‌ನಲ್ಲಿ ಗೇಮ್‌ಬ್ರೇಕ್‌ನಲ್ಲಿ 11-6 ಅಂತರದಲ್ಲಿ ಮುನ್ನಡೆ ಪಡೆದ ಸಿಂಧೂ 21-13 ಅಂತರದಲ್ಲಿ ಪಂದ್ಯ ಫಿನೀಶ್ ಮಾಡಿದರು.

ಕ್ವಾರ್ಟರ್‌ ಫೈನಲ್‌ನಲ್ಲಿ ಮಾಜಿ ವಿಶ್ವ ಚಾಂಪಿಯನ್‌ ಸಿಂಧು, ಮಲೇಷ್ಯಾದ ಜಿನ್‌ ವೀ ಗೋ ವಿರುದ್ಧ 19-21, 21-14, 21-18 ಅಂತರದಲ್ಲಿ ಗೆಲುವು ದಾಖಲಿಸಿದ್ದರು. ಮೂಲಕ ಅಂತಿಮ 4ರ ಘಟ್ಟಪ್ರವೇಶಿಸಿದರು.  ಭಾನುವಾರ ಮಹಿಳಾ ಸಿಂಗಲ್ಸ್‌ ಸೆಮಿಫೈನಲ್‌ನಲ್ಲಿ ಸಿಂಗಾಪೂರದ ಯೋ ಜಿಯಾ ಮಿನ್‌ ಅವರನ್ನು 21-19, 21-17 ನೇರ ಗೇಮ್‌ಗಳಿಂದ ಮಣಿಸಿದ ಪಿವಿ ಸಿಂಧು ಫೈನಲ್ ಪ್ರವೇಶಿಸಿದ್ದರು.

ಸಿಂಧು ಚಿನ್ನ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ. ಪಿವಿ ಸಿಂಧೂ ಚಾಂಪಿಯನ್‌ಗಳ ಚಾಂಪಿಯನ್.  ಎಕ್ಸಲೆಂಟ್ ಅನ್ನೋದನ್ನು ಸಿಂಧೂ ಪದೆ ಪದೇ ಸಾಬೀತುಪಡಿಸಿದ್ದಾಳೆ. ಸಿಂಧೂ ಸಮರ್ಪಣೆ ಮತ್ತು ಬದ್ಧತೆ ವಿಸ್ಮಯಕಾರಿಯಾಗಿದೆ. ಚಿನ್ನ ಗೆದ್ದ ಸಿಂಧೂಗೆ ಅಭಿನಂದನೆಗಳು. ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆ ಎಂದು ಮೋದಿ ಟ್ವೀಟ್ ಮೂಲಕ ಶುಭಕೋರಿದ್ದಾರೆ.

andolana

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

2 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

12 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

16 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

16 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

17 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

21 hours ago